Featured

ಉಡುಪಿ : ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಜಾತಿ ಜ್ವಾಲೆಯನ್ನು ಹುಟ್ಟು ಹಾಕಿ ಉಡುಪಿ- ಮಂಗಳೂರನ್ನು ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿದರು : ಸಿದ್ದರಾಮಯ್ಯ ವಾಗ್ದಾಳಿ  -Vishwanews24

ಉಡುಪಿ : ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಜಾತಿ ಜ್ವಾಲೆಯನ್ನು ಹುಟ್ಟು ಹಾಕಿ ಉಡುಪಿ- ಮಂಗಳೂರನ್ನು ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿದರು : ಸಿದ್ದರಾಮಯ್ಯ ವಾಗ್ದಾಳಿ  -Vishwanews24

ಕೆಟ್ಟ ಭ್ರಷ್ಟ ಸರಕಾರವನ್ನು ತೆಗೆದು ಹಾಕಿ ಕಾಂಗ್ರೆಸ್‌ಗೆ ಮತ್ತೊಮ್ಮೆ ಅವಕಾಶ ಕೊಡಿ..

ಬಿಜೆಪಿ ಬಂದ ಮೇಲೆ ಮಧ್ಯಮ ವರ್ಗ, ಬಡವರ ಬಾಳು ದುಸ್ತರವಾಗಿದೆ..

ಉಡುಪಿ,: “ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಜಾತಿ ಜ್ವಾಲೆಯನ್ನು ಹುಟ್ಟು ಹಾಕಿದರು. ಉಡುಪಿ- ಮಂಗಳೂರನ್ನು ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿದರು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಉಡುಪಿಯಲ್ಲಿ ಆರು ದಿನದ ಜನದ್ವನಿ ಪಾದಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ನಾವು ಅಧಿಕಾರಕ್ಕೆ ಬಂದರೆ 10 ಕೆ.ಜಿ ಅಕ್ಕಿ ಕೊಡುತ್ತೇವೆ. ಈಗ ಕೊಡುತ್ತಿರುವ 7 ಕೆ.ಜಿಯಲ್ಲಿ ಎರಡು ಕೆ.ಜಿ ಕಡಿತ ಮಾಡಿದ್ದಾರೆ ಬಿಜೆಪಿ ಸರಕಾರ. ಹಾಗಾಗಿ ಕೆಟ್ಟ ಭ್ರಷ್ಟ ಸರಕಾರವನ್ನು ತೆಗೆದು ಹಾಕಿ ಕಾಂಗ್ರೆಸ್‌ಗೆ ಮತ್ತೊಮ್ಮೆ ಅವಕಾಶ ಕೊಡಿ” ಎಂದು ಹೇಳಿದರು.

“ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಜಾತಿ ಜ್ವಾಲೆಯನ್ನು ಹುಟ್ಟು ಹಾಕಿದರು. ಉಡುಪಿ- ಮಂಗಳೂರನ್ನು ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿದರು. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು. ಪ್ರತಿಯೊಬ್ಬರನ್ನು ಪ್ರೀತಿಸಬೇಕು. ಅದು ಪ್ರಾಥಮಿಕ ಕರ್ತವ್ಯ. ಬಿಜೆಪಿಯವರು ಮಾನವರೇ ಅಲ್ಲ. ವಿಶ್ವಮಾನವರಾಗಲು ಸಾಧ್ಯವಿಲ್ಲ” ಎಂದು ವಾಗ್ದಾಳಿ ನಡೆಸಿದರು.

ಮಂಗಳೂರು : ಬಿಜೆಪಿ ಎಸ್‌ಡಿಪಿಐ ಅನ್ನು ಬೆಳೆಸುತ್ತಿದೆ , ಮೊದಲು ಪಿಎಫ್ಐ ಹಾಗೂ ಎಸ್‌‌ಡಿಪಿಐ ಅನ್ನು ನಿಷೇಧಿಸಲಿ: ಸಿದ್ದರಾಮಯ್ಯ -Vishwanews24

ನನ್ನ ಹೆಸರಲ್ಲೇ ರಾಮ ಇದೆ. ಎಲ್ಲರೂ ಹಿಂದುಗಳು, ಭಾರತೀಯರು. ನಾವು ಮಹಾತ್ಮ ಗಾಂಧಿಯ ಹಿಂದುತ್ವ ಪಾಲನೆ ಮಾಡುತ್ತೇವೆ. ಬಿಜೆಪಿಯವರು ಸಾವರ್ಕರ್ ಹಿಂದುತ್ವ ಪಾಲನೆ ಮಾಡುತ್ತಾರೆ. ಗಾಂಧೀಜಿ ಅವರನ್ನು ಕೊಂದವರನ್ನು ಆರಾಧಿಸುತ್ತಾರೆ. ರಕ್ತಪಾತ ಮಾಡಿಸಿ ಮತ್ತೆ ಹಿಂದು ಪರವಾಗಿದ್ದೇವೆ ಅಂತ ಬಿಜೆಪಿ ಹೇಳುತ್ತಾರೆ” ಎಂದರು.

“ನಮ್ಮ ಸಂವಿಧಾನದಲ್ಲಿ ನಮ್ಮ ಧರ್ಮ ಬಗ್ಗೆ ನಿಷ್ಠೆ ಇರಬೇಕು. ಪರಧರ್ಮದ ಬಗ್ಗೆ ಸಹಿಷ್ಣುತೆ ಇರಬೇಕು. ಬಿಜೆಪಿ ಬಂದ ಮೇಲೆ ಮಧ್ಯಮ ವರ್ಗ, ಬಡವರ ಬಾಳು ದುಸ್ತರವಾಗಿದೆ” ಎಂದು ಕಿಡಿಕಾರಿದರು.

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ಸ್ 2021 : ಧನಂಜಯ್ ಅತ್ಯುತ್ತಮ ನಟ, ದಿಯಾ ಖ್ಯಾತಿಯ ಖುಷಿ ಅತ್ಯುತ್ತಮ ನಟಿ -Vishwanews24

 

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

17 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

17 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

17 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

17 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

18 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

18 hours ago