Featured

ಉಡುಪಿ:  ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಳ ಬ್ರಹ್ಮಕಲಶೋತ್ಸವ: ಮನೆ ಮನೆಗೆ ಕಾಣಿಕೆ ಡಬ್ಬಿ, ಆಮಂತ್ರಣ ಪತ್ರಿಕೆ ಬಿಡುಗಡೆ – vishwanews24

ಉಡುಪಿ:  ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಳ ಬ್ರಹ್ಮಕಲಶೋತ್ಸವ: ಮನೆ ಮನೆಗೆ ಕಾಣಿಕೆ ಡಬ್ಬಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಬನ್ನಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏ.16ರಿಂದ 20ರವರೆಗೆ ಬ್ರಹ್ಮಕಲಶೋತ್ಸವ ವೈಭವ 2026 ಅದ್ಧೂರಿ ಯಾಗಿ ನಡೆಯಲಿದ್ದು, ದೇವತಾ ಕಾರ್ಯ ದ ಪೂರ್ವಭಾವಿಯಾಗಿ ಮನೆಮನೆಗೆ ಕಾಣಿಕೆ ಡಬ್ಬಿ, ಆಮಂತ್ರಣ ಪತ್ರಿಕೆ ಹಾಗೂ ಪ್ರಚಾರದ ಸ್ಟಿಕ್ಕ‌ನ್ನು ಸೋಮವಾರ ಬಿಡುಗಡೆಗೊಳಿಸಲಾಯಿತು.

ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ನಾಡೋಜ ಡಾ.ಜಿ. ಶಂಕರ್ ಭಕ್ತರಿಗೆ ಮನೆ ಮನೆಗೆ ಕಾಣಿಕೆ ಡಬ್ಬಿಯನ್ನು ಹಸ್ತಾಂತರಿಸಿ ಮಾತನಾಡಿ, ನಮ್ಮ ಜೀವಿತಾ ವಧಿಯಲ್ಲಿ ನಡೆಯುವ ಗ್ರಾಮ, ಊರಿನ ದೇವಳದ ಜೀರ್ಣೋದ್ಧಾರ, ಬ್ರಹ್ಮಕಲ ಶೋತ್ಸವದಂತಹ ಪುಣ್ಯ ಕಾರ್ಯದಲ್ಲಿ ಕೈ ಜೋಡಿಸಿದರೆ ಪುಣ್ಯ ಫಲ ನಮಗೆ ಪ್ರಾಪ್ತಿ ಯಾಗುತ್ತದೆ ಎಂದರು.

ಬ್ರಹ್ಮಕಲಶೋತ್ಸವದ ಪೂರ್ವಭಾವಿ ಯಾಗಿ 200ಕ್ಕೂ ಅಧಿಕ ವಾಹನಗಳಲ್ಲಿ ಅದ್ಧೂರಿಯ ಹೊರೆಕಾಣಿಕೆ ಸಮರ್ಪಣೆ ಯಾಗಲಿದೆ. ಬ್ರಹ್ಮಕಲಶೋತ್ಸವದಂದು 20 ಸಾವಿರಕ್ಕೂ ಅಧಿಕ ಮಂದಿಗೆ ಅನ್ನ ಸಂತರ್ಪಣೆ ನಡೆಯುತ್ತದೆ ಎಂದರು.

ಇದನ್ನೂ ಓದಿ :

ಬನ್ನಂಜೆ ಶಾಸಕ ಯಶಪಾಲ್ ಎ. ಸುವರ್ಣ ಮಾತನಾಡಿ, ಶ್ರೀಮಹಾಲಿಂಗೇಶ್ವರ ದೇವಳ ಮಾಗಣೆಗೆ ಸಂಬಂಧಿಸಿದ್ದು, ಪ್ರಾಚೀನ, ಪುರಾಣ ಪ್ರಸಿದ್ಧವಾ ಗಿರುವ ದೇವಸ್ಥಾನವಾಗಿದೆ ಎಂದರು.

ಉದ್ಯಮಿ, ಸಾಮಾಜಿಕ ಕಾರ್ಯಕರ್ತ ಕೆ. ಕೃಷ್ಣಮೂರ್ತಿ ಆಚಾರ್ಯ ಮಾತನಾಡಿ, ಸಂಸ್ಕಾರ, ಸಂಸ್ಕೃತಿಯ ಪ್ರತೀಕವಾಗಿರುವ ದೇಗುಲದಲ್ಲಿ ನಡೆಯುವ ದೇವತಾ ಕಾರ್ಯದಲ್ಲಿ ಭಾಗಿಯಾಗುವುದು ನಮ್ಮೆಲ್ಲರ ಪೂರ್ವಜನ್ಮದ ಪುಣ್ಯ ಫಲಕನ್ನರ್ಪಾಡಿ ದೇವಳದಿಂದ ಊರಿನ ಸಮಸ್ತರ ಸಹಕಾರದೊಂದಿಗೆ ಅದ್ದೂರಿಯ ಹೊರೆಕಾಣಿಕೆಯನ್ನು ಸಮರ್ಪಣೆ ಮಾಡಲಾಗುವುದೆಂದರು.

ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವ ಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕ ರಮೇಶ್ ಕಾಂಚನ್, ಹೋಟೆಲ್ ಉದ್ಯಮಿ ಪ್ರಭಾಕರ್ ಪೂಜಾರಿ, ನಗರಸಭೆ ಮಾಜಿ ಸದಸ್ಯ ಟಿ.ಜಿ. ಹೆಗ್ಡೆ ಉಪಸ್ಥಿತರಿದ್ದರು. ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾಧವ ಬನ್ನಂಜೆ ಸ್ವಾಗತಿಸಿದರು. ಕೃತಿ ಮೂಡುಬೆಟ್ಟು ನಿರೂಪಿಸಿ, ವಂದಿಸಿದರು.

ಇದನ್ನೂ ಓದಿ :

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

1 hour ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

1 hour ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

1 hour ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

5 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

5 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

5 hours ago