ಉಡುಪಿ: ಇತ್ತೀಚಿನ ದಿನದಲ್ಲಿ ಬಾಂಗ್ಲಾದೇಶದ ನಾಗರಿಕರು ಕರಾವಳಿ ಜಿಲ್ಲೆಗಳಲ್ಲಿ ವಾಸವಿರುವುದನ್ನು ಕಂಡು ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್ ಕೇಂದ್ರ ಸರ್ಕಾರದ ಆಡಳಿತದ ಬಗ್ಗೆ ತೀವ್ರ ಖಂಡಿಸಿದ್ದಾರೆ .
ಕಳೆದ 11 ವರ್ಷಗಳಿಂದ ಆಡಳಿತ ಮಾಡುತ್ತಿರುವ ಬಿಜೆಪಿ ಸರಕಾರ, ಅದರ ಗೃಹ ಇಲಾಖೆಯ ಆಡಳಿತ ಕ್ರಮದ ಬಗ್ಗೆ, ದೇಶದ ಜನರ ಹಿತದೃಷ್ಟಿ ಮತ್ತು ಭದ್ರತೆಯ ಬಗ್ಗೆ ತೀವ್ರ ನಿರಾಸೆಯನ್ನು ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಆಡಳಿತ ಇರುವ ಸಮಯದಲ್ಲಿ ಬಿಜೆಪಿ ಸರಕಾರವು ನೆರೆದೇಶದ ಜನರು ಭಾರತಕ್ಕೆ ನುಸುಳಿಕೊಂಡು ಬಂದು ಇಲ್ಲಿ ಜೀವನ ಮಾಡಲು ಕಾಂಗ್ರೆಸ್ ಸರಕಾರ ಅವಕಾಶ ಕೊಡುತ್ತಿದ್ದಾರೆಂದು ಸುಳ್ಳು ಆರೋಪ ಮಾಡಿ ಜನರ ದಿಕ್ಕನ್ನು ತಪ್ಪಿಸಿ ಅಧಿಕಾರಕ್ಕೆ ಬಂದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ನೆರೆ ರಾಷ್ಟ್ರ ಬಾಂಗ್ಲಾದೇಶದ ಪ್ರಜೆಗಳು ಭಾರತಕ್ಕೆ ಬಂದು ಅದೂ ಕರಾವಳಿ ಜಿಲ್ಲೆಗಳಲ್ಲಿ ವಾಸಿಸುವಂತೆ ಪ್ರೇರಣೆಯನ್ನು ಬಿಜೆಪಿ ಕೊಡುತ್ತಿದೆ ಎಂದು ಆರೋಪಿಸಿದ್ದಾರೆ.
ಇನ್ನಾದರೂ ಬಿಜೆಪಿ ಆಡಳಿತ ಪಕ್ಷದ ನಾಯಕರು ಬೇರೆ ಪಕ್ಷದ ನಾಯಕರಿಗೆ ವ್ಯಂಗ್ಯ ಮಾಡುವುದನ್ನು ಬಿಟ್ಟು ಆಡಳಿತ ಪಕ್ಷವಾದ ತನ್ನ ಪಕ್ಷದ ಸಚಿವರಿಗೆ ಬುದ್ಧಿ ಹೇಳುವಂತೆ ಪ್ರಸಾದ್ ರಾಜ್ ಕಾಂಚನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…