Featured

ಉಡುಪಿ: ಬಿಜೆಪಿ ಜಿಲ್ಲಾ ನೂತನ ಪದಾಧಿಕಾರಿಗಳ ಸಭೆ – ಜವಾಬ್ದಾರಿ ಅರಿತು ತಂಡವಾಗಿ ಕೆಲಸ ಮಾಡೋಣ: ಕಿಶೋರ್‌ ಕುಮಾರ್ – Vishwanews24

ಉಡುಪಿ: ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ನೂತನ ತಂಡ ರಚನೆ

ಎಲ್ಲರೂ ತಮ್ಮ ಜವಾಬ್ದಾರಿಯನ್ನು ಅರಿತು ಒಂದು ಉತ್ತಮ ತಂಡವಾಗಿ ಕೆಲಸ ಮಾಡಬೇಕಾಗಿದೆ : ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ

ಜಿಲ್ಲೆಯ ವಿಜಯ ಯಾತ್ರೆಯನ್ನು ಮುಂದುವರಿಸಲು ಅಧ್ಯಕ್ಷರೊಂದಿಗೆ ಕೈಜೋಡಿಸಿ : ಸುರೇಶ್ ನಾಯಕ್

ಉಡುಪಿ: ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ನೂತನ ತಂಡ ರಚನೆ ಆಗಿದೆ. ಜಿಲ್ಲಾ ಸಮಿತಿ ಮತ್ತು ಮಂಡಲ, ಮೋರ್ಚಾ, ಪ್ರಕೋಷ್ಠಗಳ ಸಹಿತ ಎಲ್ಲರೂ ತಮ್ಮ ಜವಾಬ್ದಾರಿಯನ್ನು ಅರಿತು ಒಂದು ಉತ್ತಮ ತಂಡವಾಗಿ ಕೆಲಸ ಮಾಡಬೇಕಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಹೇಳಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ನೂತನ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿದರು.

ಬಿಜೆಪಿ ಕಾರ್ಯಕರ್ತ ಆಧಾರಿತ ಪಕ್ಷ. ಕಾರ್ಯಕರ್ತರ ಸಮರ್ಪಣಾಭಾವದ ಸೇವೆ ಮತ್ತು ಪಕ್ಷದ ಸಂಘಟನಾ ಸಾಮರ್ಥ್ಯದಿಂದ ಬಿಜೆಪಿ ಇಂದು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದಿದೆ. ಪಕ್ಷದ ಚಟುವಟಿಕೆಗಳಿಗೆ ಆದ್ಯತೆ ಮೇರೆಗೆ ಸಮಯವನ್ನು ನೀಡಿ, ಪಕ್ಷ ಸಂಘಟನೆಯ ಜೊತೆಗೆ ಪಕ್ಷದ ಎಲ್ಲ ಅಭಿಯಾನಗಳನ್ನು ಸಮಯದ ಇತಿಮಿತಿಯೊಳಗೆ ಸಮರ್ಪಕವಾಗಿ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಬದ್ಧತೆಯಿಂದ ತೊಡಗಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಮಾತನಾಡಿ, ಜಿಲ್ಲೆಯಲ್ಲಿ ಒಳ್ಳೆಯ ತಂಡ ರಚನೆಯಾಗಿದೆ. ಚುನಾವಣಾ ಪರ್ವದ ಸನ್ನಿವೇಶದಲ್ಲಿ ಪದಾಧಿಕಾರಿಗಳು ಪಕ್ಷದ ಕಛೇರಿಗೆ ಭೇಟಿ ನೀಡಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಪರಿಪಾಠ ಅಗತ್ಯ. ರಾಜ್ಯ ಬಿಜೆಪಿ ನೀಡುವ ಕಾರ್ಯಕ್ರಮಗಳನ್ನು ಬದ್ಧತೆಯಿಂದ ಪೂರೈಸುವ ಜೊತೆಗೆ ಪಕ್ಷದ ನಿಗದಿತ ಸಭೆಗಳಿಗೆ ತಪ್ಪದೇ ಹಾಜರಾಗಿ ಸದೃಢ ಪಕ್ಷ ಸಂಘಟನೆಯ ಮೂಲಕ ಜಿಲ್ಲೆಯ ವಿಜಯ ಯಾತ್ರೆಯನ್ನು ಮುಂದುವರಿಸಲು ಅಧ್ಯಕ್ಷರೊಂದಿಗೆ ಕೈಜೋಡಿಸಿ ಬದ್ಧತೆಯಿಂದ ಶ್ರಮಿಸಬೇಕು ಎಂದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯಕುಮಾರ್ ಶೆಟ್ಟಿ ರಾಜ್ಯ ಬಿಜೆಪಿ ನೀಡಿರುವ ನಾಲ್ಕು ಅಭಿಯಾನಗಳಾದ ಗ್ರಾಮ ಚಲೋ, ಶಕ್ತಿ ವಂದನಾ, ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಮತ್ತು ಲಾಭಾರ್ತಿಗಳ ಸಮಾವೇಶದ ಕುರಿತು ವಿಸ್ತೃತ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ನೂತನ ಪದಾಧಿಕಾರಿಗಳು ಮತ್ತು ಮಂಡಲಗಳ ಅಧ್ಯಕ್ಷರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ. ರಾಘವೇಂದ್ರ ಕಿಣಿ ಸ್ವಾಗತಿಸಿ, ದಿನಕರ ಶೆಟ್ಟಿ ಹೆರ್ಗ ವಂದಿಸಿದರು. ರೇಷ್ಮಾ ಉದಯಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

5 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

5 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

5 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

5 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

5 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

6 hours ago