ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೆಲವೊಂದು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕರು ಸೇರಿದಂತೆ ಆಕಾಂಕ್ಷಿ ಅಭ್ಯರ್ಥಿಗಳು ಮುಂದಿನ ಚುನಾವಣೆಯ ದೃಷ್ಟಿಯಿಂದ ತಿರುಗಾಟ ಆರಂಭ ಮಾಡಿದ್ದು ಆದರೇ ಯಾರಿಗೂ ಕೂಡ ಇದುವರೆಗೆ ಟಿಕೆಟ್ ಕನ್ಫರ್ಮ್ ಮಾಡಿಕೊಟ್ಟಿಲ್ಲ ಮತ್ತು ಹೈಕಮಾಂಡ್ ಕಿವಿಯಲ್ಲೂ ಹೇಳಿಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಆಕಾಂಕ್ಷಿಗಳು ಕ್ಷೇತ್ರ ಪರ್ಯಟನೆ ಮಾಡುವುದು ತಪ್ಪಲ್ಲ ಆದರೇ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು ಮತ್ತು ಟಿಕೆಟ್ ಆಗಿದೆ ಎಂದು ಹೇಳಿಕೊಂಡು ತಿರುಗುವ ಮುಖೇನ ಕಾರ್ಯಕರ್ತರಲ್ಲಿ ತಳಮಳ ಉಂಟು ಮಾಡುವ ಕೆಲಸ ಆಗಬಾರದಾಗಿದೆ ಪಕ್ಷ ಸಂಘಟಿಸುವಲ್ಲಿ ಕೆಲಸ ಮಾಡಲಿ ಟಿಕೆಟ್ ಅವರನ್ನು ಹಿಂಬಾಲಿಸಿ ಬರುತ್ತದೆಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಜಾತಿ ಸಮೀಕರಣವನ್ನು ಪರಿಗಣಿಸಿಯೇ ಟಿಕೆಟ್ ನೀಡಬಹುದು ಅದರಲ್ಲೂ ಕಡಿಮೆ ಸಂಖ್ಯೆಯಿರುವ ಜಾತಿಗೂ ಕೂಡ ಈ ಸಲ ಟಿಕೆಟ್ ಸಿಗುವ ಸಾಧ್ಯತೆಯಿದೆ ಒಟ್ಟಾರೆ ಜಾತಿಗಿಂತಲೂ ಹಿಂದುತ್ವದ ಆಧಾರದಮೇಲೆ ಬಿಜೆಪಿ ಕೆಲಸ ಮಾಡುತ್ತದೆಂದರು.
ಜಿಲ್ಲೆಯಿಂದ ಇದುವರೆಗೂ ಆಕಾಂಕ್ಷಿಗಳ ಪಟ್ಟಿಯನ್ನು ರಾಜ್ಯದಿಂದ ಪಡೆದಿಲ್ಲ ಹಾಗಾಗಿ ಕಾರ್ಯಕರ್ತರು ಗೊಂದಲ ಮಾಡಿ ಕೊಳ್ಳುವ ಅಗತ್ಯವಿಲ್ಲ ಚುನಾವಣೆ ಘೋಷಣೆಯಾದ ನಂತರವಷ್ಟೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವುದು ಬಿಟ್ಟರೆ ಹೈಕಮಾಂಡ್ ಕಿವಿಯಲ್ಲಿ ಹೇಳುವುದು, ಚೀಟಿ ಬರೆದು ಕೊಡುವ ಸಂಪ್ರದಾಯ ಬಿಜೆಪಿಯಲ್ಲಿ ಇಲ್ಲ ಎಂದು ಖಡಕ್ ನುಡಿದರು.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …