Featured

ಉಡುಪಿ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹಾಗೂ ಹಿಂದೂ ಮುಖಂಡರ ಬಂಧನ ಖಂಡಿಸಿ ಡಿ.4ರಂದು ಬೃಹತ್ ಪ್ರತಿಭಟನೆ – vishwanews24

ಉಡುಪಿ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದೌರ್ಜನ್ಯ ಹಾಗೂ ಹಿಂದೂ ಮುಖಂಡರ ಬಂಧನ ಖಂಡಿಸಿ ಡಿ.4ರಂದು ಬೃಹತ್ ಪ್ರತಿಭಟನೆ

ಉಡುಪಿ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದುಗಳ ಮೇಲೆ ದೌರ್ಜನ್ಯ, ಕೊಲೆ, ಅತ್ಯಾಚಾರ ಹಾಗೂ ಸ್ವಾಮೀಜಿ, ಹಿಂದೂ ಮುಖಂಡರ ಬಂಧನ ಖಂಡಿಸಿ ಹಿಂದು ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಡಿ.4ರಂದು ಉಡುಪಿಯ ಶ್ರೀಕೃಷ್ಣ ಮಠದ ಪಾರ್ಕಿಂಗ್ ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಸಮಿತಿಯ ಸಂಚಾಲಕ ರಾಧಾಕೃಷ್ಣ ಮೆಂಡನ್ ತಿಳಿಸಿದರು.

ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಮಧ್ಯಾಹ್ನ 3 ಗಂಟೆಗೆ ಜೋಡುಕಟ್ಟೆಯಿಂದ ಪ್ರತಿಭಟನಾ ಜಾಥ ಆರಂಭಗೊಳ್ಳಲಿದೆ. ಜಾಥವು ಕೋರ್ಟ್ ರಸ್ತೆ, ಕೆ.ಎಮ್.ಮಾರ್ಗ, ಸರ್ವೀಸ್ ರಸ್ತೆ, ಸಿಟಿ ಬಸ್ ನಿಲ್ದಾಣ, ಕಲ್ಸಂಕ ಮಾರ್ಗವಾಗಿ ಕೃಷ್ಣ ಮಠದ ಪಾರ್ಕಿಂಗ್ ವಠಾರವನ್ನು ತಲುಪಲಿದೆ‌ ಎಂದರು.

ಸಂಜೆ 4.30ಕ್ಕೆ ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂಧ್ರತೀರ್ಥರ ಅಧ್ಯಕ್ಷತೆಯಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಪ್ರತಿಭಟನೆಗೆ ಸಂಘ ಪರಿವಾರ, ವಿವಿಧ ಸಂಘ ಸಂಸ್ಥೆಗಳು, ಬಿಜೆಪಿ ಬೆಂಬಲವನ್ನು ಸೂಚಿಸಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಗೋವಿಂದದಾಸ್, ಸಂಜಿತ್ ಹಾವಂಜೆ, ಅಖಿಲೇಶ್ ಉಪಸ್ಥಿತರಿದ್ದರು.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

20 hours ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

1 day ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

1 day ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

1 day ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

1 day ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

1 day ago