ಉಡುಪಿ

ಉಡುಪಿ: ಬಿಜೆಪಿ ಟಿಕೆಟ್ ಗಾಗಿ ದೇವರ ಪಾದ ಹಿಡಿದ ರಘುಪತಿ ಭಟ್ ಬೆಂಬಲಿಗರು

ಉಡುಪಿ, : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಈಗಾಗಲೇ ಪ್ರಕಟಿಸಿರುವ ಎರಡನೇ ಪಟ್ಟಿಯಲ್ಲೂ ಸ್ಥಾನ ಪಡೆಯಲು ವಿಫಲವಾಗಿರುವ ಮಾಜಿ ಶಾಸಕ ಕೆ.ರಘುಪತಿ ಭಟ್ ಅವರ ಪರವಾಗಿ ಅವರ ಅಭಿಮಾನಿಗಳು, ಬೆಂಬಲಿಗರು ಹಾಗೂ ಕುಟುಂಬಸ್ಥರು, ಉಡುಪಿ ಕ್ಷೇತ್ರದಿಂದ ಸ್ಪರ್ಧಿಸಲು ಮೂರನೇ ಪಟ್ಟಿಯಲ್ಲಾದರೂ ಸ್ಥಾನ ಪಡೆಯಲು ಇದೀಗ ಉಡುಪಿಯ ವಿವಿಧ ದೇವರುಗಳ ಮೊರೆ ಹೋಗಿದ್ದಾರೆ.

ಉಡುಪಿ ಕ್ಷೇತ್ರದ ಕಾರ್ಯಕರ್ತರ ಹಾಗೂ ಬಿಜೆಪಿ ಪದಾಧಿಕಾರಿಗಳ ಒಮ್ಮತದ ಅಭ್ಯರ್ಥಿಯಾಗಿರುವ ಕೆ.ರಘುಪತಿ ಭಟ್ ಅವರಿಗೆ ಉಡುಪಿಯಿಂದ ಟಿಕೆಟ್‌ ಗ್ಯಾರಂಟಿ ಎಂದೇ ಭಾವಿಸಲಾಗಿತ್ತು. ಆದರೆ ಈವರೆಗೆ ಬಿಜೆಪಿ ಹೈಕಮಾಂಡ್ ಪ್ರಕಟಿಸಿರುವ ಎರಡು ಪಟ್ಟಿಯಲ್ಲೂ ಉಡುಪಿಗೆ ಅಭ್ಯರ್ಥಿ ಹೆಸರನ್ನು ಘೋಷಿಸದಿರುವುದರಿಂದ ಭಟ್‌ರ ಅಭಿಮಾನಿಗಳು ಆತಂಕಕ್ಕೊಳಗಾಗಿದ್ದಾರೆ. ಇದರಿಂದ ಇನ್ನು ರಘುಪತಿ ಭಟ್ ಅವರಿಗೆ ಟಿಕೆಟ್‌ ದೊರೆಯುವ ಅವಕಾಶ ಕ್ಷೀಣ ಎಂದು ಭಾವಿಸಿರುವ ಅವರು, ಕೊನೆಯ ಅಸ್ತ್ರವಾಗಿ ಈಗ ಟಿಕೆಟ್‌ಗಾಗಿ ನೇರವಾಗಿ ದೇವರಿಗೆ ಮೊರೆ ಹೋಗಿದ್ದಾರೆ.

ಅವರ ಅಭಿಮಾನಿಗಳು, ಬೆಂಬಲಿಗರು ಅಲ್ಲದೇ ಬಿಜೆಪಿ ಯುವ ಮೋರ್ಚಾ, ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಂಘ, ಉಡುಪಿ ಜಿಲ್ಲಾ ಹವ್ಯಕ ಸಭಾದ ಪದಾಧಿಕಾರಿಗಳು ಇಂದು ಉಡುಪಿಯಲ್ಲಿ ಶ್ರೀಅನಂತೇಶ್ವರ, ಶ್ರೀಚಂದ್ರ ಮೌಳೀಶ್ವರ ಹಾಗೂ ಉಡುಪಿ ಶ್ರೀಕೃಷ್ಣ ಮುಖ್ಯಪ್ರಾಣರಿಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿ, ರಘುಪತಿ ಭಟ್ ಅವರಿಗೆ ಟಿಕೇಟ್‌ನ್ನು ಖಚಿತ ಪಡಿಸುವುದರೊಂದಿಗೆ, ಅವರು ಭಾರೀ ಬಹುಮತದಿಂದ ಗೆದ್ದುಬರುವಂತೆ ಪ್ರಾರ್ಥಿಸಿದರು. ಬಿಜೆಪಿಯ ಕಾರ್ಯಕರ್ತರೊಂದಿಗೆ ರಘುಪತಿ ಭಟ್ ಅವರ ತಾಯಿ ಸರಸ್ವತಿ ಬಾರಿತ್ತಾಯ, ಪತ್ನಿ ಶಿಲ್ಪ ರಘುಪತಿ, ಪುತ್ರ ರಿಹಾಂಶು, ಸಹೋದರ ರಮೇಶ್ ಬಾರಿತ್ತಾಯ ಸಹ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.

ಇದರೊಂದಿಗೆ ಮಲ್ಪೆ ವಡಬಾಂಡೇಶ್ವರದ ಬಲರಾಮ ದೇವಸ್ಥಾನ ಹಾಗೂ ಬ್ರಹ್ಮಾವರದ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲೂ ಆಯಾ ಭಾಗಗಳ ಬಿಜೆಪಿ ಕಾರ್ಯಕರ್ತರು, ಯುವಮೋರ್ಚಾ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿ ತಮ್ಮ ನಾಯಕನಿಗೆ ಟಿಕೇಟ್‌ನ್ನು ಖಾತ್ರಿಪಡಿಸಲು ಕೋರಿಕೆ ಸಲ್ಲಿಸಿದರು.

ಉಡುಪಿ ಶ್ರೀಕೃಷ್ಣ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಉಪಾಧ್ಯಕ್ಷ ರಾಘವೇಂದ್ರ ಕಿಣಿ, ನಮ್ಮೆಲ್ಲರ ಒಮ್ಮತದ ಅಭ್ಯರ್ಥಿಯಾಗಿರುವ ರಘುಪತಿ ಭಟ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗುವ ವಿಶ್ವಾಸವಿದ್ದು, ಇದಕ್ಕೆ ಪೂರಕವಾಗಿ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಕೃಷ್ಣ, ಅನಂತೇಶ್ವರ, ಚಂದ್ರವೌಳೀಶ್ವರನ ಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಭಟ್‌ರಿಗೆ ಟಿಕೆಟ್ ಸಿಗುವಂತೆ, ಶಾಸಕರಾಗಿ ಆಯ್ಕೆಯಾಗಿ ಉಡುಪಿ ಜನತೆಯ ಸೇವೆ ಅವಕಾಶ ಸಿಗಲಿ ಎಂದು ಪ್ರಾರ್ಥಿಸಿಕೊಂಡಿದ್ದೇವೆ ಎಂದರು.

ಈ ಸಂದರ್ಭ ಪಕ್ಷದ ಹಿರಿಯರಾದ ಬಿ.ಸೋಮಶೇಖರ್ ಭಟ್, ವಿಶ್ವನಾಥ ಭಟ್, ಜಿಪಂ ಅಧ್ಯಕ್ಷ ದಿನಕರಬಾಬು, ಶ್ರೀಶ ನಾಯಕ್, ಶರತ್, ಮಹೇಶ್ ಠಾಕೂರ್, ಪ್ರಭಾಕರ ಪೂಜಾರಿ, ವಾಸುದೇವ ಭಟ್ ಪೆರಂಪಳ್ಳಿ, ರಶ್ಮಿತಾ ಬಾಲಕೃಷ್ಣ, ಗೀತಾ ಸೇಟ್, ಮಂಜುನಾಥ ಉಪಾಧ್ಯ, ಶ್ರೀನಿವಾಸ ಬಲ್ಲಾಳ್, ಸದಾಶಿವ ರಾವ್, ವಿಠಲ ಕರ್ಕೇರ, ನಾಗೇಶ್ ಸಾಲ್ಯಾನ್, ಯೋಗೀಶ್ ಮಲ್ಪೆ ಮುಂತಾದವರು ಉಪಸ್ಥಿತರಿದ್ದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago