ಉಡುಪಿ : ಬಿ.ಜೆ.ಪಿ.ಯ ಪ್ರಕೋಷ್ಠಗಳು ಸಕ್ರಿಯವಾಗಿ ತೊಡಗಿಸಿಕೊಂಡಾಗ ಪಕ್ಷ ಸಂಘಟನೆಗೆ ಹೆಚ್ಚಿನ ಶಕ್ತಿ ತುಂಬಿದ0ತಾಗುತ್ತದೆ. ಪಕ್ಷದ ವಿವಿಧ ಘಟಕಗಳ ಚಟುವಟಿಕೆಗಳೆಲ್ಲವೂ ಪಕ್ಷದ ಸೇವೆಯೇ ಆಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ರಂಗಗಳನ್ನು ಪ್ರತಿನಿಧಿಸುವ ಎಲ್ಲ ೨೪ ಪ್ರಕೋಷ್ಠಗಳು ಸಕ್ರಿಯವಾಗಿ ಕಾರ್ಯೋನ್ಮುಖವಾಗಲಿ. ಪಕ್ಷದ ಕೆಲಸ ಕಾರ್ಯಗಳ ಮೂಲಕ ದೇಶದ ಸೇವೆ ಎಂಬ ಉದಾತ್ತ ಧ್ಯೇಯ ಇನ್ನಷ್ಟು ಸದೃಢವಾಗಲಿ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಬಿಜೆಪಿ ಜಿಲ್ಲಾ ಕಲೆ ಮತ್ತು ಸಾಂಸ್ಕçತಿಕ ಪ್ರಕೋಷ್ಠದ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸರಣಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಸರ್ಕಾರದ ವಿರುದ್ಧ ಬೃಹತ್ ಜನಧ್ವನಿ ಜಾಥಾ ಆರಂಭಿಸಿದ ಸಿದ್ದರಾಮಯ್ಯ – ಡಿಕೆಶಿ -Vishwanews24
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವೆನಿಸಿದ ಬಿಜೆಪಿಯಲ್ಲಿ ಸಂಘಟನೆಗಾಗಿ ವಿವಿಧ ಮಂಡಲ ಮೋರ್ಚಾ ಪ್ರಕೋಷ್ಠಗಳ ಮೂಲಕ ಬಹಳಷ್ಟು ಅವಕಾಶಗಳಿವೆ. ನಿರಂತರ ಚಟುವಟಿಕೆಗಳಿಂದ ಯಶಸ್ಸನ್ನು ಸಾಧಿಸಲು ಸಾಧ್ಯ. ಇಂದಿನ ತಾಂತ್ರಿಕ ಯುಗದಲ್ಲಿ ಕಲೆ, ಸಾಂಸ್ಕçತಿಕ ಕಾರ್ಯಕ್ರಮಗಳು ಒತ್ತಡಗಳ ನಡುವಿನ ಬದುಕಿನಲ್ಲಿ ಮನಸ್ಸಿಗೆ ತುಸು ಸಂತಸ ನೀಡುವ ವಾಹಕಗಳಾಗಿವೆ. ಈ ನಿಟ್ಟಿನಲ್ಲಿ ಪಕ್ಷ ಸಂಘಟನೆಯ ಜೊತೆಗೆ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸುತ್ತಿವ ಜಿಲ್ಲಾ ಕಲೆ ಮತ್ತು ಸಾಂಸ್ಕçತಿಕ ಪ್ರಕೋಷ್ಠದ ಮುಂದಿನ ಯೋಜನೆಗಳು ಫಲಪ್ರದವಾಗಲಿ ಎಂದು ಶುಭ ಹಾರೈಸಿದರು.
ಬಿಜೆಪಿ ಜಿಲ್ಲಾ ಕಲೆ ಮತ್ತು ಸಾಂಸ್ಕçತಿಕ ಪ್ರಕೋಷ್ಠದ ಸಂಚಾಲಕ ಗಣೇಶ್ ಬ್ರಹ್ಮಾವರ ಸ್ವಾಗತಿಸಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ವಿಜಯ ಕುಮಾರ್ ಉದ್ಯಾವರ ಹಾಗೂ ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು. ಜಿಲ್ಲಾ ಕಲೆ ಮತ್ತು ಸಾಂಸ್ಕçತಿಕ ಪ್ರಕೋಷ್ಠದ ಸಮಿತಿ ಸದಸ್ಯೆ ಶೃತಿ ಕಾಶಿ ಕಾರ್ಯಕ್ರಮ ನಿರೂಪಿಸಿದರು. ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು ವಂದಿಸಿದರು.
ಸಾAಸ್ಕçತಿಕ ಕಾರ್ಯಕ್ರಮಗಳ ಅಂಗವಾಗಿ ಮಾತೃ ಮಂಡಳಿ ಕಡಿಯಾಳಿ ತಂಡದಿAದ ಭಜನಾ ಕಾರ್ಯಕ್ರಮ ಮತ್ತು ಕಲಾರ್ಘ್ಯ ಉಡುಪಿ ತಂಡದಿAದ ನೃತ್ಯ ಸಂಗೀತ ವೈವಿಧ್ಯ ಕಾರ್ಯಕ್ರಮ ಜರಗಿತು.
ನಾವು ರಾಜಕಾರಣಿಗಳೆಂದು ಹೇಳಿಕೊಳ್ಳಲು ಅಸಹ್ಯವಾಗುತ್ತಿದೆ : ಡಿ.ಕೆ.ಶಿ -Vishwanews24
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ…