ಉಡುಪಿ : ನಗರದ ಕಮಲಾಕ್ಷಿ ವಿವಿದ್ದೋದ್ದೇಶ ಸೊಸೈಟಿ ಹೆಸರಲ್ಲಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ ಸೊಸೈಟಿ ಅಧ್ಯಕ್ಷ ಬಿ.ವಿ ಲಕ್ಷ್ಮೀನಾರಾಯಣನಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.
ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರಿಗೆ, ಆರೋಪಿ ಬಿ.ವಿ ಲಕ್ಷ್ಮೀ ನಾರಾಯಣ ಫೈನಾನ್ಸ್ ನಲ್ಲಿ ಠೇವಣಿದಾರರಿಂದ ಪಡೆದ ಹಣದಿಂದ 40 ಕ್ಕೂ ಹೆಚ್ಚು ಕಡೆಗಳಲ್ಲಿ ಜಮೀನು ಖರೀದಿಸಿದ್ದ ವಿಚಾರ ತಿಳಿದು ಬಂದಿದೆ. ಬಿ.ವಿ ಲಕ್ಷ್ಮೀ ನಾರಾಯಣ ಕಡೆಕಾರುವಿನ ಕಿದಿಯೂರು, ಗುಂಡಿಬೈಲು , ಹಿರಿಯಡ್ಕ , ಬ್ರಹ್ಮಾವರ ಸಹಿತ 40 ಕ್ಕೂ ಹೆಚ್ಚು ಕಡೆ ಜಮೀನು ಖರೀದಿಸಿದ್ದರು. ಆದರೆ ಕೋವಿಡ್ ಬಳಿಕ ವ್ಯವಹಾರ ಸಂಪೂರ್ಣ ಸ್ಥಗಿತಗೊಂಡ ಕಾರಣ ಠೇವಣಿದಾರರಿಗೆ ಹಣ ಹಿಂದಿರುಗಿ ಸಾಧ್ಯವಾಗಿರಲಿಲ್ಲ. ಅಲ್ಲದೆ ಠೇವಣಿದಾರರ ಹಣದಿಂದ ಭೂಮಿ ಖರೀದಿಸಲು ಮತ್ತು ಮಾರಾಟ ಮಾಡಲು ಕೋಪರೇಟಿವ್ ಬ್ಯಾಂಕ್ವೊಂದರ ಅಧ್ಯಕ್ಷರು ಸಹಕಾರ ನೀಡಿದ್ದರು ಎಂದು ತಿಳಿದು ಬಂದಿದೆ. ಇವರು ಕಮಿಷನ್ ಆಧಾರದಲ್ಲಿ ವ್ಯವಹಾರದವನ್ನು ಕುದುರಿಸುತ್ತಿದ್ದರು ಎಂಬ ಮಾಹಿತಿ ವಿಚಾರಣೆ ವೇಳೆ ಲಭ್ಯವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 7 ಮಂದಿ ಠೇವಣಿದಾರರು ಪೊಲೀಸರಿಗೆ ದೂರು ನೀಡಿದ್ದಾರೆ. ಕೋಟ್ಯಾಂತರ ರೂ. ವ್ಯವಹಾರ ನಡೆಸಿದ ಬಿವಿ ಲಕ್ಷ್ಮೀ ನಾರಾಯಣ ಅವರ ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಡಿ (ಜಾರಿ ನಿರ್ದೇಶನಾಲಯ)ಯು ಪ್ರಕರಣದ ಮಾಹಿತಿ ಕಲೆ ಹಾಕಿದೆ. ಅಲ್ಲದೆ ಬಿವಿ ಲಕ್ಷ್ಮೀ ನಾರಾಯಣ ಈ ಹಿಂದೆ ಪ್ರಧಾನ ವ್ಯವಸ್ಥಾಪಕರಾಗಿದ್ದ ಉಡುಪಿ ಟೌನ್ ಕೋಪರೇಟಿವ್ ಬ್ಯಾಂಕ್ನ ವ್ಯವಹಾರದ ಬಗ್ಗೆ ಮಾಹಿತಿ ನೀಡುವಂತೆ ಬ್ಯಾಂಕ್ ಗೆ ನೋಟಿಸ್ ನೀಡಿದೆ ಎಂದು ತಿಳಿದು ಬಂದಿದೆ
ಪ್ರಕರಣದ ವಿಚಾರವಾಗಿ 2022 ರ ಡಿ.28 ರಂದು ಆರೋಪಿ ಲಕ್ಷ್ಮೀನಾರಾಯಣನನ್ನು ಬ್ರಹ್ಮಾವರದ ಮಟಪಾಡಿ ಬಳಿ ಬಂಧಿಸಿ, ಡಿ.29 ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಈ ವೇಳೆ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಬಳಿಕ ಜ.2 ರಂದು ಸೆನ್ ಠಾಣಾ ಪೊಲಿಸರು ಲಕ್ಷ್ಮೀನಾರಾಯಣನನ್ನು ಹೆಚ್ಚಿನ ತನಿಖೆಗೆ ನ್ಯಾಯಾಲಯದ ಮುಖಾಂತರ ಐದು ದಿನಗಳ ಅವಧಿಗೆ ಪೋಲಿಸ್ ಕಸ್ಟಡಿಗೆ ಪಡೆದಿದ್ದರು.
Join our Whatsapp group by clicking the below link 👇👇
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…