Featured

ಉಡುಪಿ: ಬಾಲಕಿಗೆ ಲೈಂಗಿಕ ದೌರ್ಜನ್ಯ : ಅಪರಾಧಿಗೆ 3 ವರ್ಷ ಜೈಲು -Vishwanews24

ಉಡುಪಿ: ಬಾಲಕಿಗೆ ಲೈಂಗಿಕ ದೌರ್ಜನ್ಯ : ಅಪರಾಧಿಗೆ 3 ವರ್ಷ ಜೈಲು -Vishwanews24

ಉಡುಪಿ : ಏಳು ವರ್ಷದ ಬಾಲಕಿ ಸಹೋದರನ ಜೊತೆ ಮನೆಯಲ್ಲಿದ್ದ ವೇಳೆ ಅಕ್ರಮ ಪ್ರವೇಶ ಮಾಡಿ ಆಕೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಮೇಲಿನ ದೋಷಾರೋಪಣೆಗಳು ಸಾಭೀತಾದ ಹಿನ್ನೆಲೆ ದೌರ್ಜನ್ಯವೆಸಗಿದ ಆರೋಪಿ ಜಡ್ಕಲ್ ಮೂಲದ ಪ್ರಮೋದ್ (26) ಮೇಲಿದ್ದ ಅಪರಾಧ ಸಾಬೀತಾದ ಹಿನ್ನಲೆಯಲ್ಲಿ ಆತ ಅಪರಾಧಿ ಎಂದು ಘೋಷಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳು ಕಲ್ಪನಾ ಅವರು ತೀರ್ಪು ಪ್ರಕಟಿಸಿದ್ದಾರೆ.

ಘಟನೆ ವಿವರ: 2016 ಜನವರಿ ತಿಂಗಳಿನಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಕೂಲಿ ಕೆಲಸ ಮಾಡಿಕೊಂಡಿದ್ದ ಪ್ರಮೋದ್ ನೊಂದ ಬಾಲಕಿ ಹಾಗೂ ಆಕೆ ಸಹೋದರ ಮನೆಯಲ್ಲಿರುವಾಗ ಅಕ್ರಮ ಪ್ರವೇಶ‌ ಮಾಡಿದ್ದ. ಸಂತ್ರಸ್ತೆ ಸೋದರ ಮನೆಯಿಂದ ಹೊರಗಡೆ ಹೋದ ಸಂದರ್ಭ ಹೊಂಚು ಹಾಕಿ ಕಾದ ಪ್ರಮೋದ್ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಲು ಮುಂದಾಗಿದ್ದು ಬಾಲಕಿ ಕೂಗಿಕೊಂಡಾಗ ಆಕೆ ತಾಯಿ ಹಾಗೂ ಸಹೋದರ ಬರುವುದನ್ನು ಗಮನಿಸಿದ ಆತ ಬಾಲಕಿ ಹಾಗೂ ಕುಟುಂಬಿಕರಿಗೆ ಕೊಲೆ ಬೆದರಿಕೆ ಹಾಕಿ ಪರಾರಿಯಾಗಿದ್ದ. ಈ ಬಗ್ಗೆ‌ ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ತದನಂತರ ಈ ಪ್ರಕರಣ ಅಂದು ಕುಂದಾಪುರದಲ್ಲಿದ್ದ ಮಹಿಳಾ ಠಾಣೆಗೆ ವರ್ಗಾವಣೆಯಾಗಿದ್ದು ಅಂದಿನ ಮಹಿಳಾ ಠಾಣೆ ಪಿಎಸ್ಐ ಸುಜಾತಾ ಸಾಲ್ಯಾನ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. 17 ಸಾಕ್ಷಿದಾರರಲ್ಲಿ 10 ಮಂದಿ ಸಾಕ್ಷಿ ವಿಚಾರಣೆ ನಡೆಸಿದ್ದು ಪ್ರಮುಖವಾಗಿ ಸಂತ್ರಸ್ತ ಬಾಲಕಿ ಹಾಗೂ ಆಕೆ ಸಹೋದರ ನುಡಿದ ಸಾಕ್ಷಿ ಅಭಿಯೋಜನೆಗೆ ಪೂರಕವಾಗಿದ್ದು ಆರೋಪಿ ಪ್ರಮೋದ್ ಕುಕೃತ್ಯ ನಡೆಸಿರುವುದು ಸಾಭೀತಾಗಿದೆ.

ಶಿಕ್ಷೆ ಪ್ರಮಾಣ:

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಕ್ಕೆ ಪೋಕ್ಸೋ ಕಾಯ್ದೆಯಡಿ 3 ವರ್ಷ ಕಠಿಣ ಸಜೆ, 10 ಸಾವಿರ ದಂಡ, ದಂಡ ಪಾವತಿಸದಿದ್ದಲ್ಲಿ 1 ವರ್ಷ ಸಜೆ, ಅಕ್ರಮ ಪ್ರವೇಶ (ಐಪಿಸಿ ಸೆಕ್ಷನ್ 448), ಅಕ್ರಮ ತಡೆಗೆ (ಐಪಿಸಿ 342) ತಲಾ 6 ತಿಂಗಳಿನಂತೆ 1 ವರ್ಷ ಸಜೆ, 1 ಸಾವಿರ ದಂಡ ತಪ್ಪಿದಲ್ಲಿ 2 ತಿಂಗಳು ಜೈಲು, ಕೊಲೆ ಬೆದರಿಕೆ (ಐಪಿಸಿ ಕಲಂ 506) 1 ವರ್ಷ ಜೈಲು, 1500 ರೂ ದಂಡ ತಪ್ಪಿದಲ್ಲಿ 6 ತಿಂಗಳು ಸಜೆ. ಒಟ್ಟು 12,500 ರೂ. ದಂಡದ ಮೊತ್ತದಲ್ಲಿ 7,500 ರೂ. ಸರಕಾರಕ್ಕೆ ಹಾಗೂ 5 ಸಾವಿರ ಮೊತ್ತವನ್ನು ಬಾಲಕಿಗೆ ನೀಡಲು ಮತ್ತು ಸರಕಾರದಿಂದ ನೊಂದ ಬಾಲಕಿಗೆ 25 ಸಾವಿರ ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ.

ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.

 

 

Vishwa News 24

Recent Posts

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…

6 minutes ago

ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಸಾವು – vishwanews24

ಕೆರೆಯಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ನೀರಿನಲ್ಲಿ ಮುಳುಗಿ ಸಾವು ಚಿಕ್ಕಬಳ್ಳಾಪುರ: ನೀರಿನಲ್ಲಿ ಮುಳುಗುತ್ತಿದ್ದ ಮಕ್ಕಳನ್ನು ರಕ್ಷಿಸಲು ಹೋದ…

34 minutes ago

ಮಲ್ಪೆ ಬಂದರಿನಲ್ಲಿ ಹೊಡೆದಾಟ: 2 ಪ್ರತ್ಯೇಕ ಪ್ರಕರಣ ದಾಖಲು – vishwanews24

ಮಲ್ಪೆ ಬಂದರಿನಲ್ಲಿ ಹೊಡೆದಾಟ: 2 ಪ್ರತ್ಯೇಕ ಪ್ರಕರಣ ದಾಖಲು ಉಡುಪಿ: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿ ಮೀನುಗಾರರ ಎರಡು ತಂಡಗಳ ನಡುವೆ…

41 minutes ago

ಇಂದಿನಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ – vishwanews24

ಇಂದಿನಿಂದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ  ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ…

53 minutes ago

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ – vishwanews24

ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…

21 hours ago

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ – vishwanews24

ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…

21 hours ago