ಉಡುಪಿ :ಇಂದು ಕುತೂಹಲದಿಂದ ಕಾಯುತ್ತಿದ್ದ ಸ್ಥಳೀಯ ಸಂಸ್ಥೆಗಳು ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು ವಿಧಾನಸಭಾ ಚುನಾವಣೆಯ ಫಲಿತಾಂಶದಂತೆ ಜಿಲ್ಲೆಯಲ್ಲಿ ಕಾಂಗ್ರೆಸ್ ಧೂಳೀಪಟವಾಗಿದೆ. ವಿಶೇಷ ಏನೆಂದರೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ವಾರ್ಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತಿದ್ದಾರೆ.
ಉಡುಪಿ ನಗರಸಭೆ :
ಉಡುಪಿ ನಗರಸಭೆಯಲ್ಲಿ ಬಿಜೆಪಿ ಪಾರಮ್ಯ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ನಿಂದ ಅಧಿಕಾರವನ್ನು ಕಸಿದುಕೊಂಡಿದೆ. ಉಡುಪಿ ನಗರಸಭೆ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿತ್ತು. ಈ ನಗರ ಸಭೆ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೂಲಕ ದೇಶದಲ್ಲೇ ಬಿಜೆಪಿಗೆ ಪ್ರಥಮ ಅಧಿಕಾರ ಕೊಟ್ಟಿದೆ. ಈ ನಗರಸಭೆಯಲ್ಲಿ 1998 ರಲ್ಲಿ ಜನಸಂಘ ಅಧಿಕಾರ ಹಿಡಿದಿತ್ತು. ಆದರೆ ಈಗ ಸುವರ್ಣ ವರ್ಷದಲ್ಲಿ ಬಿಜೆಪಿಗೆ ಗೆಲುವು ಲಭಸಿದೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಗೆ ಭಾರೀ ಮುಖಭಂಗವಾಗಿದ್ದು, ಪ್ರಮೋದ್ ಮಧ್ವರಾಜ್ ವಾರ್ಡ್ ನಲ್ಲೂ ಬಿಜೆಪಿ ಗೆಲುವು ಸಾಧಿಸಿದೆ. ನಗರಸಭಾ ಮಾಜಿ ಅಧ್ಯಕ್ಷೆ ಮೀನಾಕ್ಷಿ ಬನ್ನಂಜೆಗೆ ಸೋಲಾಗಿದೆ. ಈ ನಗರದಸಭೆಯಲ್ಲಿ ಬಿಜೆಪಿ 31 ಮತ್ತು ಕಾಂಗ್ರೆಸ್4 ಸ್ಥಾನಗಳನ್ನು ಗಳಿಸಿದೆ.
ಉಡುಪಿ ನಗರಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಸಾಧಿಸಿದ್ದು, ಅಧಿಕಾರದ ಚುಕ್ಕಾಣಿ ಹಿಡಿದಿದೆ. 35 ವಾರ್ಡ್ಗಳ ಪೈಕಿ 21 ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡು ಭರ್ಜರಿ ಜಯಗಳಿಸಿದೆ.
ಇಲ್ಲಿ ಕಾಂಗ್ರೆಸ್ ಕೇವಲ 4ರಲ್ಲಿ ಮಾತ್ರ ಜಯ ಗಳಿಸಿ ಹೀನಾಯ ಸೋಲು ಕಂಡಿದೆ. ಬಿಜೆಪಿ ಜಯಗಳಿಸುವ ಮೂಲಕ ಈ ಹಿಂದೆ ಆಡಳಿತವಿದ್ದ ಕಾಂಗ್ರೆಸ್ನಿಂದ ಉಡುಪಿ ನಗರಸಭೆಯನ್ನು ಬಿಜೆಪಿ ಮತ್ತೆ ತನ್ನ ಮುಷ್ಟಿಗೆ ಪಡೆದುಕೊಂಡಿದೆ.
ಕುಂದಾಪುರ ಪುರಸಭೆ
ಈ ಪುರಸಭೆಯಲ್ಲಿ ಬಿಜೆಪಿ 14, ಕಾಂಗ್ರೆಸ್ 8 ಮತ್ತು ಪಕ್ಷೇತರ 1 ಗೆಲವು ಸಾಧಿಸಿದ್ದು, ಬಿಜೆಪಿ ಅಧಿಕಾರಕ್ಕೆ ಏರಲಿದೆ. ಬಿಜೆಪಿ ಬಂಡಾಯ ಅಭ್ಯರ್ಥಿ ರಾಜೇಶ್ ಕಾವೇರಿಗೆ ಬಿಜೆಪಿಯೆದುರು ಸೋಲಾಗಿದ್ದು, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮತ್ತೆ ಮೇಲುಗೈ ಸಾಧಿಸಿದ್ದಾರೆ. ಇದರಿಂದ ಎಂಎಲ್ಸಿ ಪ್ರತಾಪ್ ಚಂದ್ರ ಶೆಟ್ಟಿಗೆ ಮುಖಭಂಗವಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…