Featured

ಉಡುಪಿ : ಬಸ್‌ನಲ್ಲಿ ಸಿಕ್ಕಿದ ಚಿನ್ನದ ಸರವನ್ನು ಮಾಲೀಕರಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದ ಚಾಲಕ, ನಿರ್ವಾಹಕ – vishwanews24

ಉಡುಪಿ:ಬಸ್‌ನಲ್ಲಿ ಸಿಕ್ಕಿದ ಚಿನ್ನದ ಸರವನ್ನು ಮಾಲೀಕರಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದ ಚಾಲಕ, ನಿರ್ವಾಹಕ

ಉಡುಪಿ: ಸಿಟಿ ಬಸ್ ನಲ್ಲಿ ಕಳೆದುಕೊಂಡಿದ್ದ ಚಿನ್ನದ ಸರವನ್ನು ಬಸ್ ಚಾಲಕ  ಮತ್ತು ಕಂಡೆಕ್ಟರ್ ಸರದ ಮಾಲೀಕರಿಗೆ ಹಿಂತಿರುಗಿಸಿದ ಅಪರೂಪದ ಘಟನೆಯೊಂದು ಉಡುಪಿಯಲ್ಲಿ ನಡೆದಿದೆ. ಮಾನವೀಯತೆ ಕೂಡ ಇದೆ ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ.

ಜೂನ್ 20ರಂದು ಬ್ರಹ್ಮಾವರದಿಂದ ಕುಂದಾಪುರಕ್ಕೆ ಪ್ರಯಾಣಿಸುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಯೊಬ್ಬಳ ಚಿನ್ನದ ಸರ ಕಳೆದುಹೋಗಿದೆ. ಆ ಸರವನ್ನು ನೋಡಿದ ಪ್ರಯಾಣಿಕರೊಬ್ಬರು ಅದನ್ನು ಬಸ್ ಕಂಡೆಕ್ಟರ್ ಮತ್ತು ಚಾಲಕ ಬಳಿ ನೀಡಿದ್ದಾರೆ. ಬಳಿಕ ಬಸ್ ಚಾಲಕ ಅದನ್ನು ಆ ಬಾಲಕಿಗೆ ಹಿಂತಿರುಗಿಸಿದ್ದಾರೆ.

ಸರ ಕಳೆದುಕೊಂಡ ಬಾಲಕಿ ಆತಂಕಗೊಂಡಿದ್ದಾಗ ಬಸ್ ಏಜೆಂಟ್ ಆಕೆಯ ಬಳಿ ಸಮಸ್ಯೆಯನ್ನು ಕೇಳಿದರು. ಬಾಲಕಿ ತನ್ನ ಚಿನ್ನದ ಸರ ಕಳೆದುಕೊಂಡಿರುವ ಬಗ್ಗೆ ತಿಳಿಸಿದ್ದಾಳೆ. ಆಗ ಆಕೆಯ ಬಳಿ ಇದ್ದ ಟಿಕೆಟ್ ತೆಗೆದುಕೊಂಡ ಏಜೆಂಟರ್ ಎಪಿಎಂ ಬಸ್ ಚಾಲಕನನ್ನು ಸಂಪರ್ಕಿಸಿ ಬಾಲಕಿಗೆ ಚಿನ್ನದ ಸರ ಸಿಗುವಂತೆ ಮಾಡಿದ್ದಾರೆ.

ಚಿನ್ನದ ಮೇಲೆ ಗಗನಕ್ಕೇರುತ್ತಿದೆ. ಹಾಗಾಗಿ ಚಿನ್ನದ ಸರಗಳ ಕಳ್ಳತನದ ಪ್ರಕರಣವೂ ಎಲ್ಲಾ ಕಡೆ ಹೆಚ್ಚಾಗುತ್ತಿದೆ. ಅದರ ಮಧ್ಯೆ ಬೇರೆಯವರು ಕಳೆದುಕೊಂಡ ಚಿನ್ನದ ಸರ ಅನಾಯಾಸವಾಗಿ ಸಿಕ್ಕರೆ ಯಾರಿಗೆ ತಾನೇ ಕೊಡುವುದಕ್ಕೆ ಮನಸ್ಸು ಬರುತ್ತದೆ. ಕಷ್ಟಕಾಲದಲ್ಲಿ ನೆರವಾಗುತ್ತದೆ ಎಂದು ಹಾಗೇ ಜೇಬಿನೊಳಗೆ ಹಾಕಿಕೊಳ್ಳುವವರೇ ಹೆಚ್ಚು. ಆದರೂ ಇಂತಹ ಜನರ ಮಧ್ಯೆ ತಮಗೆ ಸಿಕ್ಕ ಚಿನ್ನದ ಸರವನ್ನು ಅದರ ಮಾಲೀಕರಿಗೆ ಹಿಂತಿರುಗಿಸಿದ ಬಸ್ ಚಾಲಕ ಮತ್ತು ಕಂಡೆಕ್ಟರ್ ಗುಣವನ್ನು ಎಲ್ಲರೂ ಮೆಚ್ಚಲೇಬೇಕು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

7 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

7 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

7 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

10 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

11 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

11 hours ago