ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬುಧವಾರ ಶಾಲಾ ಸಮವಸ್ತ್ರದಲ್ಲಿದ್ದ ಬಾಲಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ರಕ್ಷಿಸಿ, ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಿದ್ದಾರೆ.
ರಕ್ಷಿಸಲ್ಪಟ್ಟ ಬಾಲಕ ದೊಡ್ಡಣಗುಡ್ಡೆಯ ಬಾಲಕರ ಬಾಲ ಭವನದಲ್ಲಿ ಆಶ್ರಯ ಪಡೆದಿದ್ದು, ನಿಟ್ಟೂರಿನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 3 ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಬಾಲಕರ ಭವನದಿಂದ ಶಾಲೆಗೆಂದು ತೆರಳಿದ ಈತ, ಶಾಲೆಗೆ ಹೋಗದೆ, ಮರಳಿ ಬಾಲಕರ ಭವನಕ್ಕೂ ಬಾರದೆ ನಾಪತ್ತೆಯಾಗಿದ್ದನು.
ಬಾಲಕ ಕಾಣೆಯಾಗಿರುವ ಬಗ್ಗೆ ಬಾಲಕರ ಭವನದವರು ಪೋಲಿಸ್ ಠಾಣೆಯಲ್ಲಿ ದೂರು ಕೂಡ ನೀಡಿದ್ದರು. ಬಾಲಕ ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರಲ್ಲಿ ಹಣ ಯಾಚಿಸುತ್ತಿದ್ದ ಸಂದರ್ಭ ಅನುಮಾನ ವ್ಯಕ್ತವಾಗಿದ್ದು, ಹಣ ಸಂಗ್ರಹಗೊಂಡ ಬಳಿಕ ಬಾಲಕನು ಬಸ್ಸಿನಲ್ಲಿ ಬೇರೆ ಊರಿಗೆ ಪಲಾಯನಗೈಯುವ ಉದ್ಧೇಶ ಹೊಂದಿದ್ದ ಎಂದು ತಿಳಿದು ಬಂದಿದೆ.
ಬಾಲಕನ ಅನುಮಾನಸ್ಪದ ಚಲನವಲನ ಗಮನಿಸಿದ ಸಮಾಜಸೇವಕ ನಿತ್ಯಾನಂದ ಒಳಕಾಡು, ಬಾಲಕನನ್ನು ವಶಕ್ಕೆ ಪಡೆದು, ಬಳಿಕ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರಿಸಿದ್ದಾರೆ. ಮಕ್ಕಳ ರಕ್ಷಣಾ ಘಟಕದ ಚಕ್ರತೀರ್ಥ, ಪ್ರಮೋದ್, ರಾಜೇಶ್ ಹಸ್ತಾಂತರ ಪ್ರಕ್ರಿಯೆಯಲ್ಲಿ ಉಪಸ್ಥಿತರಿದ್ದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…