Featured

ಉಡುಪಿ: ಬಾಲಕರ ಭವನದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ರಕ್ಷಣೆ – vishwanews24

ಉಡುಪಿ: ಬಾಲಕರ ಭವನದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ರಕ್ಷಣೆ

ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬುಧವಾರ ಶಾಲಾ ಸಮವಸ್ತ್ರದಲ್ಲಿದ್ದ ಬಾಲಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ರಕ್ಷಿಸಿ, ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಿದ್ದಾರೆ.

ರಕ್ಷಿಸಲ್ಪಟ್ಟ ಬಾಲಕ ದೊಡ್ಡಣಗುಡ್ಡೆಯ ಬಾಲಕರ ಬಾಲ ಭವನದಲ್ಲಿ ಆಶ್ರಯ ಪಡೆದಿದ್ದು, ನಿಟ್ಟೂರಿನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 3 ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಬಾಲಕರ ಭವನದಿಂದ ಶಾಲೆಗೆಂದು ತೆರಳಿದ ಈತ, ಶಾಲೆಗೆ ಹೋಗದೆ, ಮರಳಿ ಬಾಲಕರ ಭವನಕ್ಕೂ ಬಾರದೆ ನಾಪತ್ತೆಯಾಗಿದ್ದನು.

ಬಾಲಕ ಕಾಣೆಯಾಗಿರುವ ಬಗ್ಗೆ ಬಾಲಕರ ಭವನದವರು ಪೋಲಿಸ್ ಠಾಣೆಯಲ್ಲಿ ದೂರು ಕೂಡ ನೀಡಿದ್ದರು. ಬಾಲಕ ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರಲ್ಲಿ ಹಣ ಯಾಚಿಸುತ್ತಿದ್ದ ಸಂದರ್ಭ ಅನುಮಾನ ವ್ಯಕ್ತವಾಗಿದ್ದು, ಹಣ ಸಂಗ್ರಹಗೊಂಡ ಬಳಿಕ ಬಾಲಕನು ಬಸ್ಸಿನಲ್ಲಿ ಬೇರೆ ಊರಿಗೆ ಪಲಾಯನಗೈಯುವ ಉದ್ಧೇಶ ಹೊಂದಿದ್ದ ಎಂದು ತಿಳಿದು ಬಂದಿದೆ.

ಬಾಲಕನ ಅನುಮಾನಸ್ಪದ ಚಲನವಲನ ಗಮನಿಸಿದ ಸಮಾಜಸೇವಕ ನಿತ್ಯಾನಂದ ಒಳಕಾಡು, ಬಾಲಕನನ್ನು ವಶಕ್ಕೆ ಪಡೆದು, ಬಳಿಕ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರಿಸಿದ್ದಾರೆ. ಮಕ್ಕಳ ರಕ್ಷಣಾ ಘಟಕದ ಚಕ್ರತೀರ್ಥ, ಪ್ರಮೋದ್, ರಾಜೇಶ್ ಹಸ್ತಾಂತರ ಪ್ರಕ್ರಿಯೆಯಲ್ಲಿ ಉಪಸ್ಥಿತರಿದ್ದರು.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

22 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

28 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

35 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

57 minutes ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago