ಉಡುಪಿ : ಜಿಲ್ಲೆಯಲ್ಲಿ ಜುಲೈ 10 ರಂದು ಆಚರಿಸಲಾಗುವ ಬಕ್ರೀದ್ ಹಬ್ಬ ಆಚರಣೆಯ ಸಂದರ್ಭದಲ್ಲಿ ಅನಧೀಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ನಿಷೇಧಿಸಲಾಗಿದ್ದು, ಗೋಹತ್ಯೆ ನಿಷೇಧ ಕಾಯ್ದೆಯಡಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು ಇರಿಸುವಂತೆ ಸಂಬAಧಪಟ್ಟ ಇಲಾಖೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು.
ಅವರು ಇಂದು ನಗರದ ಜಿಲ್ಲಾಧಿಕಾರಿ ಕಛೇರಿಯಲ್ಲಿ, ಬಕ್ರೀದ್ ಹಬ್ಬ ಆಚರಣೆ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟಲು ರಚಿಸಿರುವ ಜಿಲ್ಲಾ ಸಮಿತಿಯೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಾದ್ಯಂತ ಇರುವ ಚೆಕ್ ಪೋಸ್ಟ್ಗಳಲ್ಲಿ ಅನಧಿಕೃತವಾಗಿ ಜಾನುವಾರುಗಳು ಸಾಗಾಣಿಕೆ ಆಗದಂತೆ ನಿಗಾ ಇರಿಸುವಂತೆ ಸೂಚಿಸಿದ ಅವರು, ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ತಿಳಿಸಿದರು.
ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಜಾನುವಾರುಗಳನ್ನು ವಶಪಡಿಸಿಕೊಂಡಲ್ಲಿ ಅವುಗಳ ರಕ್ಷಣೆಗಾಗಿ ಗುರುತಿಸಿದ ಗೋಶಾಲೆಗಳಲ್ಲಿ ಸಂರಕ್ಷಣೆ ಮಾಡುವಂತೆ ಸಂಬAಧಿಸಿದ ಇಲಾಖೆಗೆ ಸೂಚಿಸಿದರು. ಗೋಹತ್ಯೆ ಜಾನುವಾರು ಸಾಗಾಣಿಕೆ ಕಂಡುಬAದಲ್ಲಿ ಸಾರ್ವಜನಿಕರು ಹತ್ತಿರದ ಪೋಲೀಸ್ ಠಾಣೆ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದರು.
ಬಕ್ರಿದ್ ಹಬ್ಬದ ಧಾರ್ಮಿಕ ಆಚರಣೆಯಲ್ಲಿ ಕಾನೂನು ಸುವ್ಯವಸ್ಥೆಗೆ ಲೋಪವಾಗದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಪಶು ಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಶಂಕರ್ ಶೆಟ್ಟಿ ಹಾಗೂ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…