ಉಡುಪಿ

ಉಡುಪಿ: ಬಿಜೆಪಿ ಟಿಕೆಟ್ ಗಾಗಿ ದೇವರ ಪಾದ ಹಿಡಿದ ರಘುಪತಿ ಭಟ್ ಬೆಂಬಲಿಗರು

ಉಡುಪಿ, : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಈಗಾಗಲೇ ಪ್ರಕಟಿಸಿರುವ ಎರಡನೇ ಪಟ್ಟಿಯಲ್ಲೂ ಸ್ಥಾನ ಪಡೆಯಲು ವಿಫಲವಾಗಿರುವ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪರವಾಗಿ ಅವರ ಅಭಿಮಾನಿಗಳು, ಬೆಂಬಲಿಗರು ಹಾಗೂ ಕುಟುಂಬಸ್ಥರು, ಉಡುಪಿ ಕ್ಷೇತ್ರದಿಂದ ಸ್ಪರ್ಧಿಸಲು ಮೂರನೇ ಪಟ್ಟಿಯಲ್ಲಾದರೂ ಸ್ಥಾನ ಪಡೆಯಲು ಇದೀಗ ಉಡುಪಿಯ ವಿವಿಧ ದೇವರುಗಳ ಮೊರೆ ಹೋಗಿದ್ದಾರೆ.

ಉಡುಪಿ ಕ್ಷೇತ್ರದ ಕಾರ್ಯಕರ್ತರ ಹಾಗೂ ಬಿಜೆಪಿ ಪದಾಧಿಕಾರಿಗಳ ಒಮ್ಮತದ ಅಭ್ಯರ್ಥಿಯಾಗಿರುವ ಕೆ.ರಘುಪತಿ ಭಟ್ ಅವರಿಗೆ ಉಡುಪಿಯಿಂದ ಟಿಕೆಟ್‌ ಗ್ಯಾರಂಟಿ ಎಂದೇ ಭಾವಿಸಲಾಗಿತ್ತು. ಆದರೆ ಈವರೆಗೆ ಬಿಜೆಪಿ ಹೈಕಮಾಂಡ್ ಪ್ರಕಟಿಸಿರುವ ಎರಡು ಪಟ್ಟಿಯಲ್ಲೂ ಉಡುಪಿಗೆ ಅಭ್ಯರ್ಥಿ ಹೆಸರನ್ನು ಘೋಷಿಸದಿರುವುದರಿಂದ ಭಟ್‌ರ ಅಭಿಮಾನಿಗಳು ಆತಂಕಕ್ಕೊಳಗಾಗಿದ್ದಾರೆ. ಇದರಿಂದ ಇನ್ನು ರಘುಪತಿ ಭಟ್ ಅವರಿಗೆ ಟಿಕೆಟ್‌ ದೊರೆಯುವ ಅವಕಾಶ ಕ್ಷೀಣ ಎಂದು ಭಾವಿಸಿರುವ ಅವರು, ಕೊನೆಯ ಅಸ್ತ್ರವಾಗಿ ಈಗ ಟಿಕೆಟ್‌ಗಾಗಿ ನೇರವಾಗಿ ದೇವರಿಗೆ ಮೊರೆ ಹೋಗಿದ್ದಾರೆ.

ಅವರ ಅಭಿಮಾನಿಗಳು, ಬೆಂಬಲಿಗರು ಅಲ್ಲದೇ ಬಿಜೆಪಿ ಯುವ ಮೋರ್ಚಾ, ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಂಘ, ಉಡುಪಿ ಜಿಲ್ಲಾ ಹವ್ಯಕ ಸಭಾದ ಪದಾಧಿಕಾರಿಗಳು ಇಂದು ಉಡುಪಿಯಲ್ಲಿ ಶ್ರೀಅನಂತೇಶ್ವರ, ಶ್ರೀಚಂದ್ರ ಮೌಳೀಶ್ವರ ಹಾಗೂ ಉಡುಪಿ ಶ್ರೀಕೃಷ್ಣ ಮುಖ್ಯಪ್ರಾಣರಿಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿ, ರಘುಪತಿ ಭಟ್ ಅವರಿಗೆ ಟಿಕೇಟ್‌ನ್ನು ಖಚಿತ ಪಡಿಸುವುದರೊಂದಿಗೆ, ಅವರು ಭಾರೀ ಬಹುಮತದಿಂದ ಗೆದ್ದುಬರುವಂತೆ ಪ್ರಾರ್ಥಿಸಿದರು. ಬಿಜೆಪಿಯ ಕಾರ್ಯಕರ್ತರೊಂದಿಗೆ ರಘುಪತಿ ಭಟ್ ಅವರ ತಾಯಿ ಸರಸ್ವತಿ ಬಾರಿತ್ತಾಯ, ಪತ್ನಿ ಶಿಲ್ಪ ರಘುಪತಿ, ಪುತ್ರ ರಿಹಾಂಶು, ಸಹೋದರ ರಮೇಶ್ ಬಾರಿತ್ತಾಯ ಸಹ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.

ಇದರೊಂದಿಗೆ ಮಲ್ಪೆ ವಡಬಾಂಡೇಶ್ವರದ ಬಲರಾಮ ದೇವಸ್ಥಾನ ಹಾಗೂ ಬ್ರಹ್ಮಾವರದ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲೂ ಆಯಾ ಭಾಗಗಳ ಬಿಜೆಪಿ ಕಾರ್ಯಕರ್ತರು, ಯುವಮೋರ್ಚಾ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿ ತಮ್ಮ ನಾಯಕನಿಗೆ ಟಿಕೇಟ್‌ನ್ನು ಖಾತ್ರಿಪಡಿಸಲು ಕೋರಿಕೆ ಸಲ್ಲಿಸಿದರು.

ಉಡುಪಿ ಶ್ರೀಕೃಷ್ಣ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಉಪಾಧ್ಯಕ್ಷ ರಾಘವೇಂದ್ರ ಕಿಣಿ, ನಮ್ಮೆಲ್ಲರ ಒಮ್ಮತದ ಅಭ್ಯರ್ಥಿಯಾಗಿರುವ ರಘುಪತಿ ಭಟ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗುವ ವಿಶ್ವಾಸವಿದ್ದು, ಇದಕ್ಕೆ ಪೂರಕವಾಗಿ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಕೃಷ್ಣ, ಅನಂತೇಶ್ವರ, ಚಂದ್ರವೌಳೀಶ್ವರನ ಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಭಟ್‌ರಿಗೆ ಟಿಕೆಟ್ ಸಿಗುವಂತೆ, ಶಾಸಕರಾಗಿ ಆಯ್ಕೆಯಾಗಿ ಉಡುಪಿ ಜನತೆಯ ಸೇವೆ ಅವಕಾಶ ಸಿಗಲಿ ಎಂದು ಪ್ರಾರ್ಥಿಸಿಕೊಂಡಿದ್ದೇವೆ ಎಂದರು.

ಈ ಸಂದರ್ಭ ಪಕ್ಷದ ಹಿರಿಯರಾದ ಬಿ.ಸೋಮಶೇಖರ್ ಭಟ್, ವಿಶ್ವನಾಥ ಭಟ್, ಜಿಪಂ ಅಧ್ಯಕ್ಷ ದಿನಕರಬಾಬು, ಶ್ರೀಶ ನಾಯಕ್, ಶರತ್, ಮಹೇಶ್ ಠಾಕೂರ್, ಪ್ರಭಾಕರ ಪೂಜಾರಿ, ವಾಸುದೇವ ಭಟ್ ಪೆರಂಪಳ್ಳಿ, ರಶ್ಮಿತಾ ಬಾಲಕೃಷ್ಣ, ಗೀತಾ ಸೇಟ್, ಮಂಜುನಾಥ ಉಪಾಧ್ಯ, ಶ್ರೀನಿವಾಸ ಬಲ್ಲಾಳ್, ಸದಾಶಿವ ರಾವ್, ವಿಠಲ ಕರ್ಕೇರ, ನಾಗೇಶ್ ಸಾಲ್ಯಾನ್, ಯೋಗೀಶ್ ಮಲ್ಪೆ ಮುಂತಾದವರು ಉಪಸ್ಥಿತರಿದ್ದರು.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

2 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

4 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

5 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

5 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

5 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

5 hours ago