Featured

ಉಡುಪಿ : ಬಿಜೆಪಿ ಉಡುಪಿ ಜಿಲ್ಲಾ ಇ-ಪ್ರಶಿಕ್ಷಣ ವರ್ಗ ಸಂಪನ್ನ -Vishwanews24

ಉಡುಪಿ : ಬಿಜೆಪಿ ಉಡುಪಿ ಜಿಲ್ಲಾ ಇ-ಪ್ರಶಿಕ್ಷಣ ವರ್ಗ ಸಂಪನ್ನ -Vishwanews24

ಉಡುಪಿ : ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಪದಾಧಿಕಾರಿಗಳು ಮತ್ತು ಆಯ್ದ ಕಾರ್ಯಕರ್ತರಿಗೆ ಕೊರೋನಾ ನಿಮಿತ್ತ ಆನ್ ಲೈನ್ ಮೂಲಕ ಹಮ್ಮಿಕೊಳ್ಳಲಾಗಿದ್ದ ಇ-ಪ್ರಶಿಕ್ಷಣದ ಸರಣಿ ವರ್ಗವು ಸೋಮವಾರ ಸಂಪನ್ನಗೊಂಡಿತು.

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಪದಾಧಿಕಾರಿಗಳು, ಜಿಲ್ಲೆಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಜಿಲ್ಲೆಯ ವಿವಿಧ ಪ್ರಕೋಷ್ಠಗಳ ಸಂಚಾಲಕರು, ಸಹ ಸಂಚಾಲಕರು, ಜಿಲ್ಲೆಯ ಕಾರ್ಯಕಾರಿಣಿ ಸದಸ್ಯರು, ಜಿಲ್ಲೆಯವರಾದ ರಾಜ್ಯ, ರಾಷ್ಟ್ರೀಯ ಪದಾಧಿಕಾರಿಗಳು ಮತ್ತು ಆಯ್ದ ಜನಪ್ರತಿನಿಧಿಗಳಿಗೆ ಪಕ್ಷದ ತತ್ವ-ಸಿದ್ಧಾಂತಗಳ ಕುರಿತಾದ ಬದ್ಧತೆ ಮತ್ತು ತಿಳುವಳಿಕೆಯನ್ನು ನೀಡುವ ಪ್ರಶಿಕ್ಷಣ ವರ್ಗವು ಬಹಳ ಮಹತ್ವದ್ದಾಗಿದ್ದು ಸಾಮಾನ್ಯವಾಗಿ ಪ್ರತೀ ಮೂರು ವರ್ಷಗಳಿಗೊಮ್ಮೆ ನಡೆಸಲಾಗುತ್ತಿದೆ.

ಈ ಬಾರಿ ಕೊರೋನಾ ಮಹಾಮಾರಿಯ ಹಿನ್ನಲೆಯಲ್ಲಿ ಜಿಲ್ಲಾ ಇ-ಶಿಕ್ಷಣ ವರ್ಗವನ್ನು ಗೂಗಲ್ ಮೀಟ್ ಮೂಲಕ ಆಯೋಜಿಸಲಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರದ ಎನ್.ಡಿ.ಎ. ಸರಕಾರದ ಏಳು ವರ್ಷಗಳ ಸಾಧನೆಗಳು, ಕೇಂದ್ರದ ಕೃಷಿ ಸುಧಾರಣಾ ಕಾಯ್ದೆ ಮತ್ತು ಸಾಧನೆಗಳು, ಡಾ|| ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನ ಮತ್ತು ಚಿಂತನೆಗಳು, ರಾಷ್ಟ್ರೀಯ ಸುರಕ್ಷತೆ, ನಮ್ಮ ವಿದೇಶಾಂಗ ನೀತಿ ಮತ್ತು ಸಾಧನೆಗಳು, ಬಡವರ ಕಲ್ಯಾಣಕ್ಕಾಗಿ ನಮ್ಮ ಸಂಕಲ್ಪ ಮತ್ತು ಆ ದಿಸೆಯಲ್ಲಿ ನಮ್ಮ ಸಾಧನೆಗಳು… ಇವೇ ಮೊದಲಾದ ಮಹತ್ವಪೂರ್ಣ ವಿಚಾರಗಳ ಬಗ್ಗೆ ಇ-ಪ್ರಶಿಕ್ಷಣ ವರ್ಗಗಳನ್ನು ಏರ್ಪಡಿಸಲಾಗಿತ್ತು.

ಭಾರತೀಯ ಜನತಾ ಪಾರ್ಟಿಯ ವಿವಿಧ ಸ್ತರದ ಜವಾಬ್ದಾರಿಗಳನ್ನು ಹೊಂದಿರುವ ಚಿಂತಕರುಗಳಾಸ ಸಂಜೀವ ಮಠಂದೂರು, ಎಂ.ಜಿ. ಮಹೇಶ್, ಡಾ. ಎಚ್. ವಿ. ಶಿವಯೋಗಿಸ್ವಾಮಿ, ತೇಜಸ್ವಿ ಸೂರ್ಯ, ಚನ್ನಮಲ್ಲಿಕಾರ್ಜುನ ಪಾಟೀಲ್ ಮತ್ತು ಡಾ. ಸಮೀರ್ ಕಾಗಲ್ಕರ್ ಮೊದಲಾದವರು ಇ-ಪ್ರಶಿಕ್ಷಣದ ವಿವಿಧ ವರ್ಗಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

ಇ-ಪ್ರಶಿಕ್ಷಣ ವರ್ಗದ ಅಪೇಕ್ಷಿತರಿಗೆ ಆನ್ ಲೈನ್ ಮೂಲಕ ತಾವಿದ್ದಲ್ಲಿಂದಲೇ ಈ ವರ್ಗಗಳಲ್ಲಿ ಪಾಲ್ಗೊಳ್ಳಲು ಅನುವು ಮಾಡಿಕೊಟ್ಟಿರುವುದರಿಂದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳು ದೊಡ್ಡ ಸಂಖ್ಯೆಯಲ್ಲಿ ಈ ಪ್ರಶಿಕ್ಷಣ ವರ್ಗಗಳಲ್ಲಿ ಸಕ್ರಿಯವಾಗಿ ಭಾಗಿಗಳಾದರು.

ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ ಎಸ್. ಕಲ್ಮಾಡಿ ಮತ್ತು ಸದಾನಂದ ಉಪ್ಪಿನಕುದ್ರು ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್ ಮತ್ತು ಪ್ರಶಿಕ್ಷಣ ಪ್ರಕೋಷ್ಠದ ಜಿಲ್ಲಾ ಸಂಚಾಲಕ ರಘುವೀರ್ ಶೆಣೈ ಯವರು ಇ-ಪ್ರಶಿಕ್ಷಣ ವರ್ಗದ ಯಶಸ್ವಿಗೆ ಶ್ರಮಿಸಿದ್ದರು.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

20 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

20 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

20 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

23 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

23 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

23 hours ago