ಉಡುಪಿ: ಬಡವರ ಏಳಿಗೆಗಾಗಿ ಸದಾ ಶ್ರಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆ,ಬಡವರಿಗೆ ಅವರ ಮೇಲಿರುವ ಪ್ರೀತಿ, ಸಿದ್ಧರಾಮಯ್ಯ ಅವರು ತಮ್ಮ ವಿರುದ್ಧ ನಡೆಯುತ್ತಿರುವ ಎಲ್ಲಾ ರೀತಿಯ ಪಿತೂರಿಗಳನ್ನು ನಿರ್ಭೀತರಾಗಿ ಎದುರಿಸುತ್ತಿರುವ ರೀತಿ ಇದೆಲ್ಲವನ್ನೂ ಸಹಿಸಲಾಗದೇ ಮಾನ್ಯ ಸಿದ್ಧರಾಮಯ್ಯ ಅವರನ್ನು ಸದೆಬಡಿಯಲು ಬಿಜೆಪಿ ಹಾಕಿಕೊಂಡಿರುವ ಯೋಜನೆ ಎಂದಿಗೂ ನನಸಾಗುವುದಿಲ್ಲ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ಅವರು ಹೇಳಿದ್ದಾರೆ.
ಸಿದ್ಧರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆಯನ್ನು ಎಲ್ಲರೂ ಖಂಡಿಸಬೇಕಾಗಿದೆ . ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಬಿಜೆಪಿಯ ಕೈಗೊಂಬೆಗಳಂತೆ ಕೆಲಸ ಮಾಡುತ್ತಿರುವುದು ಈ ದೇಶದ ದುರಂತ.ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ರಮೇಶ್ ಜಾರಕಿಹೊಳಿ, ಯಡಿಯೂರಪ್ಪ ಮುಂತಾದವರ ಮೇಲೆ ಅದೆಷ್ಟೋ ಆರೋಪಗಳಿದ್ದರೂ ಯಾವುದೇ ಪ್ರತಿಕ್ರಿಯೆ ನೀಡದೇ ರಾಜ್ಯಪಾಲರು ಸಿದ್ಧರಾಮಯ್ಯ ಅವರ ವಿಷಯದಲ್ಲಿ ಯಾವುದೇ ರೀತಿಯ ಆರೋಪ ಸಾಬೀತಾಗಿರದಿದ್ದರೂ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ಹೇಗೆ? ಮುಡಾ ಹಗರಣದಲ್ಲಿ ಬಿಜೆಪಿಯ ಪಾಲೆಷ್ಟು? ಭ್ರಷ್ಟಾಚಾರದಲ್ಲಿ ಸಿದ್ಧ ಹಸ್ತರೆನಿಸಿಕೊಂಡಿರುವ ಬಿಜೆಪಿಗರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರದ ದಿನಗಳಲ್ಲಿ ತಾವು ಬಹಳ ಶುದ್ಧ ಹಸ್ತರು ಎಂಬಂತೆ ಬಿಂಬಿಸತೊಡಗಿರುವುದು ಆಶ್ಚರ್ಯ ತರಿಸುತ್ತಿದೆ.
ಬಿಜೆಪಿಗರ ಈ ವರ್ತನೆ ನೋಡಿದರೆ ಅವರಿಗೆ ಯಾವುದೇ ಹಗರಣದ ಚಿಂತೆ ಇಲ್ಲ,ಅವರಿಗೆ ಬೇಕಾಗಿರುವುದು ಒಂದೇ, ಅದು ಪ್ರಸ್ತುತ ಸರ್ಕಾರವನ್ನು ಅಸ್ತಿರಗೊಳಿಸಿ ಬೀಳಿಸೋದು, ಜೊತೆಗೇ ಸಿದ್ಧರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದು. ಇದೇ ಉದ್ದೇಶದಿಂದ ಈಗ ರಾಜ್ಯಪಾಲರನ್ನು ದಾಳವಾಗಿ ಉಪಯೋಗಿಸಿ ಸಿದ್ಧರಾಮಯ್ಯ ಅವರನ್ನು ಕೆಳಗಿಳಿಸುವ ಕನಸು ಕಾಣುತ್ತಿದ್ದಾರೆ.ಆದರೆ ಇದು ಎಂದಿಗೂ ಸಾಧ್ಯವಾಗದು. ಸಿದ್ಧರಾಮಯ್ಯ ಅವರೊಂದಿಗೆ ಕೋಟ್ಯಂತರ ಬಡ ಮತದಾರರರಿದ್ದಾರೆ. ಅವರ ಆಶೀರ್ವಾದವಿದೆ. ಗ್ಯಾರಂಟಿ ಯೋಜನೆಗಳ ಮೂಲಕ ಲಕ್ಷಾಂತರ ಮತದಾರರನ್ನು ಅವರು ತಲುಪಿದ್ದಾರೆ. ಅವರ ಒಳ್ಳೆಯತನ ಎಂದಿಗೂ ಅವರನ್ನು ಬಿಡದು ಎಂದು ಗೀತಾ ವಾಗ್ಳೆ ಭರವಸೆ ವ್ಯಕ್ತಪಡಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…