Featured

ಉಡುಪಿ: ಬಿಜೆಪಿಯಲ್ಲಿ ನನಗೆ ಅಧಿಕಾರ ಕೊಡಲಿ , ಕೊಡದೇ ಇರಲಿ ನಾನು ಕೊನೆಯ ಉಸಿರಿನವರೆಗೂ ಬಿಜೆಪಿಯಲ್ಲಿಯೇ ಇರುತ್ತೇನೆ : ಪ್ರಮೋದ್ ಮಧ್ವರಾಜ್ – Vishwanews24

ಉಡುಪಿ: ಬಿಜೆಪಿಯಲ್ಲಿ ನನಗೆ ಅಧಿಕಾರ ಕೊಡಲಿ ಅಥವಾ ಕೊಡದೇ ಇರಲಿ ನಾನು ಕೊನೆಯ ಉಸಿರಿನವರೆಗೂ ಬಿಜೆಪಿಯಲ್ಲಿಯೇ ಇರುತ್ತೇನೆ : ಪ್ರಮೋದ್ ಮಧ್ವರಾಜ್

ಉಡುಪಿ: ನಾನು ಹೋದಲೆಲ್ಲಾ ಜೆಡಿಎಸ್ ನನ್ನ ಹಿಂದೇಯೇ ಬರುತ್ತಿದೆ ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇತ್ತು, ಈ ಬಾರಿ ಬಿಜೆಪಿ – ಜೆಡಿಎಸ್ ಮೈತ್ರಿ ಇದೆ ಹೀಗಾಗಿ ನನಗೆ ಸಂತೋಷ ಇದೆ. ನನಗೆ ಶಾಲು ಹಾಕಿ ಅಭ್ಯಾಸ ಇದೆ ಎಂದು ಮಾಜಿ ಸಚಿವ, ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಪತ್ರಿಕಾಭವನದಲ್ಲಿ ಪತ್ರಕರ್ತರೊಂದಿಗೆ ನಡೆದ ಸಂವಾದ ದಲ್ಲಿ ಮಾತನಾಡಿದ ಅವರು , ಆಕಾಂಕ್ಷಿಯಾಗುವುದರಲ್ಲಿ ಯಾವುದೇ ತಪ್ಪು ಇಲ್ಲ. ಎಲ್ಲರೂ ಆಸೆಯಿಂದಲೇ ರಾಜಕೀಯಕ್ಕೆ ಬರುತ್ತಾರೆ. 3-4 ತಿಂಗಳ ಹಿಂದೇಯೇ ನಾನು ಟಿಕೆಟ್ ಆಕಾಂಕ್ಷಿ ಎಂದು ಘೋಷಿಸಿದ್ದೆ ಎಂದರು.

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 8 ವಿಧಾನಸಬಾ ಕ್ಷೇತ್ರಗಳು ಇವೆ. ಹೀಗಾಗಿ ಲೆಕ್ಕ ಹಾಕಿದರೆ ಕಡಿಮೆ ಎಂದರೂ ಇಲ್ಲಿ ಕಾರ್ಯಕರ್ತರ ಭೇಟಿಗೆ ಸುಮಾರು 24 ತಿಂಗಳ ಕಾಲಾವಕಾಶ ಬೇಕಾಗಬಹುದು. ಹೀಗಾಗಿ ಈಗಾಗಲೇ ಶಕ್ತಿ ಕೇಂದ್ರ ಮತ್ತು ಪ್ರಮುಖರ ಭೇಟಿ ಮಾಡಿ ಸಭೆ ನಡೆಸುತಿದ್ದೇನೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಕೂಡಾ ನಾನು ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡಲು ತಯಾರಿದ್ದೇನೆ ಎಂದು ತಿಳಿಸಿದರು.

ಕಳೆದ ಬಾರಿ ನನಗೆ ಕೊನೆಯ ಕ್ಷಣ ಟಿಕೆಟ್ ಘೋಷಣೆ ಮಾಡಲಾಗಿತ್ತು ಹೀಗಾಗಿ ಕಾರ್ಯಕರ್ತರ ಭೇಟಿ ಮಾಡಲು ಸಮಯ ಸಿಕ್ಕಿರಲಿಲ್ಲ. ಇದರಿಂದ ಪಾಠ ಕಲಿತಿರುವ ನಾನು ಈ ಬಾರಿ ಬೇಗನೇ ಕಾರ್ಯಕರ್ತರ ಭೇಟಿ ಆರಂಭ ಮಾಡಿದ್ದೇನೆ. ಬಿಜೆಪಿಯಲ್ಲಿ ನನಗೆ ಅಧಿಕಾರ ಕೊಡಲಿ ಅಥವಾ ಕೊಡದೇ ಇರಲಿ ನಾನು ಕೊನೆಯ ಉಸಿರಿನವರೆಗೂ ಬಿಜೆಪಿಯಲ್ಲಿಯೇ ಇರುತ್ತೇನೆ” ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

17 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

17 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago