Featured

ಉಡುಪಿ:  ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಳ ಬ್ರಹ್ಮಕಲಶೋತ್ಸವ: ಮನೆ ಮನೆಗೆ ಕಾಣಿಕೆ ಡಬ್ಬಿ, ಆಮಂತ್ರಣ ಪತ್ರಿಕೆ ಬಿಡುಗಡೆ – vishwanews24

ಉಡುಪಿ:  ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಳ ಬ್ರಹ್ಮಕಲಶೋತ್ಸವ: ಮನೆ ಮನೆಗೆ ಕಾಣಿಕೆ ಡಬ್ಬಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.16ರಿಂದ 20ರವರೆಗೆ ಬ್ರಹ್ಮಕಲಶೋತ್ಸವ ವೈಭವ 2026 ಅದ್ಧೂರಿ ಯಾಗಿ ನಡೆಯಲಿದ್ದು, ದೇವತಾ ಕಾರ್ಯ ದ ಪೂರ್ವಭಾವಿಯಾಗಿ ಮನೆಮನೆಗೆ ಕಾಣಿಕೆ ಡಬ್ಬಿ, ಆಮಂತ್ರಣ ಪತ್ರಿಕೆ ಹಾಗೂ ಪ್ರಚಾರದ ಸ್ಟಿಕ್ಕ‌ನ್ನು ಸೋಮವಾರ ಬಿಡುಗಡೆಗೊಳಿಸಲಾಯಿತು.

ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ನಾಡೋಜ ಡಾ.ಜಿ. ಶಂಕರ್ ಭಕ್ತರಿಗೆ ಮನೆ ಮನೆಗೆ ಕಾಣಿಕೆ ಡಬ್ಬಿಯನ್ನು ಹಸ್ತಾಂತರಿಸಿ ಮಾತನಾಡಿ, ನಮ್ಮ ಜೀವಿತಾ ವಧಿಯಲ್ಲಿ ನಡೆಯುವ ಗ್ರಾಮ, ಊರಿನ ದೇವಳದ ಜೀರ್ಣೋದ್ಧಾರ, ಬ್ರಹ್ಮಕಲ ಶೋತ್ಸವದಂತಹ ಪುಣ್ಯ ಕಾರ್ಯದಲ್ಲಿ ಕೈ ಜೋಡಿಸಿದರೆ ಪುಣ್ಯ ಫಲ ನಮಗೆ ಪ್ರಾಪ್ತಿ ಯಾಗುತ್ತದೆ ಎಂದರು.

ಬ್ರಹ್ಮಕಲಶೋತ್ಸವದ ಪೂರ್ವಭಾವಿ ಯಾಗಿ 200ಕ್ಕೂ ಅಧಿಕ ವಾಹನಗಳಲ್ಲಿ ಅದ್ಧೂರಿಯ ಹೊರೆಕಾಣಿಕೆ ಸಮರ್ಪಣೆ ಯಾಗಲಿದೆ. ಬ್ರಹ್ಮಕಲಶೋತ್ಸವದಂದು 20 ಸಾವಿರಕ್ಕೂ ಅಧಿಕ ಮಂದಿಗೆ ಅನ್ನ ಸಂತರ್ಪಣೆ ನಡೆಯುತ್ತದೆ ಎಂದರು.

ಇದನ್ನೂ ಓದಿ :

ಬನ್ನಂಜೆ ಶಾಸಕ ಯಶಪಾಲ್ ಎ. ಸುವರ್ಣ ಮಾತನಾಡಿ, ಶ್ರೀಮಹಾಲಿಂಗೇಶ್ವರ ದೇವಳ ಮಾಗಣೆಗೆ ಸಂಬಂಧಿಸಿದ್ದು, ಪ್ರಾಚೀನ, ಪುರಾಣ ಪ್ರಸಿದ್ಧವಾ ಗಿರುವ ದೇವಸ್ಥಾನವಾಗಿದೆ ಎಂದರು.

ಉದ್ಯಮಿ, ಸಾಮಾಜಿಕ ಕಾರ್ಯಕರ್ತ ಕೆ. ಕೃಷ್ಣಮೂರ್ತಿ ಆಚಾರ್ಯ ಮಾತನಾಡಿ, ಸಂಸ್ಕಾರ, ಸಂಸ್ಕೃತಿಯ ಪ್ರತೀಕವಾಗಿರುವ ದೇಗುಲದಲ್ಲಿ ನಡೆಯುವ ದೇವತಾ ಕಾರ್ಯದಲ್ಲಿ ಭಾಗಿಯಾಗುವುದು ನಮ್ಮೆಲ್ಲರ ಪೂರ್ವಜನ್ಮದ ಪುಣ್ಯ ಫಲಕನ್ನರ್ಪಾಡಿ ದೇವಳದಿಂದ ಊರಿನ ಸಮಸ್ತರ ಸಹಕಾರದೊಂದಿಗೆ ಅದ್ದೂರಿಯ ಹೊರೆಕಾಣಿಕೆಯನ್ನು ಸಮರ್ಪಣೆ ಮಾಡಲಾಗುವುದೆಂದರು.

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವ ಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕ ರಮೇಶ್ ಕಾಂಚನ್, ಹೋಟೆಲ್ ಉದ್ಯಮಿ ಪ್ರಭಾಕರ್ ಪೂಜಾರಿ, ನಗರಸಭೆ ಮಾಜಿ ಸದಸ್ಯ ಟಿ.ಜಿ. ಹೆಗ್ಡೆ ಉಪಸ್ಥಿತರಿದ್ದರು. ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾಧವ ಬನ್ನಂಜೆ ಸ್ವಾಗತಿಸಿದರು. ಕೃತಿ ಮೂಡುಬೆಟ್ಟು ನಿರೂಪಿಸಿ, ವಂದಿಸಿದರು.

ಇದನ್ನೂ ಓದಿ :

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

19 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

20 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

21 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

22 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

22 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

22 hours ago