ಉಡುಪಿ: ಸಂತೆಕಟ್ಟೆಯಿ0ದ ಉಡುಪಿಗೆ ಬರುವ ಸಿಟಿ ಬಸ್ಸುಗಳ ಬಸ್ಸಿನ ಪರವಾನಿಗೆಯಲ್ಲಿ ನಿಟ್ಟೂರು–ಎನ್.ಎಚ್ 17 ಎಂದು ನಮೂದಿಸಿರುವ ಬಸ್ಸುಗಳು ಅಂಬಾಗಿಲು–ಕರಾವಳಿ ಬೈಪಾಸ್–ಅಂಬಲಪಾಡಿ ಬೈಪಾಸ್– ಬ್ರಹ್ಮಗಿರಿ–ಅಜ್ಜರಕಾಡು–ಹಳೇ ತಾಲೂಕು ಕಚೇರಿ ಮೂಲಕ ಸಿಟಿ ಬಸ್ಸು ನಿಲ್ದಾಣ ತಲುಪಲು, ಸಂತೆಕಟ್ಟೆಯಿ0ದ ಉಡುಪಿಗೆ ಬರುವ ಉಳಿದ ಸಿಟಿ ಬಸ್ಸುಗಳು ಅಂಬಾಗಿಲು–ತಾ0ಗದಗಡಿ–ಗು0ಡಿಬೈಲು– ಕಲ್ಸಂಕ ಮಾರ್ಗವಾಗಿ ಸಂಚರಿಸಿ ಸಿಟಿ ಬಸ್ಸು ನಿಲ್ದಾಣ ತಲುಪಲು ಮತ್ತು ಬಾರ್ಕೂರು ಬ್ರಹ್ಮಾವರ– ಹೊನ್ನಾಳ–ಹೆಬ್ರಿ–ಪೆರ್ಡೂರು–ಕುಕ್ಕೆಹಳ್ಳಿ ಕಡೆಯಿಂದ ಬರುವ ಷಟಲ್ ಸರ್ವೀಸ್ ಬಸ್ಸುಗಳು ಅಂಬಾಗಿಲು ಗುಂಡಿಬೈಲು ಮೂಲಕ ಕಲ್ಸಂಕ ಬಂದು ಉಡುಪಿ ಬಸ್ ನಿಲ್ದಾಣ ತಲುಪುವಂತೆ ಅಧಿಸೂಚನೆ ಹೊರಡಿಸಲಾಗಿರುತ್ತದೆ.
ಆದರೆ ಈಗಾಗಲೇ ಹಲವು ಬಾರಿ ಈ ಕುರಿತು ನೋಟೀಸ್ ನೀಡಿ ಪ್ರಕರಣ ದಾಖಲಿಸಿದ್ದರೂ ಕೂಡ ಅಂಬಾಗಿಲು–ಕಲ್ಪ0ಕ ಮಾರ್ಗದಲ್ಲಿ ಬಸ್ಸುಗಳು ಸಂಚರಿಸದಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿದ್ದು, ಇದು ಅಂತಿಮ ಸೂಚನೆ ಎಂದು ಪರಿಗಣಿಸಿ ಸಂತೆಕಟ್ಟೆಯಿ0ದ ಉಡುಪಿಗೆ ಬರುವ ಸಿಟಿ ಬಸ್ಸುಗಳ ಬಸ್ಸಿನ ಪರವಾನಿಗೆಯಲ್ಲಿ ನಿಟ್ಟೂರು–ಎನ್.ಎಚ್ 17 ಎಂದು ನಮೂದಿಸದೇ ಇರುವ ಸಿಟಿ ಬಸ್ಸುಗಳು ಮತ್ತು ಬಾರ್ಕೂರು ಬ್ರಹ್ಮಾವರ–ಹೊನ್ನಾಳ–ಹೆಬ್ರಿ– ಪೆರ್ಡೂರು–ಕುಕ್ಕೆಹಳ್ಳಿ ಕಡೆಯಿಂದ ಬರುವ ಷಟಲ್ ಸರ್ವೀಸ್ ಬಸ್ಸುಗಳು ಅಂಬಾಗಿಲು–ತಾ0ಗದಗಡಿ– ಗುಂಡಿಬೈಲು–ಕಲ್ಸ0ಕ ಮಾರ್ಗವಾಗಿ ಕಡ್ಡಾಯವಾಗಿ ಸಂಚರಿಸುವ0ತೆ ಸಂಬ0ದಪಟ್ಟ ಎಲ್ಲಾ ಬಸ್ಸು ಮಾಲೀಕರಿಗೆ ಆದೇಶಿಸಲಾಗಿದೆ. ತಪ್ಪಿದಲ್ಲಿ ಪರವಾನಿಗೆ ರದ್ದು ಪಡಿಸಲು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…