Featured

ಉಡುಪಿ: ಬಹುಕೋಟಿ ವಂಚನೆ ಪ್ರಕರಣ : ಸೊಸೈಟಿ ಅಧ್ಯಕ್ಷ ಬಿ.ವಿ ಲಕ್ಷ್ಮೀ ನಾರಾಯಣಗೆ ಜಾಮೀನು – Vishwanews24

ಉಡುಪಿ: ಬಹುಕೋಟಿ ವಂಚನೆ ಪ್ರಕರಣ : ಸೊಸೈಟಿ ಅಧ್ಯಕ್ಷ ಬಿ.ವಿ ಲಕ್ಷ್ಮೀ ನಾರಾಯಣಗೆ ಜಾಮೀನು

ಕಮಲಾಕ್ಷಿ ವಿವಿದ್ದೋದ್ದೇಶ ಸೊಸೈಟಿ ಗೆ ಇಡಿ ನೋಟೀಸ್

ಉಡುಪಿ : ನಗರದ ಕಮಲಾಕ್ಷಿ ವಿವಿದ್ದೋದ್ದೇಶ ಸೊಸೈಟಿ ಹೆಸರಲ್ಲಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿರುವ ಸೊಸೈಟಿ ಅಧ್ಯಕ್ಷ ಬಿ.ವಿ ಲಕ್ಷ್ಮೀನಾರಾಯಣನಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರಿಗೆ, ಆರೋಪಿ ಬಿ.ವಿ ಲಕ್ಷ್ಮೀ ನಾರಾಯಣ ಫೈನಾನ್ಸ್ ನಲ್ಲಿ ಠೇವಣಿದಾರರಿಂದ ಪಡೆದ ಹಣದಿಂದ 40 ಕ್ಕೂ ಹೆಚ್ಚು ಕಡೆಗಳಲ್ಲಿ ಜಮೀನು ಖರೀದಿಸಿದ್ದ ವಿಚಾರ ತಿಳಿದು ಬಂದಿದೆ. ಬಿ.ವಿ ಲಕ್ಷ್ಮೀ ನಾರಾಯಣ ಕಡೆಕಾರುವಿನ ಕಿದಿಯೂರು, ಗುಂಡಿಬೈಲು , ಹಿರಿಯಡ್ಕ , ಬ್ರಹ್ಮಾವರ ಸಹಿತ 40 ಕ್ಕೂ ಹೆಚ್ಚು ಕಡೆ ಜಮೀನು ಖರೀದಿಸಿದ್ದರು. ಆದರೆ ಕೋವಿಡ್ ಬಳಿಕ ವ್ಯವಹಾರ ಸಂಪೂರ್ಣ ಸ್ಥಗಿತಗೊಂಡ ಕಾರಣ ಠೇವಣಿದಾರರಿಗೆ ಹಣ ಹಿಂದಿರುಗಿ ಸಾಧ್ಯವಾಗಿರಲಿಲ್ಲ. ಅಲ್ಲದೆ ಠೇವಣಿದಾರರ ಹಣದಿಂದ ಭೂಮಿ ಖರೀದಿಸಲು ಮತ್ತು ಮಾರಾಟ ಮಾಡಲು ಕೋಪರೇಟಿವ್ ಬ್ಯಾಂಕ್‍ವೊಂದರ ಅಧ್ಯಕ್ಷರು ಸಹಕಾರ ನೀಡಿದ್ದರು ಎಂದು ತಿಳಿದು ಬಂದಿದೆ. ಇವರು ಕಮಿಷನ್ ಆಧಾರದಲ್ಲಿ ವ್ಯವಹಾರದವನ್ನು ಕುದುರಿಸುತ್ತಿದ್ದರು ಎಂಬ ಮಾಹಿತಿ ವಿಚಾರಣೆ ವೇಳೆ ಲಭ್ಯವಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 7 ಮಂದಿ ಠೇವಣಿದಾರರು ಪೊಲೀಸರಿಗೆ ದೂರು ನೀಡಿದ್ದಾರೆ. ಕೋಟ್ಯಾಂತರ ರೂ. ವ್ಯವಹಾರ ನಡೆಸಿದ ಬಿವಿ ಲಕ್ಷ್ಮೀ ನಾರಾಯಣ ಅವರ ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಇಡಿ (ಜಾರಿ ನಿರ್ದೇಶನಾಲಯ)ಯು ಪ್ರಕರಣದ ಮಾಹಿತಿ ಕಲೆ ಹಾಕಿದೆ. ಅಲ್ಲದೆ ಬಿವಿ ಲಕ್ಷ್ಮೀ ನಾರಾಯಣ ಈ ಹಿಂದೆ ಪ್ರಧಾನ ವ್ಯವಸ್ಥಾಪಕರಾಗಿದ್ದ ಉಡುಪಿ ಟೌನ್ ಕೋಪರೇಟಿವ್ ಬ್ಯಾಂಕ್‍ನ ವ್ಯವಹಾರದ ಬಗ್ಗೆ ಮಾಹಿತಿ ನೀಡುವಂತೆ ಬ್ಯಾಂಕ್ ಗೆ ನೋಟಿಸ್ ನೀಡಿದೆ ಎಂದು ತಿಳಿದು ಬಂದಿದೆ

ಪ್ರಕರಣದ ವಿಚಾರವಾಗಿ 2022 ರ ಡಿ.28 ರಂದು ಆರೋಪಿ ಲಕ್ಷ್ಮೀನಾರಾಯಣನನ್ನು ಬ್ರಹ್ಮಾವರದ ಮಟಪಾಡಿ ಬಳಿ ಬಂಧಿಸಿ, ಡಿ.29 ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ಈ ವೇಳೆ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಬಳಿಕ ಜ.2 ರಂದು ಸೆನ್ ಠಾಣಾ ಪೊಲಿಸರು ಲಕ್ಷ್ಮೀನಾರಾಯಣನನ್ನು ಹೆಚ್ಚಿನ ತನಿಖೆಗೆ ನ್ಯಾಯಾಲಯದ ಮುಖಾಂತರ ಐದು ದಿನಗಳ ಅವಧಿಗೆ ಪೋಲಿಸ್ ಕಸ್ಟಡಿಗೆ ಪಡೆದಿದ್ದರು.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

34 minutes ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

39 minutes ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

44 minutes ago

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ – vishwanews24

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ ಬೆಂಗಳೂರು : ಶಾಲಾ ಸಾಂಸ್ಕೃತಿಕ…

53 minutes ago

ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ – vishwanews24

ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ ಉಡುಪಿ: ಇತ್ತೀಚೆಗೆ ಉಡುಪಿ…

1 hour ago

ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ – vishwanews24

ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ…

1 hour ago