Featured

ಉಡುಪಿ: ಬಿಜೆಪಿಯಲ್ಲಿ ನನಗೆ ಅಧಿಕಾರ ಕೊಡಲಿ , ಕೊಡದೇ ಇರಲಿ ನಾನು ಕೊನೆಯ ಉಸಿರಿನವರೆಗೂ ಬಿಜೆಪಿಯಲ್ಲಿಯೇ ಇರುತ್ತೇನೆ : ಪ್ರಮೋದ್ ಮಧ್ವರಾಜ್ – Vishwanews24

ಉಡುಪಿ: ಬಿಜೆಪಿಯಲ್ಲಿ ನನಗೆ ಅಧಿಕಾರ ಕೊಡಲಿ ಅಥವಾ ಕೊಡದೇ ಇರಲಿ ನಾನು ಕೊನೆಯ ಉಸಿರಿನವರೆಗೂ ಬಿಜೆಪಿಯಲ್ಲಿಯೇ ಇರುತ್ತೇನೆ : ಪ್ರಮೋದ್ ಮಧ್ವರಾಜ್

ಉಡುಪಿ: ನಾನು ಹೋದಲೆಲ್ಲಾ ಜೆಡಿಎಸ್ ನನ್ನ ಹಿಂದೇಯೇ ಬರುತ್ತಿದೆ ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇತ್ತು, ಈ ಬಾರಿ ಬಿಜೆಪಿ – ಜೆಡಿಎಸ್ ಮೈತ್ರಿ ಇದೆ ಹೀಗಾಗಿ ನನಗೆ ಸಂತೋಷ ಇದೆ. ನನಗೆ ಶಾಲು ಹಾಕಿ ಅಭ್ಯಾಸ ಇದೆ ಎಂದು ಮಾಜಿ ಸಚಿವ, ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಪತ್ರಿಕಾಭವನದಲ್ಲಿ ಪತ್ರಕರ್ತರೊಂದಿಗೆ ನಡೆದ ಸಂವಾದ ದಲ್ಲಿ ಮಾತನಾಡಿದ ಅವರು , ಆಕಾಂಕ್ಷಿಯಾಗುವುದರಲ್ಲಿ ಯಾವುದೇ ತಪ್ಪು ಇಲ್ಲ. ಎಲ್ಲರೂ ಆಸೆಯಿಂದಲೇ ರಾಜಕೀಯಕ್ಕೆ ಬರುತ್ತಾರೆ. 3-4 ತಿಂಗಳ ಹಿಂದೇಯೇ ನಾನು ಟಿಕೆಟ್ ಆಕಾಂಕ್ಷಿ ಎಂದು ಘೋಷಿಸಿದ್ದೆ ಎಂದರು.

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 8 ವಿಧಾನಸಬಾ ಕ್ಷೇತ್ರಗಳು ಇವೆ. ಹೀಗಾಗಿ ಲೆಕ್ಕ ಹಾಕಿದರೆ ಕಡಿಮೆ ಎಂದರೂ ಇಲ್ಲಿ ಕಾರ್ಯಕರ್ತರ ಭೇಟಿಗೆ ಸುಮಾರು 24 ತಿಂಗಳ ಕಾಲಾವಕಾಶ ಬೇಕಾಗಬಹುದು. ಹೀಗಾಗಿ ಈಗಾಗಲೇ ಶಕ್ತಿ ಕೇಂದ್ರ ಮತ್ತು ಪ್ರಮುಖರ ಭೇಟಿ ಮಾಡಿ ಸಭೆ ನಡೆಸುತಿದ್ದೇನೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಕೂಡಾ ನಾನು ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡಲು ತಯಾರಿದ್ದೇನೆ ಎಂದು ತಿಳಿಸಿದರು.

ಕಳೆದ ಬಾರಿ ನನಗೆ ಕೊನೆಯ ಕ್ಷಣ ಟಿಕೆಟ್ ಘೋಷಣೆ ಮಾಡಲಾಗಿತ್ತು ಹೀಗಾಗಿ ಕಾರ್ಯಕರ್ತರ ಭೇಟಿ ಮಾಡಲು ಸಮಯ ಸಿಕ್ಕಿರಲಿಲ್ಲ. ಇದರಿಂದ ಪಾಠ ಕಲಿತಿರುವ ನಾನು ಈ ಬಾರಿ ಬೇಗನೇ ಕಾರ್ಯಕರ್ತರ ಭೇಟಿ ಆರಂಭ ಮಾಡಿದ್ದೇನೆ. ಬಿಜೆಪಿಯಲ್ಲಿ ನನಗೆ ಅಧಿಕಾರ ಕೊಡಲಿ ಅಥವಾ ಕೊಡದೇ ಇರಲಿ ನಾನು ಕೊನೆಯ ಉಸಿರಿನವರೆಗೂ ಬಿಜೆಪಿಯಲ್ಲಿಯೇ ಇರುತ್ತೇನೆ” ಎಂದರು.

Vishwa News 24

Recent Posts

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

6 minutes ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

25 minutes ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 hours ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

2 hours ago

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ – vishwanews24

ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…

3 hours ago

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ – vishwanews24

ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್‌ ಆಟಗಾರ, ಟೀಂ…

3 hours ago