ಉಡುಪಿ,: “ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಜಾತಿ ಜ್ವಾಲೆಯನ್ನು ಹುಟ್ಟು ಹಾಕಿದರು. ಉಡುಪಿ- ಮಂಗಳೂರನ್ನು ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿದರು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಉಡುಪಿಯಲ್ಲಿ ಆರು ದಿನದ ಜನದ್ವನಿ ಪಾದಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ನಾವು ಅಧಿಕಾರಕ್ಕೆ ಬಂದರೆ 10 ಕೆ.ಜಿ ಅಕ್ಕಿ ಕೊಡುತ್ತೇವೆ. ಈಗ ಕೊಡುತ್ತಿರುವ 7 ಕೆ.ಜಿಯಲ್ಲಿ ಎರಡು ಕೆ.ಜಿ ಕಡಿತ ಮಾಡಿದ್ದಾರೆ ಬಿಜೆಪಿ ಸರಕಾರ. ಹಾಗಾಗಿ ಕೆಟ್ಟ ಭ್ರಷ್ಟ ಸರಕಾರವನ್ನು ತೆಗೆದು ಹಾಕಿ ಕಾಂಗ್ರೆಸ್ಗೆ ಮತ್ತೊಮ್ಮೆ ಅವಕಾಶ ಕೊಡಿ” ಎಂದು ಹೇಳಿದರು.
“ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಜಾತಿ ಜ್ವಾಲೆಯನ್ನು ಹುಟ್ಟು ಹಾಕಿದರು. ಉಡುಪಿ- ಮಂಗಳೂರನ್ನು ಕೋಮುವಾದದ ಪ್ರಯೋಗ ಶಾಲೆಯನ್ನಾಗಿ ಮಾಡಿದರು. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು. ಪ್ರತಿಯೊಬ್ಬರನ್ನು ಪ್ರೀತಿಸಬೇಕು. ಅದು ಪ್ರಾಥಮಿಕ ಕರ್ತವ್ಯ. ಬಿಜೆಪಿಯವರು ಮಾನವರೇ ಅಲ್ಲ. ವಿಶ್ವಮಾನವರಾಗಲು ಸಾಧ್ಯವಿಲ್ಲ” ಎಂದು ವಾಗ್ದಾಳಿ ನಡೆಸಿದರು.
ನನ್ನ ಹೆಸರಲ್ಲೇ ರಾಮ ಇದೆ. ಎಲ್ಲರೂ ಹಿಂದುಗಳು, ಭಾರತೀಯರು. ನಾವು ಮಹಾತ್ಮ ಗಾಂಧಿಯ ಹಿಂದುತ್ವ ಪಾಲನೆ ಮಾಡುತ್ತೇವೆ. ಬಿಜೆಪಿಯವರು ಸಾವರ್ಕರ್ ಹಿಂದುತ್ವ ಪಾಲನೆ ಮಾಡುತ್ತಾರೆ. ಗಾಂಧೀಜಿ ಅವರನ್ನು ಕೊಂದವರನ್ನು ಆರಾಧಿಸುತ್ತಾರೆ. ರಕ್ತಪಾತ ಮಾಡಿಸಿ ಮತ್ತೆ ಹಿಂದು ಪರವಾಗಿದ್ದೇವೆ ಅಂತ ಬಿಜೆಪಿ ಹೇಳುತ್ತಾರೆ” ಎಂದರು.
“ನಮ್ಮ ಸಂವಿಧಾನದಲ್ಲಿ ನಮ್ಮ ಧರ್ಮ ಬಗ್ಗೆ ನಿಷ್ಠೆ ಇರಬೇಕು. ಪರಧರ್ಮದ ಬಗ್ಗೆ ಸಹಿಷ್ಣುತೆ ಇರಬೇಕು. ಬಿಜೆಪಿ ಬಂದ ಮೇಲೆ ಮಧ್ಯಮ ವರ್ಗ, ಬಡವರ ಬಾಳು ದುಸ್ತರವಾಗಿದೆ” ಎಂದು ಕಿಡಿಕಾರಿದರು.
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…
ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…
ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…
ಮಲ್ಪೆ : ಬೋಟ್ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…
ಉಡುಪಿ :ಆ. 27 ರಂದು ನೇರ ಸಂದರ್ಶನ ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…