ಉಡುಪಿ: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು 2024-25ನೇ ಸಾಲಿನಲ್ಲಿ 2,935 ಕೋಟಿ ರೂ. ವಾರ್ಷಿಕ ವಹಿವಾಟು ನಡೆಸಿ 19.37 ಕೋಟಿ ರೂ. ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.
ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 107 ವರ್ಷಗಳಿಂದ ಸಾರ್ಥಕ ಸೇವೆಯನ್ನು ನೀಡುತ್ತಿರುವ ಸಂಘವು 2024-25 ಆರ್ಥಿಕ ವರ್ಷಾಂತ್ಯಕ್ಕೆ 21,519 ಸದಸ್ಯರಿಂದ 4.83 ಕೋ.ರೂ ಪಾಲು ಬಂಡವಾಳ ಹೊಂದಿದೆ. 1,050 ಕೋಟಿ ರೂ. ವ್ಯವಹಾರ ವರದಿ ವರ್ಷಾಂತ್ಯಕ್ಕೆ ಸಂಘವು ಒಟ್ಟು 573 ಕೋಟಿ ರೂ. ಠೇವಣಿ ಸಂಗ್ರಹಿಸಿದೆ. ಕಳೆದ ಸಾಲಿಗಿಂತ ಶೇ.12.45 ಏರಿಕೆ ಕಂಡಿದೆ ಎಂದರು.
ಸದಸ್ಯರಿಗೆ ವಿವಿಧ ಸಾಲವನ್ನು ವಿತರಿಸುತ್ತಿದ್ದು ವರದಿ ವರ್ಷಾಂತ್ಯಕ್ಕೆ 477 ಕೋಟಿ ರೂ. ಸದಸ್ಯರ ಹೊರಬಾಕಿ ಸಾಲ ಇದ್ದು, ಕಳೆದ ಸಾಲಿಗಿಂತ ಶೇ.18.62 ಏರಿಕೆ ಕಂಡಿದೆ. 95.18 ಕೋ.ರೂ ನಿಧಿಗಳು, 229.73ಕೋಟಿ ರೂ ಹೂಡಿಕೆಗಳು ಇದ್ದು, 673.20 ಕೋಟಿ ರೂ. ದುಡಿಯುವ ಬಂಡವಾಳವನ್ನು ಹೊಂದಿದೆ ಎಂದು ಅವರು ಹೇಳಿದರು.ಸಂಘವು ತನ್ನ ಕಾರ್ಯಕ್ಷೇತ್ರದಲ್ಲಿ 11 ಶಾಖೆಗಳನ್ನು ಹೊಂದಿದ್ದು ಈ ಪೈಕಿ 8 ಶಾಖೆಗಳು ಸಂಘದ ಸ್ವಂತ ನಿವೇಶನದಲ್ಲಿವೆ. 12ನೇ ಶಾಖೆಯಾಗಿ ಕುಂದಾಪುರದ ಹೃದಯಭಾಗದಲ್ಲಿ ಸ್ವಂತ ಕಛೇರಿಯನ್ನು ಈಗಾಗಲೇ ಖರೀದಿಸ ಲಾಗಿದ್ದು, ಸದ್ಯದಲ್ಲೇ ಗ್ರಾಹಕರ ಸೇವೆಗೆ ಲಭ್ಯವಾಗಲಿದೆ. ವಾರ್ಷಿಕ ಸುಮಾರು 20 ಲಕ್ಷ ರೂ.ನಷ್ಟು ಹಣವನ್ನು ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ ವಿನಿಯೋಗಿಸಲಾಗುತ್ತದೆ ಎಂದರು.
ಮುಂದಿನ ವರದಿ ವರ್ಷದಲ್ಲಿ 800 ಕೋಟಿ ರೂ. ಠೇವಣಿ, 700 ಕೋಟಿ ರೂ. ಹೊರಬಾಕಿ ಸಾಲ ಅಂದರೆ ಒಟ್ಟು 1,500 ಕೋಟಿ ರೂ. ವ್ಯವಹಾರ ನಡೆಸುವ ಗುರಿ ಹೊಂದಿದೆ. ಉಡುಪಿಯ ಹೃದಯ ಭಾಗದಲ್ಲಿ ಈಗಾಗಲೇ ಖರೀದಿಸಿರುವ 1 ಎಕ್ರೆ ಆಸ್ತಿಯಲ್ಲಿ 10ಕೋಟಿ ರೂ. ವೆಚ್ಚದಲ್ಲಿ ಸಹಕಾರ ಸೌಧ ನಿರ್ಮಾಣದ ಯೋಜನೆಯನ್ನು ಹಮ್ಮಿಕೊಂಡಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಜಾರ್ಜ್ ಸಾಮ್ಯುಯೆಲ್, ಆಡಳಿತ ಮಂಡಳಿ ಸದಸ್ಯರಾದ ಉಮಾನಾಥ ಎಲ್., ವಿನಯ ಕುಮಾರ್ ಟಿ.ಎ, ಪದ್ಮನಾಭ ನಾಯಕ್, ಸದಾಶಿವ ನಾಯ್ಕಿ, ಮನೋಹರ ಎಸ್. ಶೆಟ್ಟಿ, ಜಯಾ ಶೆಟ್ಟಿ, ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್, ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.
ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…