Featured

ಉಡುಪಿ : ಬಹುಕಾಲದ ಕನಸಾಗಿದ್ದ ಯಕ್ಷಗಾನದ ವೇಷ ಹಾಕಿ ಮಿಂಚಿದ ಬಹುಭಾಷಾ ಕಲಾವಿದ ರಮೇಶ್ ಅರವಿಂದ್ – Vishwanews24

ಉಡುಪಿ : ಬಹುಕಾಲದ ಕನಸಾಗಿದ್ದ ಯಕ್ಷಗಾನದ ವೇಷ ಹಾಕಿ ಮಿಂಚಿದ ಬಹುಭಾಷಾ ಕಲಾವಿದ ರಮೇಶ್ ಅರವಿಂದ್

ನಟ ರಮೇಶ್ ಅರವಿಂದ್  ಯಕ್ಷ ಯುವರಾಜನಾಗಿ ಮಿಂಚಿದ್ದಾರೆ. ಬಹುಭಾಷಾ ಕಲಾವಿದ ರಮೇಶ್ ಅರವಿಂದ್ ಯಕ್ಷಗಾನದ ವೇಷ ತೊಟ್ಟು ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಈ ಮೂಲಕ ಹಲವು ದಶಕಗಳ ಕನಸನ್ನು ನನಸು ಮಾಡಿಕೊಂಡಿದ್ದಾರೆ.

ಉಡುಪಿಯ ಪ್ರವಾಸದಲ್ಲಿರುವ ರಮೇಶ್ ಅರವಿಂದ್ ಕೂದ್ರು ನೆಸ್ಟ್ ಗೆಸ್ಟ್ ಹೌಸಿಗೆ ಭೇಟಿ ಕೊಟ್ಟಿದ್ದರು. ಈ ಸಂದರ್ಭ ಬಹುಕಾಲದ ಕನಸಾಗಿದ್ದ ಯಕ್ಷಗಾನದ ವೇಷವನ್ನು ಹಾಕಿಸಿಕೊಂಡಿದ್ದಾರೆ. ಸಾಂಪ್ರದಾಯಿಕ ವೇಷ ಮತ್ತು ಬಣ್ಣಗಾರಿಕೆಯನ್ನು ಕಲಾವಿದ ಶೈಲೇಶ್ ವ್ಯವಸ್ಥೆ ಮಾಡಿದ್ದರು. ಅಂತರಾಷ್ಟ್ರೀಯ ಛಾಯಾಗ್ರಾಹಕ ಫೋಕಸ್ ರಾಘು , ರಮೇಶ್ ಅರವಿಂದ್ ಅವರ ಫೋಟೋ ಶೂಟ್ ಮಾಡಿದ್ದಾರೆ. ಇದನ್ನೂ ಓದಿ: ಮಂಗಳೂರು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಕರ್ತವ್ಯನಿರತ ಮಹಿಳಾ ಪಿಎಸ್‌ಐ – Vishwanews24

ಯಕ್ಷಗಾನ  ಕಲೆಯ ಬಗ್ಗೆ ರಮೇಶ್ ಅರವಿಂದ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಛಾಯಾಗ್ರಹಣದಲ್ಲಿ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ, ಉಡುಪಿ ಕೊಡಂಗಳದ ರಾಘವೇಂದ್ರ ಫೋಟೋ ಕ್ಲಿಕ್ ಮಾಡಿದ್ದಾರೆ. ಸುವರ್ಣಾ ನದಿ ತೀರದಲ್ಲಿರುವ ಕುದ್ರು ನೆಸ್ಟ್ ಎಂಬ ಹೋಮ್ ಸ್ಟೇಯಲ್ಲಿ ರಮೇಶ್ ಅರವಿಂದ್ ಸಾಂಪ್ರದಾಯಿಕವಾಗಿ ಬಣ್ಣಹಚ್ಚಿದ್ದಾರೆ.

ಶಿವರಾಮ ಕಾರಂತ ಪ್ರಶಸ್ತಿ ಸ್ವೀಕರಿಸಲು ಉಡುಪಿಗೆ ಬಂದಿದ್ದ ರಮೇಶ್ ಅರವಿಂದ್, ನಟ, ಬರಹಗಾರ, ಸ್ಫೂರ್ತಿ ತುಂಬುವ ಭಾಷಣಕಾರ, ನಿರೂಪಕ, ರಮೇಶ್ ಅರವಿಂದ್ ಉಡುಪಿಯ ಮನೋವೈದ್ಯ ಡಾ. ವಿರೂಪಾಕ್ಷ ದೇವರು ಮನೆಯವರೊಂದಿಗೆ ಫೋಕಸ್ ರಾಘು ಅವರ ಕುದ್ರು ನೆಸ್ಟ್ ಭೇಟಿ ನೀಡಿದ್ದರು. ಪರಿಸರ, ನದಿ, ಮನೆ, ಕ್ರಿಯಾಶೀಲ ವಿನ್ಯಾಸವನ್ನು ಕಂಡು ಮೆಚ್ಚುಗೆ ಸೂಚಿಸಿದ್ದರು. ರಾಘು ಅವರ ಛಾಯಾಚಿತ್ರಗಳನ್ನು ಕಂಡು ಬೆರಗು ವ್ಯಕ್ತಪಡಿಸಿ ತನಗೂ ಫೋಟೋ ಶೂಟ್ ಮಾಡ್ತೀರಾ ಎಂದು ಕೇಳಿದ್ದರು. ಅದರಂತೆ ರಮೇಶ್ ಅರವಿಂದ್ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಕಾಪು: ನಿವೃತ್ತ ಯೋಧ ಮೂಳೂರು ನಿವಾಸಿ ಹಾಜಿ ಅಬ್ದುರಝಾಕ್ ಶಾಬಾನ್ ನಿಧನ – Vishwanews24

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

2 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

2 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

3 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

3 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago