ಉಡುಪಿ : ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿದೆ .ಆಳುವ ಬಿಜೆಪಿ ಪಕ್ಷ ಸುಳ್ಳು ಮತ್ತು ಭಾವನಾತ್ಮಕ ಸಂಗತಿಗಳ ಮೂಲಕ ಅಧಿಕಾರವನ್ನು ಹಿಡಿಯುವ ಹುನ್ನಾರದಲ್ಲಿದೆ. ಈ ಬಗ್ಗೆ ಜನ ಸಾಮಾನ್ಯರು ತಮ್ಮ ಸ್ವರವನ್ನು ಎತ್ತ ಬೇಕಾಗಿದೆ. ಹಾಗಾಗಿ ಜನ ಜಾಗೃತಿ ಮೂಡಿಸುವ ಸಲುವಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾದ ಡಿ. ಕೆ. ಶಿವ ಕುಮಾರ್ ಮತ್ತು ವಿರೋಧ ಪಕ್ಷದ ನಾಯಕರಾದ ಶ್ರೀ ಎಸ್. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಹೊರಟ ಪ್ರಜಾಧ್ವನಿ ಯಾತ್ರೆ ಯಶಸ್ವಿಯಾಗಲಿ ಎಂದು ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಅವರು ತಾ .22.01.2023 ಭಾನುವಾರ ಬೆಳಿಗ್ಗೆ ಗಂಟೆ 10.00 ಕ್ಕೆ ಉಡುಪಿ ಕ್ರಿಶ್ಚಿಯನ್ ಹೈಸ್ಕೂಲು ಮೈದಾನದಲ್ಲಿ ಜರಗುವ ಪ್ರಜಾಧ್ವನಿ ಯಾತ್ರೆ – ಸಮಾವೇಶದ ಚಪ್ಪರ ನಿರ್ಮಾಣಕ್ಕೆ ಚಾಲನೆ ಕೊಟ್ಟು ನುಡಿದರು.
ಈ ಸಂದರ್ಭದಲ್ಲಿ, ಜಿಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು , ಪ್ರಚಾರ ಸಮಿತಿ ಅಧ್ಯಕ್ಷರಾದ ಹರೀಶ್ ಕಿಣಿ ರಾಜ್ಯ ಸಂಯೋಜಕ ರಾದ ದಿನೇಶ್ ಪುತ್ರನ್ ಕಾಂಗ್ರೆಸ್ ನಾಯಕರಾದ ಕೃಷ್ಣಮೂರ್ತಿ ಆಚಾರ್ಯ, ರಮೇಶ್ ಕಾಂಚನ್, ಪ್ರಶಾಂತ್ ಜತ್ತನ್ನ , ಪ್ರಖ್ಯಾತ್ ಶೆಟ್ಟಿ ,ಎಂ.ಎ. ಗಫೂರ್, ಕಿಶನ್ ಹೆಗ್ಡೆ ಕೊಳ್ಕೆಬೈಲ್, ವೆರೋನಿಕಾ ಕರ್ನೇಲಿಯೋ , ರೋಷನಿ ಒಲಿವರ್, ಡಾ. ಸುನೀತಾ ಶೆಟ್ಟಿ ,ಉದ್ಯಾವರ ನಾಗೇಶ್ ಕುಮಾರ್ ,ಸುಹೇಲ್ ರಹಮತ್, ಶಬರೀಶ್ ಸುವರ್ಣ , ಜಯಸೇರಿಗಾರ್, ಕಾರ್ಕಳ ಮಹಮ್ಮದ್ ಇರ್ಷಾದ್, ಇಸ್ಮಾಯಿಲ್ ಆತ್ರಾಡಿ, ಜಯ ಕುಮಾರ್,ದಿಲೀಪ್ ಹೆಗ್ಡೆ ಕುಕ್ಕೆಹಳ್ಳಿ, ಆನಂದ ಕಿದಿಯೂರು ,ಜೀತೇಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
Join our Whatsapp group by clicking the below link 👇👇
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…