Featured

ಉಡುಪಿ: ಬಕ್ರೀದ್ ಆಚರಣೆ ಸಂದರ್ಭ ಅನಧಿಕೃತ ಪ್ರಾಣಿ ವಧೆ ಹಾಗೂ ಸಾಗಾಣಿಕೆ ತಡೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24

ಉಡುಪಿ: ಬಕ್ರೀದ್ ಆಚರಣೆ ಸಂದರ್ಭ ಅನಧಿಕೃತ ಪ್ರಾಣಿ ವಧೆ ಹಾಗೂ ಸಾಗಾಣಿಕೆ ತಡೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದ ಆಚರಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಲೋಪ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.

ಅವರು ಶನಿವಾರ ವರ್ಚುವಲ್ ಮೂಲಕ ಬಕ್ರೀದ್ ಆಚರಣೆ ಸಂದರ್ಭ ಅನಧಿಕೃತವಾಗಿ ಜಾನುವಾರಗಳ ವಧೆ ಹಾಗೂ ಸಾಗಾಣಿಕೆ ತಡೆಗಟ್ಟಲು ರಚಿಸಿರುವ ಜಿಲ್ಲಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅನಧಿಕೃತ ಪ್ರಾಣಿ ವಧೆ ತಡೆಯಲು ಗೋಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ ವಿವಿಧ ತಂಡಗಳನ್ನು ರಚಿಸಿ, ಕಣ್ಗಾವಲು ಇಡುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಿದರು. ಜಿಲ್ಲೆಯಾದ್ಯಂತ ನಿಯೋಜಿಸಲಾದ ಚೆಕ್‍ಪೋಸ್ಟ್‍ಗಳಲ್ಲಿ, ಅನಧಿಕೃತವಾಗಿ ಜಾನುವಾರುಗಳು ಸಾಗಾಣಿಕೆ ಆಗದಂತೆ ನಿಗಾ ವಹಿಸಬೇಕು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ವಹಿಸಬೇಕು ಎಂದರು.

ಅನಧಿಕೃತವಾಗಿ ಜಾನುವಾರುಗಳನ್ನು ವಶಪಡಿಸಿಕೊಂಡಲ್ಲಿ ಅವುಗಳ ರಕ್ಷಣೆಗಾಗಿ ಗುರುತಿಸಲಾದ ಗೋಶಾಲೆಗಳಲ್ಲಿ ಸಂರಕ್ಷಣೆ ಮಾಡುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಅವರು, ಈ ತರಹದ ಪ್ರಕರಣಗಳು ಕಂಡುಬಂದಲ್ಲಿ ಸಾರ್ವಜನಿಕರು ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಎಂ ಹಾಕೆ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್, ನಗರಸಭೆ ಪೌರಾಯುಕ್ತ ರಮೇಶ್ ನಾಯಕ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಶಂಕರ್ ಶೆಟ್ಟಿ, ವಿವಿಧ ತಾಲೂಕುಗಳ ತಹಶೀಲ್ದಾರ್‍ಗಳು, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

24 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

1 hour ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago