ಉಡುಪಿ: ಕಾಂಚನ್ ಎನ್ನುವುದು ಕರಾವಳಿ ತಡಿಯ ಉಡುಪಿಯ ಶ್ರಮ ಜೀವಿಗಳಾದ ಮೊಗವೀರ ಸಮುದಾಯದ ಹೆಮ್ಮೆಯ ಕುಲನಾಮ. ಇಲ್ಲಿ ಕಾಂಚನ್ ಮೂಲ ಸ್ಥಾನ ಕೂಡ ಹೊಂದಿದೆ. ಆದರೆ ನಮ್ಮ ಕುಲನಾಮವನ್ನು ಉಡುಪಿ ಬಿಜೆಪಿಯ ಬೆಂಬಲಿಗರು ಸೋಷಿಯಲ್ ಮೀಡಿಯಾದಲ್ಲಿ ವಿಕಾರವಾಗಿ ತಿರುಚಿ ಇಡೀ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಿದ್ದಾರೆ ದಯವಿಟ್ಟು ಸಮಾಜ ಭಾಂಧವರು ವಿಚಲಿತರಾಗದೇ ಶಾಂತಿಯುತ ವಾಗಿ ಇರಬೇಕೆಂದು ಇಡೀ ಸಮಾಜದ ಪರವಾಗಿ ರಮೇಶ್ ಕಾಂಚನ್ ರವರು ವಿನಂತಿಸಿ ಕೊಂಡಿದ್ದಾರೆ.
ಕೈ ಲಾಗದವರ ಕೊನೆಯ ಅಸ್ತ್ರ ಅಪಪ್ರಚಾರ. ಗೆಲ್ಲುವ ಅಮಲಿನಲ್ಲಿದ್ದ ಬಿಜೆಪಿ ನಾಯಕರು ಪ್ರಸಾದ್ ರಾಜ್ ಕಾಂಚನ್ ಗೆ ದೊರಕುತ್ತಾ ಇರುವ ಅಭೂತಪೂರ್ವ ಜನ ಬೆಂಬಲ ಕಂಡು ಕಂಗಲಾಗಿದ್ದಾರೆ. ಯಾರನ್ನೂ ಟೀಕಿಸದೇ, ಕೇವಲ ಉಡುಪಿಯ ಪ್ರಗತಿ ಬಗ್ಗೆ ಮಾತಡುತ್ತಾ, ತನ್ನಲ್ಲಿದ್ದ ದೂರದೃಷ್ಟಿತ್ವ ಯೋಜನೆಗಳಿಂದ ಜನರನ್ನು ಪ್ರಸಾದ್ ಆಕರ್ಷಣೆ ಮಾಡುವದನ್ನು ಕಂಡ ಬಿಜೆಪಿಯ ಬುಡಕ್ಕೆ ಬೆಂಕಿ ಬಿದ್ದಿದೆ.
ಮೊನ್ನೆ ಮೊನ್ನೆವರೆಗೂ ದುರ್ಬಲ ಅಭ್ಯರ್ಥಿ ಎನ್ನುತ್ತಿದ್ದವರು ಇದೀಗ ಪ್ರಸಾದ್ ರಾಜ್ ಕಾಂಚನ್ ವಿರುದ್ದ ಬೇರೆ ಬೇರೆ ರೀತಿಯಲ್ಲಿ ನಾಲಿಗೆ ಹರಿ ಬಿಡಲು ಶುರು ಮಾಡಿದ್ದಾರೆ. ಇದೀಗ ಪ್ರಸಾದ್ ರಾಜ್ ಕಾಂಚನ್ ರ ಫೋಟೋಗಳನ್ನು ತಿರುಚಿ ಫೋಟೊಗಳನ್ನು ಎಡಿಟ್ ಮಾಡೋಕೆ ಶುರು ಮಾಡಿ, ಸಾಮಾಜಿಕ ಜಾಲತಾಣ ದಲ್ಲಿ ಹಂಚಿ ಕೊಳ್ಳುತ್ತಿರುವುದನ್ನು ರಮೇಶ್ ರವರು ಕಟುವಾಗಿ ಖಂಡಿಸಿದ್ದಾರೆ
ಸರ್ವ ಧರ್ಮಗಳನ್ನು ಗೌರವಿಸುವ ಪ್ರಸಾದ್ ಕಾಂಚನ್ ಯಾರೊಬ್ಬರನ್ನು ನೋವಿಸಿಲ್ಲ ,ಯಾರ ಕುರಿತೂ ಟೀಕೆಯನ್ನೂ ಮಾಡಿಲ್ಲ.ಆದರೆ ಪ್ರಸಾದ್ ರಾಜ್ ಕಾಂಚನ್ ರನ್ನು, ಅವರ ಕುಲ ನಾಮ ವನ್ನು, ಸಮುದಾಯವನ್ನು ತೇಜೋವಧೆ ಮಾಡಲು ಮುಂದಾಗಿದ್ದಾರೆ. ಬಿಜೆಪಿಯ ಹತಾಶ ಮನೊಸ್ಥಿತಿಯಿಂದ ಇಡೀ ಕಾಂಚನ್ ಸಮುದಾಯವನ್ನೇ ಅವಮಾನ ಮಾಡಿರುವುದು ನೋವಿನ ಸಂಗತಿಯಾಗಿದೆ.
ಮೊಗವೀರ ಕುಟುಂಬದ ಕಾಂಚನ್ ಮೂಲ ಕುಟುಂಬದ ಪ್ರಸಾದ್ ರ ಫೊಟೊ ತಿರುಚಿದ್ದು ಇಡೀ ಮೊಗವೀರ ಸಮುದಾಯಕ್ಕೆ ಅವಮಾನವಾಗಿದೆ. ಉಚ್ಚಿಲ ಮಹಾಲಕ್ಷ್ಮೀ ದೇವಾಲಯದ ಅಭಿವೃದ್ದಿ ಸಮಿತಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ತೆಂಕ ಬಡಾನಿಡಿಯೂರು ದೇವಾಲಯದ ನಿರ್ಮಾಣದ ಉಸ್ತುವಾರಿ ಮಾಡಿದ್ದ ಕಾಂಚನ್ ಒರ್ವ ಹನುಮ ಭಕ್ತ, ಮುಖ್ಯಪ್ರಾಣ ದೇವರ ಅರಾಧಕ.
ಒಬ್ಬ ಸಜ್ಜನ ಮೊಗವೀರ ಸಮುದಾಯದ ವ್ಯಕ್ತಿ. ರಾಜಕೀಯವಾಗಿ ಟೀಕೆಗಳನ್ನು ಸಹಿಸಿಕೊಳ್ಳಬಹುದು ಅದ್ರೆ ಮೋಗವೀರ ಸಮುದಾಯ ಕಾಂಚನ್ ಪದವನ್ನು ಅವಮಾನಿಸುವ ಮೂಲಕ ಮೋಗವೀರರ ಮನ ನೋವಿಸುವ ಕೆಲಸಕ್ಕೆ ಕೈ ಹಾಕಿದ್ದಕ್ಕೆ ಬಿಜೆಪಿ ಭಾರೀ ಬೆಲೆ ತೆರಬೇಕಾಗಿ ಬರಬಹುದು ಎಂಬ ಎಚ್ಚರಿಕೆಯನ್ನು ರಮೇಶ್ ಕಾಂಚನ್ ನೀಡಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…