ಉಡುಪಿ : ಬಡಗು ತಿಟ್ಟಿನ ಹಿರಿಯ ವೇಷಧಾರಿ ಅನಂತ ಕುಲಾಲ (೬೬ ವರ್ಷ) ಕಳೆದ ಆರು ತಿಂಗಳಿನಿ0ದ ಅಸೌಖ್ಯದಲ್ಲಿದ್ದ ಇವರು ನಿನ್ನೆ (೧೨-೧೦-೨೦೨೧) ತಡರಾತ್ರಿ ಕುಂದಾಪುರ ತಾಲೂಕಿನ ಮೊಳಹಳ್ಳಿಯಲ್ಲಿ ನಿಧನ ಹೊಂದಿದರು.
ಇವರು ಉಡುಪಿ ಯಕ್ಷಗಾನ ಕೇಂದ್ರದಲ್ಲಿ ಗುರು ವೀರಭದ್ರ ನಾಯಕರಲ್ಲಿ ಯಕ್ಷಗಾನ ಕುಣಿತ ಆಭ್ಯಾಸ ಮಾಡಿ, ಹಳ್ಳಾಡಿ ಮಂಜಯ್ಯ ಶೆಟ್ಟಿ ಮತ್ತು ಹಳ್ಳಾಡಿ ಕೃಷ್ಣರಲ್ಲಿ ಮಾತುಗಾರಿಕೆ, ರಂಗತAತ್ರ ಕಲಿತು ಪ್ರೌಢ ಪುರುಷ ವೇಷಧಾರಿಯಾಗಿ ರೂಪುಗೊಂಡರು. ಅಮೃತೇಶ್ವರೀ, ಹಿರಿಯಡಕ, ಸಾಲಿಗ್ರಾಮ, ಪೆರ್ಡೂರು, ಹಾಲಾಡಿ, ಮಾರಣಕಟ್ಟೆ ಮೇಳಗಳಲ್ಲಿ ಸುಮಾರು ಐದು ದಶಕಗಳ ಕಾಲ ವೈವಿಧ್ಯಮಯ ವೇಷಗಳನ್ನು ಮಾಡುತ್ತಾ ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು.
ಕೇವಲ ಮಾರಣಕಟ್ಟೆ ಮೇಳವೊಂದರಲ್ಲಿ ನಾಲ್ಕು ದಶಕಗಳ ಕಾಲ ಕಲಾಸೇವೆಗೈದಿದ್ದರು. ಕಳೆದ ವರ್ಷ ಯಕ್ಷಗಾನ ಕಲಾರಂಗವು ಡಾ. ಬಿ. ಬಿ. ಶೆಟ್ಟಿ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ನೀಡಿ ಅವರನ್ನು ಸಮ್ಮಾನಿಸಿತ್ತು. ಕಳೆದ ತಿಂಗಳು ಎಮ್. ಎಮ್. ಹೆಗಡೆ ಪ್ರಶಸ್ತಿಯನ್ನು ಪಿ. ಕಿಶನ್ ಹೆಗ್ಡೆಯವರ ನೇತೃತ್ವದಲ್ಲಿ ಅವರ ಮನೆಯಲ್ಲೆ ನೀಡಿ ಗೌರವಿಸಲಾಗಿತ್ತು. ಇವರು ಪತ್ನಿ, ನಾಲ್ವರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಅವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಮ್. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತ ಪಡಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…