Featured

ಉಡುಪಿ:  ಬಿಜೆಪಿ ದೇಶದ ಅತ್ಯಂತ ಭ್ರಷ್ಟ ಸರ್ಕಾರ ಎಂದು ಹೇಳಲಾಗುತ್ತಿದ್ದು ಇದು ಸಾಬೀತಾಗಿದೆ : ಪ್ರಸಾದ್ ರಾಜ್ ಕಾಂಚನ್ – Vishwanews24

ಉಡುಪಿ:  ಬಿಜೆಪಿ ದೇಶದ ಅತ್ಯಂತ ಭ್ರಷ್ಟ ಸರ್ಕಾರ ಎಂದು ಹೇಳಲಾಗುತ್ತಿದ್ದು ಇದು ಸಾಬೀತಾಗಿದೆ : ಪ್ರಸಾದ್ ರಾಜ್ ಕಾಂಚನ್

ಉಡುಪಿ: ಬಿಜೆಪಿ ಮುಖಂಡರು ವಿಧಾನ ಸೌಧವನ್ನು ವ್ಯಾಪಾರ ಸೌಧ ಮಾಡಿರುವಾಗ ಅಮಿತ್ ಶಾ ರವರು ಕರ್ನಾಟಕಕ್ಕೆ ಬಂದು ಕಾಂಗ್ರೆಸ್ ಪಕ್ಷದೊಂದಿಗೆ ದಾಖಲೆ ಕೇಳಲು ಯಾವ ನೈತಿಕತೆ ಇದೆ ಎಂದು ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಪ್ರಶ್ನಿಸಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ಅಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ ಪ್ರಶಾಂತ್ ನಿಯೋಜನೆಯ ಮೇರೆಗೆ ಬೆಂಗಳೂರು ಜಲಮಂಡಳಿಯಲ್ಲಿ ಮುಖ್ಯ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತಿದ್ದ ಕೆ ಎಸ್ ಡಿ ಎಲ್ ಗೆ ರಾಸಾಯನಿಕ ಪೂರೈಕೆ ಆಯ್ಕೆಯಾಗಿರುವ ಗುತ್ತಿಗೆದಾರರಿಂದ 80ಲಕ್ಷ ರೂ ಲಂಚದ ಬೇಡಿಕೆ ಇಟ್ಟಿದ್ದ ಎಂದು ಆರೋಪ ಕೇಳಿ ಬಂದಿದೆ, ಬಿಜೆಪಿ ಸರ್ಕಾರದಲ್ಲಿ ವಿಧಾನಸೌದ ವ್ಯಾಪಾರ ಸೌದವಾಗಿದೆ ಎಂದು ಕಾಂಗ್ರೆಸ್ ಹೇಳುತ್ತ ಬಂದರೂ ಈ ಬಗ್ಗೆ ಸಾಕ್ಷಿ ಏನಿದೆ ಎಂದು ಸರ್ಕಾರ ಆರೋಪವನ್ನು ತಿರಸ್ಕರಿಸುತ್ತಾ ಬಂದಿತ್ತು.

ದೇಶದ ಅತ್ಯಂತ ಭ್ರಷ್ಟ ಸರ್ಕಾರ ಎಂದು ಹೇಳಲಾಗುತ್ತಿದು ಇದು ಸಾಬೀತಾಗಿದೆ, ನೋಟು ರದ್ದತಿ ಮಾಡಿ ಹಣ ನಿರ್ಮೂಲನ ಮಾಡಿದ್ದೇವೆ ಎನ್ನುವ ಬಿಜೆಪಿ ಮುಖಂಡರಲ್ಲಿಯೇ ಇಷ್ಟೊಂದು ಹಣ ಇರಲು ಹೇಗೆ ಸಾಧ್ಯ ಮುಂದುವರೆದ ದಾಳಿಯಿಂದ 6 ಕೋಟಿ ಹೆಚ್ಚುವರಿಯಾಗಿ ಸಿಕ್ಕಿದೆ ಇವರ ಬಳಿಯೇ ಇಷ್ಟು ಸಿಗಬೇಕಾದರೆ ಇವರಿಂದ ಉನ್ನತ ಮಟ್ಟದಲ್ಲಿ ಇರುವವರ ಬಳಿ ಎಷ್ಟಿರಬೇಡ.

ಡಿಮಾನಿಟೈಸೆನ್ ನಂತರ ನಗದು ವ್ಯವಹಾರ ಎಲ್ಲಾ ರದ್ದಾಗಿದೆ, ಭ್ರಷ್ಟಾಚಾರ ಬುಡಸಮೇತ ಕಿತ್ತೊಗಿದೆ ಎಂದೆಲ್ಲಾ ಬುರುಡೆ ಬಿಡುತ್ತಿದರು, ಬಿಜೆಪಿ ಮುಖಂಡರ ಮನೆ ಹಾಗೂ ಕಚೇರಿಗಳಲ್ಲಿ 8ಕೋಟಿಗಿಂತಲೂ ಹೆಚ್ಚು ಭ್ರಷ್ಟಾಚಾರದ ಹಣ ಸಿಕ್ಕಿದೆ, ಕೆಲದಿನಗಳ ಹಿಂದೆ ರಾಜ್ಯಕೆ ಬಂದಿದ್ದ ಅಮಿತ್ ಶಾ ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಇನೊಂದು ಅವಕಾಶ ಕೊಡಿ ಅಂತ ಕೇಳಿದ್ದು ಈ ಅವಧಿಯಲ್ಲಿ ಸರ್ಕಾರದಲ್ಲಿ ಭ್ರಷ್ಟಾಚಾರ ಇತ್ತು ಎಂದು ಒಪ್ಪಿದಂತೆ ಆಗಿದೆ.

ಬಿಜೆಪಿ ಶಾಸಕ ಮಾಡಳ ವಿರೂಪಾಕ್ಷಪ್ಪಾ ಪುತ್ರ ಪ್ರಶಾಂತ್ ಮನೆಯಲ್ಲಿ 1.62ಕೋಟಿ ಹಣ ಪತ್ತೆಯಾಗಿದ್ದು ನಿಜವಾಗಿಯೂ ಸರ್ಕಾರ 40% ಕಮಿಷನ್ ಪಡೆಯುತ್ತಿರುವುದು ಸಾಬೀತಾಗಿದೆ, ಸರ್ಕಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪ್ರಶಾಂತ್ ಮಾಡಳ್ ಸೇರಿದಂತೆ ಐವರನ್ನು ಬಂಧಿಸಿದ್ದಾರೆ, ಬಿಜೆಪಿ ಮುಖಂಡರು ವಿಧಾನ ಸೌಧವನ್ನು ವ್ಯಾಪಾರಸೌಧ ಮಾಡಿರುವಾಗ ಅಮಿತ್ ಶಾ ರವರು ಕರ್ನಾಟಕಕ್ಕೆ ಬಂದು ಕಾಂಗ್ರೆಸ್ ಪಕ್ಷದೊಂದಿಗೆ ದಾಖಲೆ ಕೇಳಲು ಯಾವುದೇ ನೈತಿಕತೆ ಇಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

14 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

15 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

16 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

17 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

17 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

17 hours ago