Featured

ಉಡುಪಿ ಬಿಆರ್ ಶೆಟ್ಟಿ ಹೆರಿಗೆ ಆಸ್ಪತ್ರೆ : ರಘುಪತಿ ಭಟ್‌ ಅವರ ನಿರ್ಲಕ್ಷ್ಯದ ಪರಿಣಾಮ ಇಂದು ಸಿಬಂದಿಗಳು ಕಷ್ಟ ಪಡುವಂತಾಗಿದೆ : ಡಿಯೋನ್‌ ಡಿಸೋಜಾ ಆರೋಪ – Vishwanews24

ಪ್ರಮೋದ್‌ ಮಧ್ವರಾಜ್‌ ಅವರ ನೇತೃತ್ವದಲ್ಲಿ ನಿರ್ಮಾಣಗೊಂಡ ಆಸ್ಪತ್ರೆ ಇಂದು ರಾಜಕೀಯ ಆಟಕ್ಕೆ ಬಲಿಯಾಗುತ್ತಿರುವುದು ವಿಪರ್ಯಾಸ..

ಉಡುಪಿಯ ಶಾಸಕರು ವಸ್ತ್ರ ಸಂಹಿತೆಯ ವಿಚಾರವನ್ನು ಎತ್ತಿಕೊಂಡು ಶಾಂತಿಯನ್ನು ಹಾಳು ಮಾಡುವ ವಿಚಾರದಲ್ಲಿ ಮಗ್ನರಾಗಿದ್ದಾರೆ..

ಆಸ್ಪತ್ರೆಯ ಸಿಬಂದಿಗಳ ವೇತನವನ್ನು ತಡೆಹಿಡಿದಿರುವುದು ನಿರ್ಲಕ್ಷ್ಯ ಮತ್ತು ಅಮಾನವೀಯ ವರ್ತನೆಯಾಗಿದ್ದು ಜಿಲ್ಲಾ ಯುವ ಕಾಂಗ್ರೆಸ್‌ ಸರಕಾರದ ಧೋರಣೆಯನ್ನು ಖಂಡಿಸುತ್ತದೆ..

ಉಡುಪಿ: ಕೂಸಮ್ಮ ಶಂಭು ಶೆಟ್ಟಿ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಪ್ರಸ್ತುತ ಸ್ಥಿತಿಗತಿಗೆ ಕಾರಣವಾದ ಪ್ರಸ್ತುತ ಶಾಸಕ ರಘುಪತಿ ಭಟ್‌ ಅವರಿಗೆ ಆರೋಗ್ಯದ ವಿಚಾರದಲ್ಲಿ ಇರುವ ಕಾಳಜಿಯನ್ನು ಏನು ಎನ್ನುವುದನ್ನು ಎದ್ದು ತೋರಿಸುತ್ತದೆ. ಅವರ ದಿವ್ಯ ನಿರ್ಲಕ್ಷ್ಯದ ಪರಿಣಾಮ ಇಂದು ಅಲ್ಲಿನ ಸಿಬಂದಿಗಳು ಕಷ್ಟ ಪಡುವಂತಾಗಿದೆ ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್‌ ಕಾರ್ಯದರ್ಶಿ ಡಿಯೋನ್‌ ಡಿಸೋಜಾ ಆರೋಪಿಸಿದ್ದಾರೆ.

ಜಿಲ್ಲೆಯ ಮಹೀಳೆಯರಿಗೆ ಮತ್ತು ಮಕ್ಕಳಿಗೆ ಉಚಿತವಾಗಿ ಉತ್ತಮ ಆರೋಗ್ಯ ಸವಲತ್ತುಗಳು ಸಿಗಬೇಕು ಎಂಬ ಕನಸನ್ನು ಇಟ್ಟುಕೊಂಡು ಹಿಂದಿನ ಸಚಿವರಾದ ಪ್ರಮೋದ್‌ ಮಧ್ವರಾಜ್‌ ಅವರ ನೇತೃತ್ವದಲ್ಲಿ ನಿರ್ಮಾಣಗೊಂಡ ಆಸ್ಪತ್ರೆ ಇಂದು ರಾಜಕೀಯ ಆಟಕ್ಕೆ ಬಲಿಯಾಗುತ್ತಿರುವುದು ವಿಪರ್ಯಾಸವಾಗಿದೆ. ಪ್ರಸ್ತುತ ಸರಕಾರ ಆರೋಗ್ಯ ಕಾರ್ಯಕರ್ತರನ್ನು ಯಾವ ರೀತಿ ನಡೆಸಿಕೊಳ್ಳುತ್ತದೆ ಎನ್ನುವುದಕ್ಕೆ ಉತ್ತಮ ಉದಾಹರಣೆ ಇದಾಗಿದೆ. ಕೋವಿಡ್‌ ಸಮಯದಲ್ಲಿ ಅವರುಗಳು ನೀಡಿದ ಅಪರಿಮಿತಿ ಸೇವೆಯನ್ನು ಸರಕಾರ ಮರೆತಂತಿದೆ.

ಉಡುಪಿಯ ಶಾಸಕರು ವಸ್ತ್ರ ಸಂಹಿತೆಯ ವಿಚಾರವನ್ನು ಎತ್ತಿಕೊಂಡು ಶಾಂತಿಯನ್ನು ಹಾಳು ಮಾಡುವ ವಿಚಾರದಲ್ಲಿ ಮಗ್ನರಾಗಿದ್ದಾರೆ ವಿನಹ ಆರೋಗ್ಯ ಕಾರ್ಯಕರ್ತರ ನೋವುಗಳನ್ನು ಸಂಪೂರ್ಣವಾಗಿ ಮರೆತಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಆಸ್ಪತ್ರೆಯ ಎಲ್ಲಾ ಸಿಬಂದಿಗಳು ಪ್ರತಿಭಟನೆಯಲ್ಲಿ ನಿರತರಾಗಿದ್ದರೂ ಕೂಡ ಶಾಸಕರು ದಿವ್ಯ ಮೌನವನ್ನು ವಹಿಸಿದ್ದು ನಾಚಿಕೇಗೇಡಿನ ಸಂಗತಿಯಾಗಿದೆ.

15000 ಕ್ಕೂ ಅಧಿಕ ಹೆರಿಗೆಗಳನ್ನು ಮಾಡುವ ಉತ್ತಮ ಸೇವೆಯನ್ನು ನೀಡಿರುವ ಆಸ್ಪತ್ರೆಯ ಸಿಬಂದಿಗಳ ವೇತನವನ್ನು ತಡೆಹಿಡಿದಿರುವುದು ನಿರ್ಲಕ್ಷ್ಯ ಮತ್ತು ಅಮಾನವೀಯ ವರ್ತನೆಯಾಗಿದ್ದು ಜಿಲ್ಲಾ ಯುವ ಕಾಂಗ್ರೆಸ್‌ ಸರಕಾರದ ಧೋರಣೆಯನ್ನು ಖಂಡಿಸುತ್ತದೆ. ಸರಕಾರ ಕೂಡಲೇ ಮಧ್ಯಪ್ರವೇಶಿಸಿ ಸಿಬಂದಿಗಳಿಗೆ ಬಾಕಿ ಇರುವ ವೇತನವನ್ನು ಪಾವತಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago