ಉಡುಪಿ : 12 ಶತಮಾನದಲ್ಲಿ ನಡೆದ ಬಸವಣ್ಣನವರ ಸಾಮಾಜಿಕ ಚಳುವಳಿಯ ಮುಂದುವರಿದ ಪರಿವರ್ತನೆಯ ಭಾಗವಾಗಿ ಆಧುನಿಕ ಕನ್ನಡ ಸಾಹಿತ್ಯದ ದಲಿತ-ಬಂಡಾಯ ಸಾಹಿತ್ಯ ಚಳುವಳಿ ಡಾ.ಸಿದ್ದಲಿಂಗಯ್ಯರ ಮೂಲಕ ನೆಲೆ ಕಂಡಿದೆ ಎಂದು ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀ ಕೃಷ್ಣಮೂರ್ತಿ ಡಿ.ಬಿ. ತಿಳಿಸಿದರು.
ಇವರು ಭಾರತೀಯ ಜನತಾ ಪಾರ್ಟಿ ಉಡುಪಿ ಇದರ ಜಿಲ್ಲಾ ಹಾಗೂ ನಗರ ಎಸ್ ಸಿ ಮೋರ್ಚಾದ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾ ಬಿಜೆಪಿ ಎಸ್ ಸಿ ಮೋರ್ಚಾದ ಅಧ್ಯಕ್ಷರಾದ ಶ್ರೀ ಗೋಪಾಲ ಕಳೆಂಜಿ ಅವರ ಅಧ್ಯಕ್ಷತೆಯಲ್ಲಿ ನಡೆದ, ನಾಡೋಜ ಡಾ. ಸಿಧ್ಧಲಿಂಗಯ್ಯನವರಿಗೆ “ಕವಿ ನಮನ” ಕಾರ್ಯಕ್ರಮದಲ್ಲಿ ದಲಿತ ಕವಿ ಡಾ. ಸಿಧ್ಧಲಿಂಗಯ್ಯನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನಗಳನ್ನು ಸಲ್ಲಿಸಿ ನಾಡೋಜ ಡಾ. ಸಿಧ್ಧಲಿಂಗಯ್ಯ ಇವರ ಜೀವನ ಚರಿತ್ರೆ ಕುರಿತು ಮಾತನಾಡಿದರು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ಶ್ರೀ ನವೀನ್ ಶೆಟ್ಟಿ, ಉಡುಪಿ ಜಿ.ಪಂ. ನಿಕಟಪೂರ್ವ ಅಧ್ಯಕ್ಷ, ರಾಜ್ಯ ಬಿಜೆಪಿ ಎಸ್ ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರೀ ದಿನಕರ ಬಾಬು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ವೀಣಾ ಶೆಟ್ಟಿ, ಜಿಲ್ಲಾ ಎಸ್ ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀ ಸದಾನಂದ ಆರ್ ಕೈಪುಂಜಾಲು, ನಗರ ಎಸ್ ಸಿ ಮೋರ್ಚಾ ದ ಅಧ್ಯಕ್ಷರಾದ ಶ್ರೀ ಕಿರಣ್ ಕುತ್ಪಾಡಿ ಮೊದಲಾದವರು ಉಪಸ್ಥಿತರಿದ್ದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…