Featured

ಉಡುಪಿ : ಬಿಜೆಪಿಯಲ್ಲಿ ಹೊಸಬರು ಬಂದು ಹೊಸ ನಾಯಕತ್ವ ಸೃಷ್ಟಿಯಾಗುತ್ತದೆ : ಶಾಸಕ ರಘುಪತಿ ಭಟ್ – Vishwanews24

ಬಿಜೆಪಿಯಲ್ಲಿ ಹೊಸಬರು ಬಂದು ಹೊಸ ನಾಯಕತ್ವ ಸೃಷ್ಟಿಯಾಗುತ್ತದೆ

ರಾಜ್ಯದಲ್ಲಿ ಹೊಸದಾಗಿ ನಾಯಕತ್ವ ಬಂದೇ ಬರುತ್ತದೆ..

ಉಡುಪಿ: ಬಿಜೆಪಿಯಲ್ಲಿ ಹೊಸಬರಿಗೆ ಅವಕಾಶ ಹೊಸತಲ್ಲ. ಹೊಸಬರು ಬಂದು ಹೊಸ ನಾಯಕತ್ವ ಸೃಷ್ಟಿಯಾಗುತ್ತದೆ. ರಾಜ್ಯದಲ್ಲಿ ಹೊಸದಾಗಿ ನಾಯಕತ್ವ ಬಂದೇ ಬರುತ್ತದೆ. ಬಿಜೆಪಿ ಪಕ್ಷ ತೆಗೆದುಕೊಳ್ಳುವ ಎಲ್ಲಾ ನಿರ್ಧಾರಗಳಿಗೆ ನಾನು ಮಾನಸಿಕವಾಗಿ ತಯಾರಾಗಿದ್ದೇನೆ ಎಂದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸುತ್ತಿರುವ ಬಗ್ಗೆ ಉಡುಪಿ ಶಾಸಕ ರಘುಪತಿ ಭಟ್ ಪ್ರತಿಕ್ರಿಯಿಸಿದ್ದಾರೆ.

ರಾಷ್ಟ್ರೀಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ರಾಜ್ಯ ಭೇಟಿ ಬಳಿಕ ಹೊಸತನದ ಘೋಷಣೆಯನ್ನು ಮಾಡಿ ಹೋಗಿದ್ದಾರೆ. ಮೈಸೂರಿನ ಕಾರ್ಯಕ್ರಮದ ನಂತರ ರಾಜ್ಯ ಬಿಜೆಪಿಯಲ್ಲಿ ಹೊಸತನ ಬಹಳ ಚರ್ಚೆಗಳನ್ನು ಹುಟ್ಟುಹಾಕಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ರಘುಪತಿ ಭಟ್, ನನ್ನನ್ನು ಬಿಟ್ಟು ಬೇರೆಯವರಿಗೆ ಅವಕಾಶ ಕೊಟ್ಟರೆ ಆ ನಿರ್ಧಾರವನ್ನು ಸ್ವೀಕರಿಸಿ ಅಭ್ಯರ್ಥಿಗಾಗಿ ಕೆಲಸ ಮಾಡುತ್ತೇನೆ. 2013ರಲ್ಲಿ ಮತ್ತೊಬ್ಬ ಅಭ್ಯರ್ಥಿ ಆಯ್ಕೆಯಾದಾಗ ನಾನು ಅವರಿಗಿಂತ ಹೆಚ್ಚು ಕೆಲಸ ಮಾಡಿದ್ದೇನೆ. ವೈಯಕ್ತಿಕವಾಗಿ ಅಲ್ಲ, ಪಕ್ಷಕ್ಕೋಸ್ಕರ ಕೆಲಸ ಮಾಡುವ ಸ್ವಭಾವವನ್ನು ಇಟ್ಟುಕೊಂಡಿದ್ದೇನೆ ಎಂದರು.

ಪಕ್ಷದ ಹಿರಿಯರು ತೀರ್ಮಾನ ಮಾಡಿದಂತೆ ಬಿಜೆಪಿಯಲ್ಲಿ ನಡೆಯುತ್ತದೆ. ಪಕ್ಷ ತೀರ್ಮಾನಿಸಿದಂತೆ ಟಿಕೆಟ್ ಕೊಡಲಾಗುತ್ತದೆ. ಮಾನಸಿಕವಾಗಿ ಸಿದ್ಧವಿರಬೇಕು. ನಮ್ಮ ಪಕ್ಷದಲ್ಲಿ ಯಾವುದನ್ನೂ ಬೇಕು ಅಂತ ಕೇಳಲಿಕ್ಕೆ ಇಲ್ಲ. ಬೇಡ ಅಂತ ಹೇಳಲಿಕ್ಕೂ ಇಲ್ಲ. ನಾನು ಹೊಸಬನೂ ಅಲ್ಲ ಹಳಬನೂ ಅಲ್ಲ. ನಾನು ಮಧ್ಯದಲ್ಲಿ ಇರುವ ಶಾಸಕ ನನಗಿಂತ ಬಹಳಷ್ಟು ಹಳೆಯ ಶಾಸಕರಿದ್ದಾರೆ ಎಂದು ನುಡಿದರು.

ಬಿಜೆಪಿಯಲ್ಲಿ 5-6 ಬಾರಿ ಗೆದ್ದವರಿದ್ದಾರೆ. ನಮ್ಮಲ್ಲಿ ಯಾವತ್ತು ಹೊಸತನ ಇದ್ದೇ ಇದೆ. ನಮ್ಮ ಪಕ್ಷದಲ್ಲಿ ಪ್ರಜಾಪ್ರಭುತ್ವ ಇದೆ ಆಂತರಿಕ ಚರ್ಚೆ ನಡೆಯುತ್ತದೆ. ಜನಾಭಿಪ್ರಾಯ ಸಂಗ್ರಹಿಸುವ ವ್ಯವಸ್ಥೆಗಳು ನಮ್ಮ ಪಕ್ಷದಲ್ಲಿ ಇದೆ. ಕಾರ್ಯಕರ್ತರ ಅಭಿಪ್ರಾಯಗಳನ್ನು ತೆಗೆದುಕೊಳ್ಳುವ ಪದ್ಧತಿ ಬಿಜೆಪಿಯಲ್ಲಿದೆ. ಜನರ ಜೊತೆ ಇದ್ದ ಶಾಸಕರಿಗೆ ಸಮಸ್ಯೆ ಆಗುವುದಿಲ್ಲ. ಜನರಿಂದ ದೂರ ಇದ್ದವರಿಗೆ ಸಮಸ್ಯೆಯಾಗಬಹುದು. 2004ರಲ್ಲಿ ಹೊಸಬನಾಗಿದ್ದ ನನಗೆ ಅವಕಾಶ ಕೊಟ್ಟರು ಎಂದು ಅಭಿಪ್ರಾಯಪಟ್ಟರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

8 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

9 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

9 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

12 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

12 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

12 hours ago