ಉಡುಪಿ

ಉಡುಪಿ: ಬಸ್ ಚಾಲಕರಿಬ್ಬರಿಗೆ ತಂಡದಿಂದ ಚೂರಿ ಇರಿತ – vishwanews24

ಉಡುಪಿ: ಬಸ್ ಚಾಲಕರಿಬ್ಬರಿಗೆ ತಂಡದಿಂದ ಚೂರಿ ಇರಿತ

ಉಡುಪಿ: ಬಸ್ ಚಾಲಕರಿಬ್ಬರಿಗೆ ರಿಕ್ಷಾದಲ್ಲಿ ಬಂದ ತಂಡವೊಂದು ಚೂರಿಯಲ್ಲಿ ಇರಿದ ಘಟನೆ ಕಳೆದ ರಾತ್ರಿ ಬನ್ನಂಜೆಯಲ್ಲಿ ನಡೆದಿದೆ.

ಜೆಎಮ್‌ಟಿ ಬಸ್ ಚಾಲಕರಾದ ಸಂತೋಷ ಹಾಗೂ ಶಿಶರ್ ಕೆಲಸ ಮುಗಿಸಿ ಬನ್ನಂಜೆ ಕಡೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ರಿಕ್ಷಾದಲ್ಲಿ ಬಂದಿದ್ದ ಟಿಮ್‌ಟಿ ಬಸ್‌ನ ಮ್ಯಾನೇಜರ್ ಹಾಗೂ ಚಾಲಕ ಬುರನ್ ಮತ್ತು ಚಾಲಕ ಸುದೀಪ್ ಅಡ್ಡಗಟ್ಟಿ ಚೂರಿ ಇರಿದಿದ್ದಾರೆ ಎಂದು ತಿಳಿದುಬಂದಿದೆ.

ಪರ್ಯಾಯ ದಿನದಂದು ಉಡುಪಿ ಸಿಟಿ ಬಸ್ ಚಾಲಕರ ನಡುವೆ ಗಲಾಟೆ ನಡೆದಿತ್ತು. ಇದರ ವಿಚಾರವಾಗಿ ನಗರ ಠಾಣೆಯಲ್ಲಿ ರಾಜಿ ಪಂಚಾಯಿತಿ ನಡೆಸಿ ಕಳುಹಿಸಲಾಗಿತ್ತು.

ಬಳಿಕ ರಾತ್ರಿ ಮೂವರಿದ್ದ ತಂಡವು ಈ ಕೃತ್ಯ ಎಸಗಿದ್ದು ಗಾಯಲು ಬಸ್ ಚಾಲಕರು ಉಡುಪಿ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿಶಿರ್ ಮೇಲೆ ಸುದೀಪ್ ನೇತೃತ್ವದ ಎಂಟು ಜನರಿದ್ದ ತಂಡವೊಂದು ಕಳೆದ ಎರಡು ವರ್ಷಗಳ ಹಿಂದೆ ಸಿಟಿಬಸ್ ನಿಲ್ದಾಣ ಬಳಿ ಹಲ್ಲೆ ನಡೆಸಿತ್ತು. ಬಸ್ ನಿಲ್ದಾಣದಲ್ಲಿ ಎರಡು ಬಸ್‌ಗಳ ಮಾಲಕ ,ಚಾಲಕರ ನಡುವೆ ಯಾವಾಗಲೂ ಹೊಯೈಕೈ ನಡೆಯುತ್ತದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಇದರಿಂದಾಗಿ ಪ್ರಯಾಣಿಕರಿಗೆ ತೊಂದರೆ ಉಂಟಾಗುತ್ತಿದ್ದು ಪೊಲೀಸರು ತಕ್ಷಣ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

15 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago