ಉಡುಪಿ : ಬಡಗು ತಿಟ್ಟಿನ ಹಿರಿಯ ವೇಷಧಾರಿ ಅನಂತ ಕುಲಾಲ (೬೬ ವರ್ಷ) ಕಳೆದ ಆರು ತಿಂಗಳಿನಿ0ದ ಅಸೌಖ್ಯದಲ್ಲಿದ್ದ ಇವರು ನಿನ್ನೆ (೧೨-೧೦-೨೦೨೧) ತಡರಾತ್ರಿ ಕುಂದಾಪುರ ತಾಲೂಕಿನ ಮೊಳಹಳ್ಳಿಯಲ್ಲಿ ನಿಧನ ಹೊಂದಿದರು.
ಇವರು ಉಡುಪಿ ಯಕ್ಷಗಾನ ಕೇಂದ್ರದಲ್ಲಿ ಗುರು ವೀರಭದ್ರ ನಾಯಕರಲ್ಲಿ ಯಕ್ಷಗಾನ ಕುಣಿತ ಆಭ್ಯಾಸ ಮಾಡಿ, ಹಳ್ಳಾಡಿ ಮಂಜಯ್ಯ ಶೆಟ್ಟಿ ಮತ್ತು ಹಳ್ಳಾಡಿ ಕೃಷ್ಣರಲ್ಲಿ ಮಾತುಗಾರಿಕೆ, ರಂಗತAತ್ರ ಕಲಿತು ಪ್ರೌಢ ಪುರುಷ ವೇಷಧಾರಿಯಾಗಿ ರೂಪುಗೊಂಡರು. ಅಮೃತೇಶ್ವರೀ, ಹಿರಿಯಡಕ, ಸಾಲಿಗ್ರಾಮ, ಪೆರ್ಡೂರು, ಹಾಲಾಡಿ, ಮಾರಣಕಟ್ಟೆ ಮೇಳಗಳಲ್ಲಿ ಸುಮಾರು ಐದು ದಶಕಗಳ ಕಾಲ ವೈವಿಧ್ಯಮಯ ವೇಷಗಳನ್ನು ಮಾಡುತ್ತಾ ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು.
ಕೇವಲ ಮಾರಣಕಟ್ಟೆ ಮೇಳವೊಂದರಲ್ಲಿ ನಾಲ್ಕು ದಶಕಗಳ ಕಾಲ ಕಲಾಸೇವೆಗೈದಿದ್ದರು. ಕಳೆದ ವರ್ಷ ಯಕ್ಷಗಾನ ಕಲಾರಂಗವು ಡಾ. ಬಿ. ಬಿ. ಶೆಟ್ಟಿ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ನೀಡಿ ಅವರನ್ನು ಸಮ್ಮಾನಿಸಿತ್ತು. ಕಳೆದ ತಿಂಗಳು ಎಮ್. ಎಮ್. ಹೆಗಡೆ ಪ್ರಶಸ್ತಿಯನ್ನು ಪಿ. ಕಿಶನ್ ಹೆಗ್ಡೆಯವರ ನೇತೃತ್ವದಲ್ಲಿ ಅವರ ಮನೆಯಲ್ಲೆ ನೀಡಿ ಗೌರವಿಸಲಾಗಿತ್ತು. ಇವರು ಪತ್ನಿ, ನಾಲ್ವರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಮ್. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತ ಪಡಿಸಿದ್ದಾರೆ.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…