Featured

ಉಡುಪಿ : ಬಿಜೆಪಿಯ ವೈಫಲ್ಯವನ್ನು ಜನ ಸಾಮಾನ್ಯರಿಗೆ ತಿಳಿಸುವ ಪ್ರಯತ್ನ ಮಾಡಿದರೆ ವೈಯಕ್ತಿಕವಾಗಿ ಟೀಕೆ ಮಾಡುವುದು ಆ ಪಕ್ಷದ ಮುಖಂಡರ ಚಾಳಿ :ರಮೇಶ್ ಕಾಂಚನ್ – Vishwanews24

ಬಿಜೆಪಿಯ ವೈಫಲ್ಯವನ್ನು ಜನ ಸಾಮಾನ್ಯರಿಗೆ ತಿಳಿಸುವ ಪ್ರಯತ್ನ ಮಾಡಿದರೆ ವೈಯಕ್ತಿಕವಾಗಿ ಟೀಕೆ ಮಾಡುವುದು ಆ ಪಕ್ಷದ ಮುಖಂಡರ ಚಾಳಿ :ರಮೇಶ್ ಕಾಂಚನ್

ಉಡುಪಿ: ಕಾಂಗ್ರೆಸ್ ಪಕ್ಷದ ನಾಯಕರಾದ ಮಿಥುನ್ ರೈ ಅವರು ಬಿಜೆಪಿ ಶಾಸಕರ, ಸಂಸದರ ವೈಫಲ್ಯವನ್ನು ಜನರಿಗೆ ಎತ್ತಿ ತೋರಿಸಿದಾಗ ಬಿಜೆಪಿಗರಿಗೆ ಅತೀವ ನೋವಾಗಿದೆ. ವೈಯಕ್ತಿಕ ಟೀಕೆಗೆ ಇಳಿದಿದ್ದಾರೆ. ಜನ ಪ್ರತಿನಿಧಿಗಳು ಜನರಿಂದ ಆಯ್ಕೆಗೊಂಡವರು. ಜನರಿಗೆ ಸಮಸ್ಯೆಯಾದಾಗ ಅವರಿಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಅವರು ವಿಫಲರಾದಾಗ ಅವರನ್ನು ಎಚ್ಚರಿಸುವುದು ವಿರೋಧ ಪಕ್ಷದ ಕರ್ತವ್ಯವಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ತಿಳಿಸಿದ್ದಾರೆ

ಬಿಜೆಪಿಯ ವೈಫಲ್ಯವನ್ನು ಜನ ಸಾಮಾನ್ಯರಿಗೆ ತಿಳಿಸುವ ಪ್ರಯತ್ನ ಮಾಡಿದರೆ ವೈಯಕ್ತಿಕವಾಗಿ ಟೀಕೆ ಮಾಡುವುದು ಆ ಪಕ್ಷದ ಮುಖಂಡರ ಚಾಳಿ. ಜನರ ಸಮಸ್ಯೆಯ ಕಡೆಗೆ ಇವರ ಗಮನ ಶೂನ್ಯ. ಶಾಸಕ ರಘುಪತಿ ಭಟ್ ಆರು ತಿಂಗಳಿನಿಂದ ರಸ್ತೆ ದುರಸ್ತಿ ನಡೆಸುವುದಾಗಿ ಹೇಳುತ್ತಿದ್ದಾರೆ. ಆದರೆ ಕಾಮಗಾರಿಯನ್ನು ಕೈಗೆತ್ತಿಕೊಂಡಿಲ್ಲ. ಇದರಿಂದ ಜನರ ಸಂಕಷ್ಟಕ್ಕೆ ಈಡಾಗುತ್ತಿದ್ದಾರೆ. ರಸ್ತೆ ಅಪಘಾತದಿಂದ ಜನರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಮಂಗಳ ಕಾರ್ಯಗಳಿಂದ ಶುಭ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಜನ ಪ್ರತಿನಿಧಿಗಳು ಆರು ತಿಂಗಳಿಗೊಮ್ಮೆ ಗೆದ್ದ ಕ್ಷೇತ್ರಕ್ಕೆ ಬಂದು ಮುಖ ತೋರಿಸಿ ಹೋಗುವುದಲ್ಲ ಬದಲಾಗಿ ಜನರಿಗೆ ಸಮಸ್ಯೆ ಎದುರಾದಾಗ ಅವರೊಂದಿಗಿದ್ದು ಅವರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗಿದೆ. ಆಡಳಿತ ಪಕ್ಷದ ಜನಪ್ರತಿನಿಧಿಗಳು ನಿರ್ಲಕ್ಷ್ಯ ಧೋರಣೆ ಮುಂದುವರಿಸಿದಾಗ ಅದರ ವಿರುದ್ಧ ಪ್ರತಿಭಟಿಸುವ, ನಾಯಕರನ್ನು ಅಲಸ್ಯದಿಂದ ಎಬ್ಬಿಸುವ ಕಾರ್ಯ ಮಾಡುವ ಹಕ್ಕು ಕಾಂಗ್ರೆಸ್ ಪಕ್ಷದ ಮುಖಂಡ ಮಿಥುನ್ ರೈ ಅವರಿಗಿದೆ. ಮಿಥುನ್ ರೈ ಅವರ ಟೀಕೆಯನ್ನು ಸಕಾರಾತ್ಮಕವಾಗಿ ತೆಗೆದುಕೊಂಡು ಜನರ ನೋವಿಗೆ ಸ್ಪಂದಿಸಿ ಸರಕಾರ ಹದೆಗೆಟ್ಟಿರುವ ರಸ್ತೆಗಳನ್ನು ಸರಿ ಪಡಿಸಲಿ ಎಂದರು.

ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಸಂಪೂರ್ಣ ಅಧೋಗತಿಯಾಗಿದ್ದು ಇದರ ಬಗ್ಗೆ ಸಂಸದರು ಗಮನಹರಿಸಲಿ. ಮೀನುಗಾರರು, ಕೃಷಿಕರು, ಜನ ಸಾಮಾನ್ಯರು ಹಲವು ಸಮಸ್ಯೆಗಳಿಂದ ಬಳಲುತ್ತಿದ್ದರೂ ಸಂಸದೆ ಶೋಭಾ ಕರಂದ್ಲಾಜೆ ಅವರು ಸೂಕ್ತವಾಗಿ ಸ್ಪಂದಿಸುತ್ತಿಲ್ಲ. ಅವರು ಕೇಂದ್ರ ಸಚಿವೆಯಾಗಿದ್ದರೂ ಉಡುಪಿ-ಚಿಕ್ಕಮಂಗಳೂರು ಕ್ಷೇತ್ರದ ಸಂಸದೆ ಎಂಬುವುದನ್ನು ಮರೆಯಬಾರದು. ಎಲ್ಲಿಯವರೆಗೆ ಆಡಳಿತರೂಢ ಬಿಜೆಪಿ ತನ್ನ ನಿರ್ಲಕ್ಷ್ಯ ಧೋರಣೆ ಮುಂದುವರಿಸುತ್ತದೆ ಅಲ್ಲಿಯವರೆಗೆ ಕಾಂಗ್ರೆಸ್ ಪಕ್ಷ ಬಿಜೆಪಿಯ ಜನ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟಿಸಲಿದೆ ಎಂದು ರಮೇಶ್ ಕಾಂಚನ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ :ಜಿಲ್ಲೆಯ ಶಾಸಕ, ಸಂಸದರ ವೈಫಲ್ಯವನ್ನು ಮಿಥುನ್ ರೈ ಎತ್ತಿ ತೋರಿಸಿದ್ದು ಬಿಜೆಪಿಗರಿಗೆ ಇರುವೆ ಬಿಟ್ಟಂತಾಗಿದೆ : ದೀಪಕ್ ಕೋಟ್ಯಾನ್ – Vishwanews24

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago