ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೆಲವೊಂದು ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕರು ಸೇರಿದಂತೆ ಆಕಾಂಕ್ಷಿ ಅಭ್ಯರ್ಥಿಗಳು ಮುಂದಿನ ಚುನಾವಣೆಯ ದೃಷ್ಟಿಯಿಂದ ತಿರುಗಾಟ ಆರಂಭ ಮಾಡಿದ್ದು ಆದರೇ ಯಾರಿಗೂ ಕೂಡ ಇದುವರೆಗೆ ಟಿಕೆಟ್ ಕನ್ಫರ್ಮ್ ಮಾಡಿಕೊಟ್ಟಿಲ್ಲ ಮತ್ತು ಹೈಕಮಾಂಡ್ ಕಿವಿಯಲ್ಲೂ ಹೇಳಿಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಆಕಾಂಕ್ಷಿಗಳು ಕ್ಷೇತ್ರ ಪರ್ಯಟನೆ ಮಾಡುವುದು ತಪ್ಪಲ್ಲ ಆದರೇ ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು ಮತ್ತು ಟಿಕೆಟ್ ಆಗಿದೆ ಎಂದು ಹೇಳಿಕೊಂಡು ತಿರುಗುವ ಮುಖೇನ ಕಾರ್ಯಕರ್ತರಲ್ಲಿ ತಳಮಳ ಉಂಟು ಮಾಡುವ ಕೆಲಸ ಆಗಬಾರದಾಗಿದೆ ಪಕ್ಷ ಸಂಘಟಿಸುವಲ್ಲಿ ಕೆಲಸ ಮಾಡಲಿ ಟಿಕೆಟ್ ಅವರನ್ನು ಹಿಂಬಾಲಿಸಿ ಬರುತ್ತದೆಂದು ಅವರು ಹೇಳಿದರು.
ಜಿಲ್ಲೆಯಲ್ಲಿ ಜಾತಿ ಸಮೀಕರಣವನ್ನು ಪರಿಗಣಿಸಿಯೇ ಟಿಕೆಟ್ ನೀಡಬಹುದು ಅದರಲ್ಲೂ ಕಡಿಮೆ ಸಂಖ್ಯೆಯಿರುವ ಜಾತಿಗೂ ಕೂಡ ಈ ಸಲ ಟಿಕೆಟ್ ಸಿಗುವ ಸಾಧ್ಯತೆಯಿದೆ ಒಟ್ಟಾರೆ ಜಾತಿಗಿಂತಲೂ ಹಿಂದುತ್ವದ ಆಧಾರದಮೇಲೆ ಬಿಜೆಪಿ ಕೆಲಸ ಮಾಡುತ್ತದೆಂದರು.
ಜಿಲ್ಲೆಯಿಂದ ಇದುವರೆಗೂ ಆಕಾಂಕ್ಷಿಗಳ ಪಟ್ಟಿಯನ್ನು ರಾಜ್ಯದಿಂದ ಪಡೆದಿಲ್ಲ ಹಾಗಾಗಿ ಕಾರ್ಯಕರ್ತರು ಗೊಂದಲ ಮಾಡಿ ಕೊಳ್ಳುವ ಅಗತ್ಯವಿಲ್ಲ ಚುನಾವಣೆ ಘೋಷಣೆಯಾದ ನಂತರವಷ್ಟೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವುದು ಬಿಟ್ಟರೆ ಹೈಕಮಾಂಡ್ ಕಿವಿಯಲ್ಲಿ ಹೇಳುವುದು, ಚೀಟಿ ಬರೆದು ಕೊಡುವ ಸಂಪ್ರದಾಯ ಬಿಜೆಪಿಯಲ್ಲಿ ಇಲ್ಲ ಎಂದು ಖಡಕ್ ನುಡಿದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…