Featured

ಉಡುಪಿ : ಬಡಗಬೆಟ್ಟು ಕ್ರೆಡಿಟ್ ಕೋ ಆ.ಸೊಸೈಟಿಗೆ 15.23 ಕೋ.ರೂ. ನಿವ್ವಳ ಲಾಭ – vishwanews24

ಉಡುಪಿ : ಬಡಗಬೆಟ್ಟು ಕ್ರೆಡಿಟ್ ಕೋ ಆ.ಸೊಸೈಟಿಗೆ 15.23 ಕೋ.ರೂ. ನಿವ್ವಳ ಲಾಭ ; ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

ಉಡುಪಿ : ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು 2023-24ನೆ ಸಾಲಿನಲ್ಲಿ 15.23 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಸಂಘದ ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಲಾಗಿದೆ.

ಉಡುಪಿ ಅಜ್ಜರಕಾಡು ಪುರಭವನದಲ್ಲಿ ರವಿವಾರ ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಘೋಷಣೆ ಮಾಡಲಾಯಿತು.

ಸಂಘದ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ವಾರ್ಷಿಕ ವರದಿ ಹಾಗೂ ಲೆಕ್ಕಪತ್ರಗಳನ್ನು ಮಂಡಿಸಿದರು. ವರದಿ ಸಾಲಿನ ಅಂತ್ಯಕ್ಕೆ ಸಂಘವು ಒಟ್ಟು 18,309 ಸದಸ್ಯರಿಂದ 4.77ಕೋಟಿ ರೂ. ಪಾಲು ಬಂಡವಾಳ ಹಾಗೂ 509.55 ಕೋಟಿ ರೂ. ಠೇವಣಿ ಹೊಂದಿದ್ದು, 402.12ಕೋಟಿ ರೂ. ಹೊರ ಬಾಕಿ ಸಾಲ ಹೊಂದಿದೆ. ಈ ಮೂಲಕ ಸಂಘವು 2023-24ನೇ ಸಾಲಿನಲ್ಲಿ ಸುಮಾರು 2500ಕೋಟಿ ರೂ.ಗೂ ಮೇಲ್ಪಟ್ಟು ವಾರ್ಷಿಕ ವಹಿವಾಟು ನಡೆಸಿದೆ ಎಂದು ಅವರು ತಿಳಿಸಿದರು. ಈ ಸಂದರ್ಭ ನಗರಸಭೆಯ ಆಯ್ದ 24 ಪೌರಕಾರ್ಮಿಕರ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಸಂಘದ ಉಪಾಧ್ಯಕ್ಷ ಜಾರ್ಜ್ ಸ್ಯಾಮುವೆಲ್, ಆಡಳಿತ ಮಂಡಳಿ ಸದಸ್ಯರಾದ ಎಲ್.ಉಮಾನಾಥ, ಪುರುಷೋತ್ತಮ ಶೆಟ್ಟಿ, ಹಾಜಿ ಸಯ್ಯದ್ ಅಬ್ದುಲ್ ರಜಾಕ್, ವಿನಯ ಕುಮಾರ್ ಟಿ.ಎ., ಪದ್ಮನಾಭ ಕೆ.ನಾಯಕ್, ಸದಾಶಿವ ನಾಯ್ಕ್, ಮನೋಹರ್ ಎಸ್.ಶೆಟ್ಟಿ, ಸಾಧು ಸಾಲ್ಯಾನ್, ಜಯಾ ಶೆಟ್ಟಿ, ಗಾಯತ್ರಿ ಎಸ್.ಭಟ್ ಉಪಸ್ಥಿತರಿದ್ದರು.

ಸಂಘದ ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ವಂದಿಸಿದರು. ಮಲ್ಪೆ ಶಾಖಾ ವ್ಯವಸ್ಥಾಪಕ ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

21 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

21 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

22 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

23 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

24 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago