Featured

ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ  ಆಸ್ತಿ‌ ವಿವರ…Vishwanews24

ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ಪಾಲ್ ಸುವರ್ಣ  ಆಸ್ತಿ‌ ವಿವರ…

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಂದು ನಾಮಪತ್ರ ಸಲ್ಲಿಸಿರುವ ಯಶ್‌ಪಾಲ್ ಸುವರ್ಣ (44) ಒಟ್ಟು 6,24,58,781 ರೂ.ಗಳ ಒಡೆಯ ಎಂದು ಚುನಾವಣಾಧಿಕಾರಿಗೆ ಸಲ್ಲಿಸಿದ ಅಫಿದವಿತ್‌ನಿಂದ ತಿಳಿದುಬರುತ್ತದೆ.

ಯಶ್‌ಪಾಲ್ ಸುವರ್ಣ ಅವರಲ್ಲಿ 4,29,20,372 ರೂ. ಚರಾಸ್ಥಿ ಇದ್ದು, ಇದರೊಂದಿಗೆ 1,95,38,409ರೂ. ಸ್ಥಿರಾಸ್ಥಿಯನ್ನೂ ಹೊಂದಿದ್ದಾರೆ. ಸದ್ಯ ಅವರ ಬಳಿ 1,06,300ರೂ.ನಗದು ಇದೆ.

ಚರಾಸ್ಥಿಗಳಲ್ಲಿ 18 ಬ್ಯಾಂಕುಗಳು, ಸಹಕಾರಿ ಸಂಘ, ಸೊಸೈಟಿ ಹಾಗೂ ಇತರ ಹಣಕಾಸು ಸಂಸ್ಥೆಗಳಲ್ಲಿ 38.79 ಲಕ್ಷ ರೂ. ಠೇವಣಿ ಇದೆ. ಬಾಂಡ್, ಮ್ಯುಚವಲ್ ಫಂಡ್, ಡಿಬೆಂಚರ್‌ಗಳಲ್ಲಿ 17.99 ಲಕ್ಷ ರೂ., ಎನ್ಎಸ್ಎಸ್, ಪೋಸ್ಟಲ್, ವಿಮೆಯಲ್ಲಿ 17.71 ಲಕ್ಷ ರೂ.ವನ್ನು ತೊಡಿಸಿಕೊಂಡಿದ್ದರೆ, ಕೆಲವರಿಗೆ ನೀಡಿರುವ ಸಾಲ, ಮುಂಗಡ, ವಿವಿಧ ಕಂಪೆನಿಗಳಲ್ಲಿ ಹೂಡಿರುವ ಬಂಡವಾಳ ಮೊತ್ತ 3.04 ಕೋಟಿ ರೂ.ಗಳಾಗಿವೆ.

ಇದರೊಂದಿಗೆ 20 ಲಕ್ಷ ರೂ.ಮೌಲ್ಯದ ಮೀನುಗಾರಿಕಾ ಬೋಟ್, 25.09 ಲಕ್ಷ ರೂ.ಮೌಲ್ಯದ ಕಾರು, ಬೈಕ್ ಸೇರಿ ವಿವಿಧ ವಾಹನಗಳು, 25.56 ಲಕ್ಷ ರೂ. ಮೌಲ್ಯದ 450 ಗ್ರಾಂ ಚಿನ್ನಾಭರಣಗಳು ಒಟ್ಟು ಚರಾಸ್ಥಿಯ ಮೌಲ್ಯ 4.29 ಕೋಟಿ ರೂ.ಗಳಾಗಿವೆ. 2017-18ರಲ್ಲಿ 51.40 ಲಕ್ಷರೂ. ಇದ್ದ ಇವರ ಆದಾಯ, 2021-22ನೇ ಸಾಲಿನಲ್ಲಿ 43.01ಲಕ್ಷ ರೂ.ಗಳಾಗಿದೆ ಎಂದು ಅವರು ತಿಳಿಸಿದ್ದಾರೆ.

1.95 ಕೋಟಿ ರೂ. ಸ್ಥಿರಾಸ್ಥಿಗಳಲ್ಲಿ ಉಳಿಯಾರಗೊಳಿ ಯಲ್ಲಿ 30 ಲಕ್ಷ ರೂ.ಮೌಲ್ಯದ 0.49 ಎಕರೆ ಜಾಗ, 35 ಲಕ್ಷ ರೂ.ಮೌಲ್ಯದ ಮನೆ, 15 ಲಕ್ಷ ರೂ.ಮೌಲ್ಯದ ಮನೆ ಹಾಗೂ ಭೂಮಿಯಲ್ಲಿ ಮಾಡಿದ ಹೂಡಿಕೆಗಳು ಸೇರಿವೆ ಎಂದು ಅಫಿದವತ್‌ನಲ್ಲಿ ತಿಳಿಸಲಾಗಿದೆ.

ಇವುಗಳೊಂದಿಗೆ ಯಶ್‌ಪಾಲ್ ಸುವರ್ಣ ಅವರು ವಿವಿಧ ಬ್ಯಾಂಕುಗಳು, ಸೊಸೈಟಿ, ಆರ್ಥಿಕಸಂಸ್ಥೆಗಳಿಂದ 2,85,34,604ರೂ. ಸಾಲವೂ ಅವರ ಮೇಲಿದೆ. ಇದರಲ್ಲಿ ವಿವಿಧ ವ್ಯಕ್ತಿಗಳಿಂದ ಪಡೆದ 80 ಲಕ್ಷ ರೂ. ಸಾಲವೂ ಸೇರಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

15 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

15 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago