ಉಡುಪಿ : “ಉಡುಪಿ ಬಿಆರ್ಎಸ್ ಆಸ್ಪತ್ರೆಯ ಸಿಬ್ಬಂದಿಗಳ ವೇತನವನ್ನು ಸರ್ಕಾರದ ಮೂಲಕ ಕೊಡಿಸುವ ಜವಾಬ್ದಾರಿ ನನ್ನದು” ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದ್ದಾರೆ.
“ಉಡುಪಿ ಬಿಆರ್ಎಸ್ ಆಸ್ಪತ್ರೆಯ ಸಿಬ್ಬಂದಿಗಳ ವೇತನ ವಿಳಂಬವಾಗುತ್ತಿರುವುದನ್ನು ಖಂಡಿಸಿ ಬುಧವಾರದಿಂದ ಅನಿಷ್ಟಾವಧಿವರೆಗೆ ಧರಣಿ ಕುಳಿತು ಕೊಳ್ಳವ ವಿಚಾರದ ಬಗ್ಗೆ ನಾವು ಈಗಾಗಲೇ ಸಿಬ್ಬಂದಿಗಳ ಬಳಿ ಮಾತಾಡಿದ್ದೇವೆ. ಸುವರ್ಣ ಆರೋಗ್ಯ ಟ್ರಸ್ಟ್ನಿಂದ ಆಯುಷ್ಮಾನ್ಗೆ ಹಣ ಬರಲು ಬಾಕಿ ಇದೆ . ಸುಮಾರು 90 ಲಕ್ಷ ರೂ ಜಿಲ್ಲಾಸ್ಪತ್ರೆ ಬರಲು ಬಾಕಿ ಇದೆ. ಇತ್ತೀಚೆಗೆ ಆಯುಷ್ಮಾನ್ ಸಿಇಒ ಜೊತೆ ಮಾತನಾಡಿದ್ದು, 20 ಲಕ್ಷ ಬಿಡುಗಡೆ ಮಾಡಿದೆ. ಕಳೆದ ಬಾರಿ ಬಿಡುಗಡೆ ಮಾಡಿದ ಹಣವನ್ನು ಆಡಳಿತ ಮಂಡಳಿಯವರೇ ತೆಗೆದು ಕೊಂಡರು. ಈ ಬಾರಿ ಡಿ ಗ್ರೇಡ್ ಸಿಬ್ಬಂದಿಯಿಂದ ಬಾಕಿ ವೇತನ ಕೊಡಲು ಪ್ರಾರಂಭ ಮಾಡುತ್ತೇವೆ. ಶಾಸಕನಾಗಿ ನಾನು ಭರವಸೆ ಕೊಟ್ಟಿದ್ದೇನೆ. ಆ ಸಿಬ್ಬಂದಿಗಳು ಎಲ್ಲಿವರೆಗೆ ಕೆಲಸ ಮಾಡುತ್ತಾರೋ ಸರಕಾರ ತೆಗದುಕೊಳ್ಳುವವರೆಗೆ ಸಂಪೂರ್ಣ ಸಂಬಳವನ್ನು ಸರಕಾರದ ಮೂಲಕ ಕೊಡಿಸುವ ಜವಾಬ್ದಾರಿ ನನ್ನದು” ಎಂದಿದ್ದಾರೆ.
“70 ಸರ್ಕಾರಿ ಘಟಕ ಮತ್ತು 130 ಮಂದಿ ಸಿಬ್ಬಂದಿ ಘಟಕವನ್ನು ಗುತ್ತಿಗೆ ಆಧಾರದ ಮೇಲೆ ನಡೆಸುವ ಚಿಂತನೆಯಿತ್ತು. ಹಾಗಾಗಿ ಇದಕ್ಕೆ ಧರಣಿ ಕುಳಿತು ಸರಕಾರವನ್ನು ಎಚ್ಚರಿಸುವ ಕೆಲಸ ಮಾಡಬೇಕಾಗಿಲ್ಲ. ಎಲ್ಲರಿಗೂ ಪರಿಸ್ಥಿತಿಯ ಅರಿವು ಇದೆ. ಸಿಬ್ಬಂದಿಗಳು ಧರಣಿ ಕೂತರೆ ರೋಗಿಗಳಿಗೆ ಸಮಸ್ಯೆ ಆಗುತ್ತದೆ. ಎಲ್ಲರಿಗೂ ಸ್ವರ್ಣ ಆರೋಗ್ಯದಡಿ ವೇತನ ಬಾಕಿ ಇದೆ. ನಾವೇ ಒತ್ತಾಯ ಹಾಕಿ ತೆಗೆಸಿ ಕೊಡುತ್ತಾ ಇದ್ದೇವೆ. ಸರ್ಕಾರ ಬದಲಾವಣೆ ಆದ್ದರಿಂದ ವೇತನ ವಿಳಂಬವಾಗಿದೆ ಅಷ್ಟೆ. ನಾವೂ ಇದೇ ವಿಚಾರದ ಬೆಂಬಲಿಸುತ್ತಿದ್ದೇವೆ. ಇದೇ ಗುರುವಾರ ಮುಖ್ಯಮಂತ್ರಿ, ಆರೋಗ್ಯ ಇಲಾಖೆಯ ಜೊತೆ ಚರ್ಚೆಯಡಿ ಒಂದು ತಾರ್ಕಿಕ ನಿರ್ಧಾರಕ್ಕೆ ಬರುತ್ತೇವೆ” ಎಂದು ಶಾಸಕ ಭಟ್ ಮನವಿ ಮಾಡಿಕೊಂಡರು
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…