Featured

ಉಡುಪಿ: ಬಾಲಕಿಗೆ ಲೈಂಗಿಕ ದೌರ್ಜನ್ಯ : ಅಪರಾಧಿಗೆ 3 ವರ್ಷ ಜೈಲು -Vishwanews24

ಉಡುಪಿ: ಬಾಲಕಿಗೆ ಲೈಂಗಿಕ ದೌರ್ಜನ್ಯ : ಅಪರಾಧಿಗೆ 3 ವರ್ಷ ಜೈಲು -Vishwanews24

ಉಡುಪಿ : ಏಳು ವರ್ಷದ ಬಾಲಕಿ ಸಹೋದರನ ಜೊತೆ ಮನೆಯಲ್ಲಿದ್ದ ವೇಳೆ ಅಕ್ರಮ ಪ್ರವೇಶ ಮಾಡಿ ಆಕೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿ ಮೇಲಿನ ದೋಷಾರೋಪಣೆಗಳು ಸಾಭೀತಾದ ಹಿನ್ನೆಲೆ ದೌರ್ಜನ್ಯವೆಸಗಿದ ಆರೋಪಿ ಜಡ್ಕಲ್ ಮೂಲದ ಪ್ರಮೋದ್ (26) ಮೇಲಿದ್ದ ಅಪರಾಧ ಸಾಬೀತಾದ ಹಿನ್ನಲೆಯಲ್ಲಿ ಆತ ಅಪರಾಧಿ ಎಂದು ಘೋಷಿಸಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳು ಕಲ್ಪನಾ ಅವರು ತೀರ್ಪು ಪ್ರಕಟಿಸಿದ್ದಾರೆ.

ಘಟನೆ ವಿವರ: 2016 ಜನವರಿ ತಿಂಗಳಿನಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಕೂಲಿ ಕೆಲಸ ಮಾಡಿಕೊಂಡಿದ್ದ ಪ್ರಮೋದ್ ನೊಂದ ಬಾಲಕಿ ಹಾಗೂ ಆಕೆ ಸಹೋದರ ಮನೆಯಲ್ಲಿರುವಾಗ ಅಕ್ರಮ ಪ್ರವೇಶ‌ ಮಾಡಿದ್ದ. ಸಂತ್ರಸ್ತೆ ಸೋದರ ಮನೆಯಿಂದ ಹೊರಗಡೆ ಹೋದ ಸಂದರ್ಭ ಹೊಂಚು ಹಾಕಿ ಕಾದ ಪ್ರಮೋದ್ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಲು ಮುಂದಾಗಿದ್ದು ಬಾಲಕಿ ಕೂಗಿಕೊಂಡಾಗ ಆಕೆ ತಾಯಿ ಹಾಗೂ ಸಹೋದರ ಬರುವುದನ್ನು ಗಮನಿಸಿದ ಆತ ಬಾಲಕಿ ಹಾಗೂ ಕುಟುಂಬಿಕರಿಗೆ ಕೊಲೆ ಬೆದರಿಕೆ ಹಾಕಿ ಪರಾರಿಯಾಗಿದ್ದ. ಈ ಬಗ್ಗೆ‌ ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ತದನಂತರ ಈ ಪ್ರಕರಣ ಅಂದು ಕುಂದಾಪುರದಲ್ಲಿದ್ದ ಮಹಿಳಾ ಠಾಣೆಗೆ ವರ್ಗಾವಣೆಯಾಗಿದ್ದು ಅಂದಿನ ಮಹಿಳಾ ಠಾಣೆ ಪಿಎಸ್ಐ ಸುಜಾತಾ ಸಾಲ್ಯಾನ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. 17 ಸಾಕ್ಷಿದಾರರಲ್ಲಿ 10 ಮಂದಿ ಸಾಕ್ಷಿ ವಿಚಾರಣೆ ನಡೆಸಿದ್ದು ಪ್ರಮುಖವಾಗಿ ಸಂತ್ರಸ್ತ ಬಾಲಕಿ ಹಾಗೂ ಆಕೆ ಸಹೋದರ ನುಡಿದ ಸಾಕ್ಷಿ ಅಭಿಯೋಜನೆಗೆ ಪೂರಕವಾಗಿದ್ದು ಆರೋಪಿ ಪ್ರಮೋದ್ ಕುಕೃತ್ಯ ನಡೆಸಿರುವುದು ಸಾಭೀತಾಗಿದೆ.

ಶಿಕ್ಷೆ ಪ್ರಮಾಣ:

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಕ್ಕೆ ಪೋಕ್ಸೋ ಕಾಯ್ದೆಯಡಿ 3 ವರ್ಷ ಕಠಿಣ ಸಜೆ, 10 ಸಾವಿರ ದಂಡ, ದಂಡ ಪಾವತಿಸದಿದ್ದಲ್ಲಿ 1 ವರ್ಷ ಸಜೆ, ಅಕ್ರಮ ಪ್ರವೇಶ (ಐಪಿಸಿ ಸೆಕ್ಷನ್ 448), ಅಕ್ರಮ ತಡೆಗೆ (ಐಪಿಸಿ 342) ತಲಾ 6 ತಿಂಗಳಿನಂತೆ 1 ವರ್ಷ ಸಜೆ, 1 ಸಾವಿರ ದಂಡ ತಪ್ಪಿದಲ್ಲಿ 2 ತಿಂಗಳು ಜೈಲು, ಕೊಲೆ ಬೆದರಿಕೆ (ಐಪಿಸಿ ಕಲಂ 506) 1 ವರ್ಷ ಜೈಲು, 1500 ರೂ ದಂಡ ತಪ್ಪಿದಲ್ಲಿ 6 ತಿಂಗಳು ಸಜೆ. ಒಟ್ಟು 12,500 ರೂ. ದಂಡದ ಮೊತ್ತದಲ್ಲಿ 7,500 ರೂ. ಸರಕಾರಕ್ಕೆ ಹಾಗೂ 5 ಸಾವಿರ ಮೊತ್ತವನ್ನು ಬಾಲಕಿಗೆ ನೀಡಲು ಮತ್ತು ಸರಕಾರದಿಂದ ನೊಂದ ಬಾಲಕಿಗೆ 25 ಸಾವಿರ ಪರಿಹಾರ ನೀಡಲು ನ್ಯಾಯಾಲಯ ಆದೇಶಿಸಿದೆ.

ಉಡುಪಿಯ ಪೋಕ್ಸೋ ನ್ಯಾಯಾಲಯದ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ ರಾಘವೇಂದ್ರ ಅವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದರು.

 

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago