ಉಡುಪಿ: ಇತ್ತೀಚಿನ ದಿನದಲ್ಲಿ ಬಾಂಗ್ಲಾದೇಶದ ನಾಗರಿಕರು ಕರಾವಳಿ ಜಿಲ್ಲೆಗಳಲ್ಲಿ ವಾಸವಿರುವುದನ್ನು ಕಂಡು ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್ ಕೇಂದ್ರ ಸರ್ಕಾರದ ಆಡಳಿತದ ಬಗ್ಗೆ ತೀವ್ರ ಖಂಡಿಸಿದ್ದಾರೆ .
ಕಳೆದ 11 ವರ್ಷಗಳಿಂದ ಆಡಳಿತ ಮಾಡುತ್ತಿರುವ ಬಿಜೆಪಿ ಸರಕಾರ, ಅದರ ಗೃಹ ಇಲಾಖೆಯ ಆಡಳಿತ ಕ್ರಮದ ಬಗ್ಗೆ, ದೇಶದ ಜನರ ಹಿತದೃಷ್ಟಿ ಮತ್ತು ಭದ್ರತೆಯ ಬಗ್ಗೆ ತೀವ್ರ ನಿರಾಸೆಯನ್ನು ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಆಡಳಿತ ಇರುವ ಸಮಯದಲ್ಲಿ ಬಿಜೆಪಿ ಸರಕಾರವು ನೆರೆದೇಶದ ಜನರು ಭಾರತಕ್ಕೆ ನುಸುಳಿಕೊಂಡು ಬಂದು ಇಲ್ಲಿ ಜೀವನ ಮಾಡಲು ಕಾಂಗ್ರೆಸ್ ಸರಕಾರ ಅವಕಾಶ ಕೊಡುತ್ತಿದ್ದಾರೆಂದು ಸುಳ್ಳು ಆರೋಪ ಮಾಡಿ ಜನರ ದಿಕ್ಕನ್ನು ತಪ್ಪಿಸಿ ಅಧಿಕಾರಕ್ಕೆ ಬಂದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ನೆರೆ ರಾಷ್ಟ್ರ ಬಾಂಗ್ಲಾದೇಶದ ಪ್ರಜೆಗಳು ಭಾರತಕ್ಕೆ ಬಂದು ಅದೂ ಕರಾವಳಿ ಜಿಲ್ಲೆಗಳಲ್ಲಿ ವಾಸಿಸುವಂತೆ ಪ್ರೇರಣೆಯನ್ನು ಬಿಜೆಪಿ ಕೊಡುತ್ತಿದೆ ಎಂದು ಆರೋಪಿಸಿದ್ದಾರೆ.
ಇನ್ನಾದರೂ ಬಿಜೆಪಿ ಆಡಳಿತ ಪಕ್ಷದ ನಾಯಕರು ಬೇರೆ ಪಕ್ಷದ ನಾಯಕರಿಗೆ ವ್ಯಂಗ್ಯ ಮಾಡುವುದನ್ನು ಬಿಟ್ಟು ಆಡಳಿತ ಪಕ್ಷವಾದ ತನ್ನ ಪಕ್ಷದ ಸಚಿವರಿಗೆ ಬುದ್ಧಿ ಹೇಳುವಂತೆ ಪ್ರಸಾದ್ ರಾಜ್ ಕಾಂಚನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…