Featured

ಉಡುಪಿ: ಬಿಜೆಪಿಗರೇ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಕೇವಲ ಕನಸಿನ ಮಾತು : ಗೀತಾ ವಾಗ್ಲೆ – vishwanews24

ಮುಂದಿನ ದಿನಗಳಲ್ಲಿ ಬಿಜೆಪಿ ಮುಕ್ತ ಕರ್ನಾಟಕ ಹಾಗೂ ಭಾರತ ಮಾಡುವಲ್ಲಿ ಜನರೇ ಕಾರ್ಯತತ್ಪರರಾಗುತ್ತಾರೆ..

ಉಡುಪಿ: ಬಿಜೆಪಿಗರು ಪ್ರತಿನಿತ್ಯ ಅದೇ ರಾಗ ಅದೇ ಹಾಡು ಎಂಬಂತೆ ಕಾಂಗ್ರೆಸ್ ಮುಕ್ತ ಭಾರತ ಎಂಬ ಘೋಷವಾಕ್ಯವನ್ನು ಕೈ ಬಿಡುವುದು ಉತ್ತಮ. ಕಾಂಗ್ರೆಸ್ ಮುಕ್ತ ಭಾರತ ಅಥವಾ ಕರ್ನಾಟಕ ನಿರ್ಮಾಣ ಮಾಡುವುದು ಕೇವಲ ಕನಸಿನ ಮಾತು ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಗೀತಾ ವಾಗ್ಲೆ ಹೇಳಿದ್ದಾರೆ.

ಈ ಹಿಂದೆ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕೂಡ ಬಿಜೆಪಿಗರು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವುದಾಗಿ ಹೇಳಿಕೊಂಡು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಂದ ಹಿಡಿದು ಘಟಾನುಘಟಿ ನಾಯಕರು ಪ್ರಚಾರ ಮಾಡಿದರೂ ಕೂಡ ಬಿಜೆಪಿ ಪಕ್ಷವನ್ನು ರಾಜ್ಯದ ಜನತೆ ತಿರಸ್ಕಾರ ಮಾಡಿ 136 ಸೀಟುಗಳನ್ನು ಗೆಲ್ಲಿಸುವುದರ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರವನ್ನು ನೀಡಿದ್ದಾರೆ ಎನ್ನುವುದನ್ನು ಬಿಜೆಪಿಗರು ಮರೆಯಬಾರದು.

ಅದರಂತೆ ಇತ್ತೀಚೆಗೆ ನಡೆದ ತೆಲಂಗಾಣ ರಾಜ್ಯದಲ್ಲಿ ಕೂಡ ಹಿಂದಿನ ಬಿ.ಆರ್.ಎಸ್ ಪಕ್ಷವನ್ನು ಮನೆಗೆ ಕಳುಹಿಸಿ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಒಲವು ತೋರಿದ್ದಾರೆ. ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರಂಟಿ ಭರವಸೆಗಳನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗುತ್ತಿದ್ದು ಇದರ ಫಲಿತಾಂಶ ಮುಂದಿನ ದಿನಗಳಲ್ಲಿ ಬಿಜೆಪಿಗರು ತಮ್ಮ ಕಣ್ಣಾರೇ ನೋಡಲಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಕೆಲವೊಂದು ಕಾರಣಗಳಿಗಾಗಿ ಬಿಜೆಪಿ ಪಕ್ಷದ ಶಾಸಕರು ಆರಿಸಿ ಬಂದರೂ ಕೂಡ ಯಾವುದೇ ರೀತಿಯ ಅಭಿವೃದ್ಧಿ ಕೆಲಸಗಳ ಬಗ್ಗೆ ಗಮನ ಹರಿಸದೇ ಕೇವಲ ತಮ್ಮ ಸ್ವಂತ ಲಾಭಗಳನ್ನೇ ನೋಡಿಕೊಂಡು ಇರುವುದು ಮತ ಹಾಕಿ ಆರಿಸಿದ ಜನರಿಗೆ ಮಾಡುವ ಅತೀ ದೊಡ್ಡ ದ್ರೋಹವಾಗಿದ್ದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಇದಕ್ಕೆ ಜಿಲ್ಲೆಯ ಜನರು ತಕ್ಕ ಉತ್ತರ ನೀಡಿಲಿದ್ದಾರೆ.

ಜಿಲ್ಲೆಯಲ್ಲಿನ ಜ್ವಲಂತ ಸಮಸ್ಯೆಗಳಿಗೆ ದನಿಯಾಗಬೇಕಿದ್ದ ಬಿಜೆಪಿಯ ಶಾಸಕರು ಹಾಗೂ ಸಂಸದರು ಇದರ ಪರಿವೆಯೇ ಇಲ್ಲದಂತೆ ವರ್ತಿಸುತ್ತಿದ್ದಾರೆ. ಹಲವು ವರ್ಷಗಳಿಂದ ಬಾಕಿ ಇರುವ ಪರ್ಕಳ ರಸ್ತೆಯ ಕಾಮಗಾರಿ ಮುಗಿಯದಿರುವುದು, ಅಪೂರ್ಣವಾಗಿರುವ ಇಂದ್ರಾಳಿ ರೈಲ್ವೆ ಮೇಲ್ಸೇತುವೆ ಕಾಮಗಾರಿ, ಕುಂಟುತ್ತಾ ಸಾಗುತ್ತಿರುವ ಸಂತೆಕಟ್ಟೆ ಅಂಡರ್ ಪಾಸ್ ಕಾಮಗಾರಿ, ಇನ್ನೂ ಕೂಡ ಆರಂಭವಾಗದೇ ಪ್ರತಿನಿತ್ಯ ಸಾವಿರಾರು ಜನರು ತೊಂದರೆ ಅನುಭವಿಸುತ್ತಿರುವ ಮಲ್ಪೆ ತೀರ್ಥಹಳ್ಳೀ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹೀಗೆ ಒಂದೇ ಎರಡೇ. ಯಾವುದೇ ಅಭಿವೃದ್ಧಿಪರ ಚಿಂತನೆ ಮಾಡದೇ ಕೇವಲ ತಮ್ಮ ಸ್ವಂತ ವರ್ಚಸ್ಸು ಬೆಳೆಸುವುದರಲ್ಲೇ ಬಿಜೆಪಿಗರು ಮಗ್ನರಾಗಿದ್ದು ಮುಂದಿನ ದಿನಗಳಲ್ಲಿ ಬಿಜೆಪಿ ಮುಕ್ತ ಕರ್ನಾಟಕ ಹಾಗೂ ಭಾರತ ಮಾಡುವಲ್ಲಿ ಜನರೇ ಕಾರ್ಯತತ್ಪರರಾಗುತ್ತಾರೆ ಎಂದು ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷೆ ಶ್ರೀಮತಿ ಗೀತಾ ವಾಗ್ಲೆ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

20 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

20 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

21 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

21 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

21 hours ago