ಉಡುಪಿ: ಬಿಜೆಪಿಗರು ಪ್ರತಿನಿತ್ಯ ಅದೇ ರಾಗ ಅದೇ ಹಾಡು ಎಂಬಂತೆ ಕಾಂಗ್ರೆಸ್ ಮುಕ್ತ ಭಾರತ ಎಂಬ ಘೋಷವಾಕ್ಯವನ್ನು ಕೈ ಬಿಡುವುದು ಉತ್ತಮ. ಕಾಂಗ್ರೆಸ್ ಮುಕ್ತ ಭಾರತ ಅಥವಾ ಕರ್ನಾಟಕ ನಿರ್ಮಾಣ ಮಾಡುವುದು ಕೇವಲ ಕನಸಿನ ಮಾತು ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಗೀತಾ ವಾಗ್ಲೆ ಹೇಳಿದ್ದಾರೆ.
ಈ ಹಿಂದೆ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕೂಡ ಬಿಜೆಪಿಗರು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವುದಾಗಿ ಹೇಳಿಕೊಂಡು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಂದ ಹಿಡಿದು ಘಟಾನುಘಟಿ ನಾಯಕರು ಪ್ರಚಾರ ಮಾಡಿದರೂ ಕೂಡ ಬಿಜೆಪಿ ಪಕ್ಷವನ್ನು ರಾಜ್ಯದ ಜನತೆ ತಿರಸ್ಕಾರ ಮಾಡಿ 136 ಸೀಟುಗಳನ್ನು ಗೆಲ್ಲಿಸುವುದರ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರವನ್ನು ನೀಡಿದ್ದಾರೆ ಎನ್ನುವುದನ್ನು ಬಿಜೆಪಿಗರು ಮರೆಯಬಾರದು.
ಅದರಂತೆ ಇತ್ತೀಚೆಗೆ ನಡೆದ ತೆಲಂಗಾಣ ರಾಜ್ಯದಲ್ಲಿ ಕೂಡ ಹಿಂದಿನ ಬಿ.ಆರ್.ಎಸ್ ಪಕ್ಷವನ್ನು ಮನೆಗೆ ಕಳುಹಿಸಿ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಒಲವು ತೋರಿದ್ದಾರೆ. ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರಂಟಿ ಭರವಸೆಗಳನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗುತ್ತಿದ್ದು ಇದರ ಫಲಿತಾಂಶ ಮುಂದಿನ ದಿನಗಳಲ್ಲಿ ಬಿಜೆಪಿಗರು ತಮ್ಮ ಕಣ್ಣಾರೇ ನೋಡಲಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಕೆಲವೊಂದು ಕಾರಣಗಳಿಗಾಗಿ ಬಿಜೆಪಿ ಪಕ್ಷದ ಶಾಸಕರು ಆರಿಸಿ ಬಂದರೂ ಕೂಡ ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳ ಬಗ್ಗೆ ಗಮನ ಹರಿಸದೇ ಕೇವಲ ತಮ್ಮ ಸ್ವಂತ ಲಾಭಗಳನ್ನೇ ನೋಡಿಕೊಂಡು ಇರುವುದು ಮತ ಹಾಕಿ ಆರಿಸಿದ ಜನರಿಗೆ ಮಾಡುವ ಅತೀ ದೊಡ್ಡ ದ್ರೋಹವಾಗಿದ್ದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಇದಕ್ಕೆ ಜಿಲ್ಲೆಯ ಜನರು ತಕ್ಕ ಉತ್ತರ ನೀಡಿಲಿದ್ದಾರೆ.
ಜಿಲ್ಲೆಯಲ್ಲಿನ ಜ್ವಲಂತ ಸಮಸ್ಯೆಗಳಿಗೆ ದನಿಯಾಗಬೇಕಿದ್ದ ಬಿಜೆಪಿಯ ಶಾಸಕರು ಹಾಗೂ ಸಂಸದರು ಇದರ ಪರಿವೆಯೇ ಇಲ್ಲದಂತೆ ವರ್ತಿಸುತ್ತಿದ್ದಾರೆ. ಹಲವು ವರ್ಷಗಳಿಂದ ಬಾಕಿ ಇರುವ ಪರ್ಕಳ ರಸ್ತೆಯ ಕಾಮಗಾರಿ ಮುಗಿಯದಿರುವುದು, ಅಪೂರ್ಣವಾಗಿರುವ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ, ಕುಂಟುತ್ತಾ ಸಾಗುತ್ತಿರುವ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ, ಇನ್ನೂ ಕೂಡ ಆರಂಭವಾಗದೇ ಪ್ರತಿನಿತ್ಯ ಸಾವಿರಾರು ಜನರು ತೊಂದರೆ ಅನುಭವಿಸುತ್ತಿರುವ ಮಲ್ಪೆ ತೀರ್ಥಹಳ್ಳೀ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹೀಗೆ ಒಂದೇ ಎರಡೇ. ಯಾವುದೇ ಅಭಿವೃದ್ಧಿಪರ ಚಿಂತನೆ ಮಾಡದೇ ಕೇವಲ ತಮ್ಮ ಸ್ವಂತ ವರ್ಚಸ್ಸು ಬೆಳೆಸುವುದರಲ್ಲೇ ಬಿಜೆಪಿಗರು ಮಗ್ನರಾಗಿದ್ದು ಮುಂದಿನ ದಿನಗಳಲ್ಲಿ ಬಿಜೆಪಿ ಮುಕ್ತ ಕರ್ನಾಟಕ ಹಾಗೂ ಭಾರತ ಮಾಡುವಲ್ಲಿ ಜನರೇ ಕಾರ್ಯತತ್ಪರರಾಗುತ್ತಾರೆ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶ್ರೀಮತಿ ಗೀತಾ ವಾಗ್ಲೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್ಎಸ್ಎಲ್ಸಿ ಫಲಿತಾಂಶ: ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶ್ಲಾಘನೆ ಉಡುಪಿ : ಈ ಬಾರಿಯ ಎಸ್ಎಸ್ಎಲ್ಸಿ…
ಕರಾವಳಿ ಕರ್ನಾಟಕದಲ್ಲಿ ತಾಪಮಾನ ಏರಿಕೆ : 5 ದಿನ ಯಲ್ಲೋ ಅಲರ್ಟ್ ಮಂಗಳೂರು : ಕರಾವಳಿ ಕರ್ನಾಟಕವು ಪ್ರಸ್ತುತ ತೀವ್ರ…
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…