Featured

ಉಡುಪಿ ಬಾಲ ಕಾರ್ಮಿಕ ಮುಕ್ತ ಜಿಲ್ಲೆ ಆಗಬೇಕು ಡಾ.ನವೀನ್ ಭಟ್ – Vishwanews24

ಉಡುಪಿ ಬಾಲ ಕಾರ್ಮಿಕ ಮುಕ್ತ ಜಿಲ್ಲೆ ಆಗಬೇಕು ಡಾ.ನವೀನ್ ಭಟ್ – Vishwanews24

ಉಡುಪಿ: ಉಡುಪಿ ಚೈಲ್ಡ್ ಲೈನ್ ವತಿಯಿಂದ ನಡೆದ ವಿಶ್ವ ಬಾಲಕಾರ್ಮಿಕ ವಿರೋದಿ ದಿನಾಚರಣೆ ಕಾರ್ಯಕ್ರಮವು ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಅವರು ಜನಜಾಗೃತಿಗಾಗಿ ಈ ಸಂಬಂಧ ಹೊರತಂದ ಪೊಸ್ಟರನ್ನು ಬಿಡುಗಡೆ ಮಾಡುತ್ತಾ ಪ್ರತಿಯೊಂದು ಗ್ರಾಮದಲ್ಲಿ ಬಾಲಕಾರ್ಮಿಕತ್ವಕ್ಕೆ ಮೂಲಕಾರಣ, ಶಾಲೆಯಿಂದ ಹೊರಗುಳಿದ ಮಕ್ಲಳು, ಕೊವಿಡ್ ನಿಂದಾಗಿ ಯಾ ಬೇರೆಬೇರೆ ಕಾರಣ ಗಳಿಂದ ಆಗಿದ್ದು ಅವರನ್ನು ಶಾಲೆಗೆ ಬರುವಂತೆ ಮಾಡುವ ಬಗ್ಗೆ ಸಂಬಂದ ಪಟ್ಟ ಎಲ್ಲರೂ ಪ್ರಯತ್ನಿಸಬೇಕೆಂದು ತಿಳಿಸಿದರು.

ಈ ಬಗ್ಗೆ ಈಗಾಗಲೇ ಸರ್ವೆ ಮಾಡಲು ಗ್ರಾಮ ಶಿಕ್ಷಣ ಸಮಿತಿಗೆ ತಿಳಿಸಿದ್ದು ಅದರ ವರದಿಯ ಅನುಸಾರ ಕ್ರಿಯಾ ಯೋಜನೆ ರೂಪಿಸಿ ಬಾಲಕಾರ್ಮಿಕ ಮುಕ್ತ ಗ್ರಾಮಗಳಾಗುವಂತೆ ಮಾಡುವಲ್ಲಿ ಎಲ್ಲರ ಸಹಬಾಗಿತ್ವವನ್ನು ಕೋರಿದರು. ಹಾಜರಿದ್ದ ಎಲ್ಲಾ ಬಾಗಿದಾರರಿಗೆ ಬಾಲಕಾರ್ಮಿಕ ಕೊನೆಗಾಣಿಸುವಲ್ಲಿ ಅವರ ಬಾಧ್ಯತೆ ಬಗ್ಗೆ ಪ್ರತಿಜ್ಞಾವಿಧಿ ಬೋಧಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ಹಿರಿಯ ಸಿವಿಲ್ ನ್ಯಾಯಾಧೀಶೆ ಕಾವೇರಿ ಅವರು ಸಾರ್ವಜನಿಕರು ಯಾವುದೇ ಮಗು ಎಲ್ಲೆ ಬಾಲಕಾರ್ಮಿಕ ನಾಗಿ ದುಡಿಯುತ್ತಿರುವದನ್ನು ಕಂಡಲ್ಲಿ ಕೂಡಲೆ 1098 ಚೈಲ್ಡ್ ಲೈನ್ ಗೆ ಕರೆ ಮಾಡಿ ತಿಳಿಸಿದಲ್ಲಿ ಅ ಮಗುವನ್ನು ಅದರಿಂದ ಮುಕ್ತಿಗೊಳಿಸಲು ಸಹಾಯ ವಾಗುತ್ತದೆಂದು ತಿಳಿಸಿದರು.

ಎಲ್ಲರ ಸಹಕಾರದಿಂದ ಉಡುಪಿಯು ಬಾಲಕಾರ್ಮಿಕ ಮುಕ್ತ ಜಿಲ್ಲೆ ಆಗಲೆಂದು ಆಶಿಸಿದರು. ಪ್ರಾರಂಬದಲ್ಲಿ ಚೈಲ್ಡ್ ಲೈನ್ ನಿರ್ದೇಶಕ ರಾಮಚಂದ್ರ ಉಪಾಧ್ಯಾಯರು ಸ್ವಾಗತಿಸಿ ಈ ದಿನದ ಮಹತ್ವವನ್ನು ತಿ಼ಳಸಿದರು ಮತ್ತು ಜಿಲ್ಲಾ ಪಂಚಾಯತ್ ಸಹಯೋಗ ದೊಂದಿಗೆ ಬಾಲಕಾರ್ಮಿಕ ಮುಕ್ತ ಗ್ರಾಮಗಳನ್ನು ಗುರುತಿಸಿ ಗೌರವಿಸಲಾಗುವುದೆಂದು ಘೋಷಿಸಿದರು. ಇದೇ ಸಂದರ್ಭದಲ್ಲಿ ಬೆಂಗಳೂರಿಗೆ ವರ್ಗವಾಗಿ ತೆರಳಲಿರುವ ಕಾವೇರಿಯವರನ್ನು ಚೈಲ್ಡ್ ಲೈನ್ ವತಿಯಿಂದ ಅಭಿನಂದಿಸಲಾ ಯ್ತು. ಈ ಕಾರ್ಯಕ್ರಮದಲ್ಲಿ ಮಾಜಿ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ನಾರಾಯಣ ಬಿ.ಕೆ., ಜಿಲ್ಲಾಪಂಚಾಯತ್ ಉಪ ಕಾರ್ಯದರ್ಶಿ ವರ್ಣೇಕರ್, ಕಾರ್ಮಿಕ ನಿರೀಕ್ಷಕ ಪ್ರವೀಣ್, ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಚೈಲ್ಡ್ ಲೈನ್ ಸಹನಿರ್ಧೇಶಕ ಗುರುರಾಜ. ಭಟ್, ಸಂಯೋಜಕಿ ಕು.ಕಸ್ತೂರಿ ಮತ್ತು ತಂಡದ ಇತರ ಸದಸ್ಯರು ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago