ಉಡುಪಿ : ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಪದಾಧಿಕಾರಿಗಳು ಮತ್ತು ಆಯ್ದ ಕಾರ್ಯಕರ್ತರಿಗೆ ಕೊರೋನಾ ನಿಮಿತ್ತ ಆನ್ ಲೈನ್ ಮೂಲಕ ಹಮ್ಮಿಕೊಳ್ಳಲಾಗಿದ್ದ ಇ-ಪ್ರಶಿಕ್ಷಣದ ಸರಣಿ ವರ್ಗವು ಸೋಮವಾರ ಸಂಪನ್ನಗೊಂಡಿತು.
ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಪದಾಧಿಕಾರಿಗಳು, ಜಿಲ್ಲೆಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಜಿಲ್ಲೆಯ ವಿವಿಧ ಪ್ರಕೋಷ್ಠಗಳ ಸಂಚಾಲಕರು, ಸಹ ಸಂಚಾಲಕರು, ಜಿಲ್ಲೆಯ ಕಾರ್ಯಕಾರಿಣಿ ಸದಸ್ಯರು, ಜಿಲ್ಲೆಯವರಾದ ರಾಜ್ಯ, ರಾಷ್ಟ್ರೀಯ ಪದಾಧಿಕಾರಿಗಳು ಮತ್ತು ಆಯ್ದ ಜನಪ್ರತಿನಿಧಿಗಳಿಗೆ ಪಕ್ಷದ ತತ್ವ-ಸಿದ್ಧಾಂತಗಳ ಕುರಿತಾದ ಬದ್ಧತೆ ಮತ್ತು ತಿಳುವಳಿಕೆಯನ್ನು ನೀಡುವ ಪ್ರಶಿಕ್ಷಣ ವರ್ಗವು ಬಹಳ ಮಹತ್ವದ್ದಾಗಿದ್ದು ಸಾಮಾನ್ಯವಾಗಿ ಪ್ರತೀ ಮೂರು ವರ್ಷಗಳಿಗೊಮ್ಮೆ ನಡೆಸಲಾಗುತ್ತಿದೆ.
ಈ ಬಾರಿ ಕೊರೋನಾ ಮಹಾಮಾರಿಯ ಹಿನ್ನಲೆಯಲ್ಲಿ ಜಿಲ್ಲಾ ಇ-ಶಿಕ್ಷಣ ವರ್ಗವನ್ನು ಗೂಗಲ್ ಮೀಟ್ ಮೂಲಕ ಆಯೋಜಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರದ ಎನ್.ಡಿ.ಎ. ಸರಕಾರದ ಏಳು ವರ್ಷಗಳ ಸಾಧನೆಗಳು, ಕೇಂದ್ರದ ಕೃಷಿ ಸುಧಾರಣಾ ಕಾಯ್ದೆ ಮತ್ತು ಸಾಧನೆಗಳು, ಡಾ|| ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನ ಮತ್ತು ಚಿಂತನೆಗಳು, ರಾಷ್ಟ್ರೀಯ ಸುರಕ್ಷತೆ, ನಮ್ಮ ವಿದೇಶಾಂಗ ನೀತಿ ಮತ್ತು ಸಾಧನೆಗಳು, ಬಡವರ ಕಲ್ಯಾಣಕ್ಕಾಗಿ ನಮ್ಮ ಸಂಕಲ್ಪ ಮತ್ತು ಆ ದಿಸೆಯಲ್ಲಿ ನಮ್ಮ ಸಾಧನೆಗಳು… ಇವೇ ಮೊದಲಾದ ಮಹತ್ವಪೂರ್ಣ ವಿಚಾರಗಳ ಬಗ್ಗೆ ಇ-ಪ್ರಶಿಕ್ಷಣ ವರ್ಗಗಳನ್ನು ಏರ್ಪಡಿಸಲಾಗಿತ್ತು.
ಭಾರತೀಯ ಜನತಾ ಪಾರ್ಟಿಯ ವಿವಿಧ ಸ್ತರದ ಜವಾಬ್ದಾರಿಗಳನ್ನು ಹೊಂದಿರುವ ಚಿಂತಕರುಗಳಾಸ ಸಂಜೀವ ಮಠಂದೂರು, ಎಂ.ಜಿ. ಮಹೇಶ್, ಡಾ. ಎಚ್. ವಿ. ಶಿವಯೋಗಿಸ್ವಾಮಿ, ತೇಜಸ್ವಿ ಸೂರ್ಯ, ಚನ್ನಮಲ್ಲಿಕಾರ್ಜುನ ಪಾಟೀಲ್ ಮತ್ತು ಡಾ. ಸಮೀರ್ ಕಾಗಲ್ಕರ್ ಮೊದಲಾದವರು ಇ-ಪ್ರಶಿಕ್ಷಣದ ವಿವಿಧ ವರ್ಗಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.
ಇ-ಪ್ರಶಿಕ್ಷಣ ವರ್ಗದ ಅಪೇಕ್ಷಿತರಿಗೆ ಆನ್ ಲೈನ್ ಮೂಲಕ ತಾವಿದ್ದಲ್ಲಿಂದಲೇ ಈ ವರ್ಗಗಳಲ್ಲಿ ಪಾಲ್ಗೊಳ್ಳಲು ಅನುವು ಮಾಡಿಕೊಟ್ಟಿರುವುದರಿಂದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ದೊಡ್ಡ ಸಂಖ್ಯೆಯಲ್ಲಿ ಈ ಪ್ರಶಿಕ್ಷಣ ವರ್ಗಗಳಲ್ಲಿ ಸಕ್ರಿಯವಾಗಿ ಭಾಗಿಗಳಾದರು.
ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ ಎಸ್. ಕಲ್ಮಾಡಿ ಮತ್ತು ಸದಾನಂದ ಉಪ್ಪಿನಕುದ್ರು ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್ ಮತ್ತು ಪ್ರಶಿಕ್ಷಣ ಪ್ರಕೋಷ್ಠದ ಜಿಲ್ಲಾ ಸಂಚಾಲಕ ರಘುವೀರ್ ಶೆಣೈ ಯವರು ಇ-ಪ್ರಶಿಕ್ಷಣ ವರ್ಗದ ಯಶಸ್ವಿಗೆ ಶ್ರಮಿಸಿದ್ದರು.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…