ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದಲ್ಲಿ ಬುಧವಾರ ಶಾಲಾ ಸಮವಸ್ತ್ರದಲ್ಲಿದ್ದ ಬಾಲಕನನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ರಕ್ಷಿಸಿ, ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಿದ್ದಾರೆ.
ರಕ್ಷಿಸಲ್ಪಟ್ಟ ಬಾಲಕ ದೊಡ್ಡಣಗುಡ್ಡೆಯ ಬಾಲಕರ ಬಾಲ ಭವನದಲ್ಲಿ ಆಶ್ರಯ ಪಡೆದಿದ್ದು, ನಿಟ್ಟೂರಿನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 3 ನೇ ತರಗತಿ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಬಾಲಕರ ಭವನದಿಂದ ಶಾಲೆಗೆಂದು ತೆರಳಿದ ಈತ, ಶಾಲೆಗೆ ಹೋಗದೆ, ಮರಳಿ ಬಾಲಕರ ಭವನಕ್ಕೂ ಬಾರದೆ ನಾಪತ್ತೆಯಾಗಿದ್ದನು.
ಬಾಲಕ ಕಾಣೆಯಾಗಿರುವ ಬಗ್ಗೆ ಬಾಲಕರ ಭವನದವರು ಪೋಲಿಸ್ ಠಾಣೆಯಲ್ಲಿ ದೂರು ಕೂಡ ನೀಡಿದ್ದರು. ಬಾಲಕ ಬಸ್ ನಿಲ್ದಾಣದಲ್ಲಿರುವ ಪ್ರಯಾಣಿಕರಲ್ಲಿ ಹಣ ಯಾಚಿಸುತ್ತಿದ್ದ ಸಂದರ್ಭ ಅನುಮಾನ ವ್ಯಕ್ತವಾಗಿದ್ದು, ಹಣ ಸಂಗ್ರಹಗೊಂಡ ಬಳಿಕ ಬಾಲಕನು ಬಸ್ಸಿನಲ್ಲಿ ಬೇರೆ ಊರಿಗೆ ಪಲಾಯನಗೈಯುವ ಉದ್ಧೇಶ ಹೊಂದಿದ್ದ ಎಂದು ತಿಳಿದು ಬಂದಿದೆ.
ಬಾಲಕನ ಅನುಮಾನಸ್ಪದ ಚಲನವಲನ ಗಮನಿಸಿದ ಸಮಾಜಸೇವಕ ನಿತ್ಯಾನಂದ ಒಳಕಾಡು, ಬಾಲಕನನ್ನು ವಶಕ್ಕೆ ಪಡೆದು, ಬಳಿಕ ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರಿಸಿದ್ದಾರೆ. ಮಕ್ಕಳ ರಕ್ಷಣಾ ಘಟಕದ ಚಕ್ರತೀರ್ಥ, ಪ್ರಮೋದ್, ರಾಜೇಶ್ ಹಸ್ತಾಂತರ ಪ್ರಕ್ರಿಯೆಯಲ್ಲಿ ಉಪಸ್ಥಿತರಿದ್ದರು.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…