ಉಡುಪಿ  : ಬಕ್ರೀದ್  ಆಚರಣೆಯ ಸಂದರ್ಭ ಅನಧಿಕೃತ ಜಾನುವಾರುಗಳ ವಧೆ, ಸಾಗಾಣಿಕೆ ನಿಷೇಧ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24

Featured, ಉಡುಪಿ

 ಉಡುಪಿ  : ಬಕ್ರೀದ್  ಆಚರಣೆಯ ಸಂದರ್ಭ ಅನಧಿಕೃತ ಜಾನುವಾರುಗಳ ವಧೆ, ಸಾಗಾಣಿಕೆ ನಿಷೇಧ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24

ಉಡುಪಿ : ಜಿಲ್ಲೆಯಲ್ಲಿ ಜುಲೈ 10 ರಂದು ಆಚರಿಸಲಾಗುವ ಬಕ್ರೀದ್ ಹಬ್ಬ ಆಚರಣೆಯ ಸಂದರ್ಭದಲ್ಲಿ ಅನಧೀಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ನಿಷೇಧಿಸಲಾಗಿದ್ದು,  ಗೋಹತ್ಯೆ ನಿಷೇಧ ಕಾಯ್ದೆಯಡಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು ಇರಿಸುವಂತೆ ಸಂಬAಧಪಟ್ಟ ಇಲಾಖೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು.

ಅವರು ಇಂದು ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ, ಬಕ್ರೀದ್ ಹಬ್ಬ ಆಚರಣೆ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ರಚಿಸಿರುವ ಜಿಲ್ಲಾ ಸಮಿತಿಯೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಾದ್ಯಂತ ಇರುವ ಚೆಕ್ ಪೋಸ್ಟ್ಗಳಲ್ಲಿ ಅನಧಿಕೃತವಾಗಿ ಜಾನುವಾರುಗಳು ಸಾಗಾಣಿಕೆ ಆಗದಂತೆ ನಿಗಾ ಇರಿಸುವಂತೆ ಸೂಚಿಸಿದ ಅವರು, ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ತಿಳಿಸಿದರು.

ಅನಧಿಕೃತವಾಗಿ  ಸಾಗಾಟ ಮಾಡುತ್ತಿದ್ದ  ಜಾನುವಾರುಗಳನ್ನು ವಶಪಡಿಸಿಕೊಂಡಲ್ಲಿ ಅವುಗಳ ರಕ್ಷಣೆಗಾಗಿ ಗುರುತಿಸಿದ ಗೋಶಾಲೆಗಳಲ್ಲಿ ಸಂರಕ್ಷಣೆ ಮಾಡುವಂತೆ ಸಂಬAಧಿಸಿದ ಇಲಾಖೆಗೆ ಸೂಚಿಸಿದರು. ಗೋಹತ್ಯೆ ಜಾನುವಾರು ಸಾಗಾಣಿಕೆ ಕಂಡುಬAದಲ್ಲಿ ಸಾರ್ವಜನಿಕರು ಹತ್ತಿರದ ಪೋಲೀಸ್ ಠಾಣೆ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದರು.

ಬಕ್ರಿದ್ ಹಬ್ಬದ ಧಾರ್ಮಿಕ ಆಚರಣೆಯಲ್ಲಿ ಕಾನೂನು ಸುವ್ಯವಸ್ಥೆಗೆ ಲೋಪವಾಗದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಪಶು ಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಶಂಕರ್ ಶೆಟ್ಟಿ ಹಾಗೂ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಾದ್ಯಂತ ಭಾರೀ ಮಳೆ : 13 ಜಿಲ್ಲೆಗಳಲ್ಲಿ ಪ್ರವಾಹ ; ಮನೆಗೆ ಹಾನಿಯಾದರೆ 10 ಸಾವಿರ ರೂ. ತುರ್ತು ಪರಿಹಾರ : ಸಿಎಂ ಬೊಮ್ಮಾಯಿ ಆದೇಶ – Vishwanews24

 

Leave a Reply