ಉಡುಪಿ: ಸಿಟಿ ಬಸ್ ನಲ್ಲಿ ಕಳೆದುಕೊಂಡಿದ್ದ ಚಿನ್ನದ ಸರವನ್ನು ಬಸ್ ಚಾಲಕ ಮತ್ತು ಕಂಡೆಕ್ಟರ್ ಸರದ ಮಾಲೀಕರಿಗೆ ಹಿಂತಿರುಗಿಸಿದ ಅಪರೂಪದ ಘಟನೆಯೊಂದು ಉಡುಪಿಯಲ್ಲಿ ನಡೆದಿದೆ. ಮಾನವೀಯತೆ ಕೂಡ ಇದೆ ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ.
ಜೂನ್ 20ರಂದು ಬ್ರಹ್ಮಾವರದಿಂದ ಕುಂದಾಪುರಕ್ಕೆ ಪ್ರಯಾಣಿಸುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಯೊಬ್ಬಳ ಚಿನ್ನದ ಸರ ಕಳೆದುಹೋಗಿದೆ. ಆ ಸರವನ್ನು ನೋಡಿದ ಪ್ರಯಾಣಿಕರೊಬ್ಬರು ಅದನ್ನು ಬಸ್ ಕಂಡೆಕ್ಟರ್ ಮತ್ತು ಚಾಲಕ ಬಳಿ ನೀಡಿದ್ದಾರೆ. ಬಳಿಕ ಬಸ್ ಚಾಲಕ ಅದನ್ನು ಆ ಬಾಲಕಿಗೆ ಹಿಂತಿರುಗಿಸಿದ್ದಾರೆ.
ಸರ ಕಳೆದುಕೊಂಡ ಬಾಲಕಿ ಆತಂಕಗೊಂಡಿದ್ದಾಗ ಬಸ್ ಏಜೆಂಟ್ ಆಕೆಯ ಬಳಿ ಸಮಸ್ಯೆಯನ್ನು ಕೇಳಿದರು. ಬಾಲಕಿ ತನ್ನ ಚಿನ್ನದ ಸರ ಕಳೆದುಕೊಂಡಿರುವ ಬಗ್ಗೆ ತಿಳಿಸಿದ್ದಾಳೆ. ಆಗ ಆಕೆಯ ಬಳಿ ಇದ್ದ ಟಿಕೆಟ್ ತೆಗೆದುಕೊಂಡ ಏಜೆಂಟರ್ ಎಪಿಎಂ ಬಸ್ ಚಾಲಕನನ್ನು ಸಂಪರ್ಕಿಸಿ ಬಾಲಕಿಗೆ ಚಿನ್ನದ ಸರ ಸಿಗುವಂತೆ ಮಾಡಿದ್ದಾರೆ.
ಚಿನ್ನದ ಮೇಲೆ ಗಗನಕ್ಕೇರುತ್ತಿದೆ. ಹಾಗಾಗಿ ಚಿನ್ನದ ಸರಗಳ ಕಳ್ಳತನದ ಪ್ರಕರಣವೂ ಎಲ್ಲಾ ಕಡೆ ಹೆಚ್ಚಾಗುತ್ತಿದೆ. ಅದರ ಮಧ್ಯೆ ಬೇರೆಯವರು ಕಳೆದುಕೊಂಡ ಚಿನ್ನದ ಸರ ಅನಾಯಾಸವಾಗಿ ಸಿಕ್ಕರೆ ಯಾರಿಗೆ ತಾನೇ ಕೊಡುವುದಕ್ಕೆ ಮನಸ್ಸು ಬರುತ್ತದೆ. ಕಷ್ಟಕಾಲದಲ್ಲಿ ನೆರವಾಗುತ್ತದೆ ಎಂದು ಹಾಗೇ ಜೇಬಿನೊಳಗೆ ಹಾಕಿಕೊಳ್ಳುವವರೇ ಹೆಚ್ಚು. ಆದರೂ ಇಂತಹ ಜನರ ಮಧ್ಯೆ ತಮಗೆ ಸಿಕ್ಕ ಚಿನ್ನದ ಸರವನ್ನು ಅದರ ಮಾಲೀಕರಿಗೆ ಹಿಂತಿರುಗಿಸಿದ ಬಸ್ ಚಾಲಕ ಮತ್ತು ಕಂಡೆಕ್ಟರ್ ಗುಣವನ್ನು ಎಲ್ಲರೂ ಮೆಚ್ಚಲೇಬೇಕು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…